AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ವಾಟರ್​ಪಾರ್ಕ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ

ಅಮೆರಿಕದ ವಾಟರ್​ಪಾರ್ಕ್​ನಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಬಳಿಕ ಆತನ ಶವವೂ ಪತ್ತೆಯಾಗಿದೆ, ಘಟನೆಯಲ್ಲಿ ಮಕ್ಕಳು ಸೇರಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಮೆರಿಕ: ವಾಟರ್​ಪಾರ್ಕ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ
Image Credit source: India TV
ನಯನಾ ರಾಜೀವ್
|

Updated on: Jun 16, 2024 | 12:04 PM

Share

ಅಮೆರಿಕದ ಮಿಚಿಗನ್ ರಾಜ್ಯದ ಅತಿದೊಡ್ಡ ನಗರವಾದ ಡೆಟ್ರಾಯಿಟ್​ ಬಳಿಯ ವಾಟರ್​ಪಾರ್ಕ್​ನಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ. ರೋಷೆಸ್ಟರ್​ ಹಿಲ್ಸ್​ನ ಚಿಲ್ಡ್ರನ್ ವಾಟರ್ ಪಾ್ಕ್​ನಲ್ಲಿ ಈ ದಾಳಿ ನಡೆದಿದೆ.

ಓಕ್ಲ್ಯಾಂಡ್​ ಕೌಂಟಿಯಲ್ಲಿ ಆರೋಪಿ ಗುಂಡಿನ ದಾಳಿಯ ನಂತರ ಹತ್ತಿರದ ಮನೆಯೊಂದರಲ್ಲಿ ಅಡಗಿಕುಳಿತಿದ್ದ. ಪೊಲೀಸರು ಮನೆಯನ್ನು ಸುತ್ತುವರೆದು ಒಳಗೆ ಪ್ರವೇಶಿಸಿದಾಗ ಶಂಕಿತ ವ್ಯಕ್ತಿಯ ಶವ ಅಲ್ಲಿ ಇತ್ತು. ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.

ಶನಿವಾರ ಸಂಜೆ 5ಗಂಟೆ ವೇಳೆಗೆ ರೋಚೆಸ್ಟರ್​ ಹಿಲ್ಸ್​ನ ಆಬರ್ನ್​ ಸ್ಪ್ಲಾಶ್​ ಪ್ಯಾಡ್​ಗೆ ಆಗಮಿಸಿದ್ದ ಆರೋಪಿ ತನ್ನ ವಾಹನದಿಂದ ಇಳಿದು ಗುಂಡು ಹಾರಿಸಲು ಶುರು ಮಾಡಿದ್ದ, 9 ಎಂಎಂ ಸೆಮಿ ಆಟೋಮ್ಯಾಟಿಕ್ ಗ್ಲಾಕ್​ನಿಂದ 28 ಸುತ್ತು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಘಟನಾ ಸ್ಥಳದಿಂದ ಬಂದೂಕು ಹಾಗೂ ಮೂರು ಖಾಲಿ ಮ್ಯಾಗಜೀನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂದೂಕಿನಿಂದ ಗುಂಡಿನ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಸದ್ಯ ಪೊಲೀಸರು ಘಟನಾ ಸ್ಥಳದಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ, ಅಪಾಯ ಇನ್ನೂ ಇದೆ ಎಂದಿದ್ದಾರೆ. 2021ರಲ್ಲಿ ರೋಚೆಸ್ಟರ್​ ಹಿಲ್ಸ್​ನ ಉತ್ತರಕ್ಕೆ 15 ಮೈಲುಗಳಷ್ಟು ದೂರದಲ್ಲಿರುವ ಆಕ್ಸ್​ಫರ್ಡ್​ನ ಹೈಸ್ಕೂಲ್​ನಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ