AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ವಾಟರ್​ಪಾರ್ಕ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ

ಅಮೆರಿಕದ ವಾಟರ್​ಪಾರ್ಕ್​ನಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಬಳಿಕ ಆತನ ಶವವೂ ಪತ್ತೆಯಾಗಿದೆ, ಘಟನೆಯಲ್ಲಿ ಮಕ್ಕಳು ಸೇರಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಮೆರಿಕ: ವಾಟರ್​ಪಾರ್ಕ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ
Image Credit source: India TV
ನಯನಾ ರಾಜೀವ್
|

Updated on: Jun 16, 2024 | 12:04 PM

Share

ಅಮೆರಿಕದ ಮಿಚಿಗನ್ ರಾಜ್ಯದ ಅತಿದೊಡ್ಡ ನಗರವಾದ ಡೆಟ್ರಾಯಿಟ್​ ಬಳಿಯ ವಾಟರ್​ಪಾರ್ಕ್​ನಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ. ರೋಷೆಸ್ಟರ್​ ಹಿಲ್ಸ್​ನ ಚಿಲ್ಡ್ರನ್ ವಾಟರ್ ಪಾ್ಕ್​ನಲ್ಲಿ ಈ ದಾಳಿ ನಡೆದಿದೆ.

ಓಕ್ಲ್ಯಾಂಡ್​ ಕೌಂಟಿಯಲ್ಲಿ ಆರೋಪಿ ಗುಂಡಿನ ದಾಳಿಯ ನಂತರ ಹತ್ತಿರದ ಮನೆಯೊಂದರಲ್ಲಿ ಅಡಗಿಕುಳಿತಿದ್ದ. ಪೊಲೀಸರು ಮನೆಯನ್ನು ಸುತ್ತುವರೆದು ಒಳಗೆ ಪ್ರವೇಶಿಸಿದಾಗ ಶಂಕಿತ ವ್ಯಕ್ತಿಯ ಶವ ಅಲ್ಲಿ ಇತ್ತು. ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.

ಶನಿವಾರ ಸಂಜೆ 5ಗಂಟೆ ವೇಳೆಗೆ ರೋಚೆಸ್ಟರ್​ ಹಿಲ್ಸ್​ನ ಆಬರ್ನ್​ ಸ್ಪ್ಲಾಶ್​ ಪ್ಯಾಡ್​ಗೆ ಆಗಮಿಸಿದ್ದ ಆರೋಪಿ ತನ್ನ ವಾಹನದಿಂದ ಇಳಿದು ಗುಂಡು ಹಾರಿಸಲು ಶುರು ಮಾಡಿದ್ದ, 9 ಎಂಎಂ ಸೆಮಿ ಆಟೋಮ್ಯಾಟಿಕ್ ಗ್ಲಾಕ್​ನಿಂದ 28 ಸುತ್ತು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಘಟನಾ ಸ್ಥಳದಿಂದ ಬಂದೂಕು ಹಾಗೂ ಮೂರು ಖಾಲಿ ಮ್ಯಾಗಜೀನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂದೂಕಿನಿಂದ ಗುಂಡಿನ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಸದ್ಯ ಪೊಲೀಸರು ಘಟನಾ ಸ್ಥಳದಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ, ಅಪಾಯ ಇನ್ನೂ ಇದೆ ಎಂದಿದ್ದಾರೆ. 2021ರಲ್ಲಿ ರೋಚೆಸ್ಟರ್​ ಹಿಲ್ಸ್​ನ ಉತ್ತರಕ್ಕೆ 15 ಮೈಲುಗಳಷ್ಟು ದೂರದಲ್ಲಿರುವ ಆಕ್ಸ್​ಫರ್ಡ್​ನ ಹೈಸ್ಕೂಲ್​ನಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ