AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ವಾಟರ್​ಪಾರ್ಕ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ

ಅಮೆರಿಕದ ವಾಟರ್​ಪಾರ್ಕ್​ನಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಬಳಿಕ ಆತನ ಶವವೂ ಪತ್ತೆಯಾಗಿದೆ, ಘಟನೆಯಲ್ಲಿ ಮಕ್ಕಳು ಸೇರಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಮೆರಿಕ: ವಾಟರ್​ಪಾರ್ಕ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ
Image Credit source: India TV
ನಯನಾ ರಾಜೀವ್
|

Updated on: Jun 16, 2024 | 12:04 PM

Share

ಅಮೆರಿಕದ ಮಿಚಿಗನ್ ರಾಜ್ಯದ ಅತಿದೊಡ್ಡ ನಗರವಾದ ಡೆಟ್ರಾಯಿಟ್​ ಬಳಿಯ ವಾಟರ್​ಪಾರ್ಕ್​ನಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ. ರೋಷೆಸ್ಟರ್​ ಹಿಲ್ಸ್​ನ ಚಿಲ್ಡ್ರನ್ ವಾಟರ್ ಪಾ್ಕ್​ನಲ್ಲಿ ಈ ದಾಳಿ ನಡೆದಿದೆ.

ಓಕ್ಲ್ಯಾಂಡ್​ ಕೌಂಟಿಯಲ್ಲಿ ಆರೋಪಿ ಗುಂಡಿನ ದಾಳಿಯ ನಂತರ ಹತ್ತಿರದ ಮನೆಯೊಂದರಲ್ಲಿ ಅಡಗಿಕುಳಿತಿದ್ದ. ಪೊಲೀಸರು ಮನೆಯನ್ನು ಸುತ್ತುವರೆದು ಒಳಗೆ ಪ್ರವೇಶಿಸಿದಾಗ ಶಂಕಿತ ವ್ಯಕ್ತಿಯ ಶವ ಅಲ್ಲಿ ಇತ್ತು. ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.

ಶನಿವಾರ ಸಂಜೆ 5ಗಂಟೆ ವೇಳೆಗೆ ರೋಚೆಸ್ಟರ್​ ಹಿಲ್ಸ್​ನ ಆಬರ್ನ್​ ಸ್ಪ್ಲಾಶ್​ ಪ್ಯಾಡ್​ಗೆ ಆಗಮಿಸಿದ್ದ ಆರೋಪಿ ತನ್ನ ವಾಹನದಿಂದ ಇಳಿದು ಗುಂಡು ಹಾರಿಸಲು ಶುರು ಮಾಡಿದ್ದ, 9 ಎಂಎಂ ಸೆಮಿ ಆಟೋಮ್ಯಾಟಿಕ್ ಗ್ಲಾಕ್​ನಿಂದ 28 ಸುತ್ತು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಘಟನಾ ಸ್ಥಳದಿಂದ ಬಂದೂಕು ಹಾಗೂ ಮೂರು ಖಾಲಿ ಮ್ಯಾಗಜೀನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂದೂಕಿನಿಂದ ಗುಂಡಿನ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಸದ್ಯ ಪೊಲೀಸರು ಘಟನಾ ಸ್ಥಳದಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ, ಅಪಾಯ ಇನ್ನೂ ಇದೆ ಎಂದಿದ್ದಾರೆ. 2021ರಲ್ಲಿ ರೋಚೆಸ್ಟರ್​ ಹಿಲ್ಸ್​ನ ಉತ್ತರಕ್ಕೆ 15 ಮೈಲುಗಳಷ್ಟು ದೂರದಲ್ಲಿರುವ ಆಕ್ಸ್​ಫರ್ಡ್​ನ ಹೈಸ್ಕೂಲ್​ನಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​