ಅಮೆರಿಕ: ವಾಟರ್​ಪಾರ್ಕ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ

ಅಮೆರಿಕದ ವಾಟರ್​ಪಾರ್ಕ್​ನಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಬಳಿಕ ಆತನ ಶವವೂ ಪತ್ತೆಯಾಗಿದೆ, ಘಟನೆಯಲ್ಲಿ ಮಕ್ಕಳು ಸೇರಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಮೆರಿಕ: ವಾಟರ್​ಪಾರ್ಕ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ
Image Credit source: India TV
Follow us
|

Updated on: Jun 16, 2024 | 12:04 PM

ಅಮೆರಿಕದ ಮಿಚಿಗನ್ ರಾಜ್ಯದ ಅತಿದೊಡ್ಡ ನಗರವಾದ ಡೆಟ್ರಾಯಿಟ್​ ಬಳಿಯ ವಾಟರ್​ಪಾರ್ಕ್​ನಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ. ರೋಷೆಸ್ಟರ್​ ಹಿಲ್ಸ್​ನ ಚಿಲ್ಡ್ರನ್ ವಾಟರ್ ಪಾ್ಕ್​ನಲ್ಲಿ ಈ ದಾಳಿ ನಡೆದಿದೆ.

ಓಕ್ಲ್ಯಾಂಡ್​ ಕೌಂಟಿಯಲ್ಲಿ ಆರೋಪಿ ಗುಂಡಿನ ದಾಳಿಯ ನಂತರ ಹತ್ತಿರದ ಮನೆಯೊಂದರಲ್ಲಿ ಅಡಗಿಕುಳಿತಿದ್ದ. ಪೊಲೀಸರು ಮನೆಯನ್ನು ಸುತ್ತುವರೆದು ಒಳಗೆ ಪ್ರವೇಶಿಸಿದಾಗ ಶಂಕಿತ ವ್ಯಕ್ತಿಯ ಶವ ಅಲ್ಲಿ ಇತ್ತು. ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.

ಶನಿವಾರ ಸಂಜೆ 5ಗಂಟೆ ವೇಳೆಗೆ ರೋಚೆಸ್ಟರ್​ ಹಿಲ್ಸ್​ನ ಆಬರ್ನ್​ ಸ್ಪ್ಲಾಶ್​ ಪ್ಯಾಡ್​ಗೆ ಆಗಮಿಸಿದ್ದ ಆರೋಪಿ ತನ್ನ ವಾಹನದಿಂದ ಇಳಿದು ಗುಂಡು ಹಾರಿಸಲು ಶುರು ಮಾಡಿದ್ದ, 9 ಎಂಎಂ ಸೆಮಿ ಆಟೋಮ್ಯಾಟಿಕ್ ಗ್ಲಾಕ್​ನಿಂದ 28 ಸುತ್ತು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಘಟನಾ ಸ್ಥಳದಿಂದ ಬಂದೂಕು ಹಾಗೂ ಮೂರು ಖಾಲಿ ಮ್ಯಾಗಜೀನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂದೂಕಿನಿಂದ ಗುಂಡಿನ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಸದ್ಯ ಪೊಲೀಸರು ಘಟನಾ ಸ್ಥಳದಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ, ಅಪಾಯ ಇನ್ನೂ ಇದೆ ಎಂದಿದ್ದಾರೆ. 2021ರಲ್ಲಿ ರೋಚೆಸ್ಟರ್​ ಹಿಲ್ಸ್​ನ ಉತ್ತರಕ್ಕೆ 15 ಮೈಲುಗಳಷ್ಟು ದೂರದಲ್ಲಿರುವ ಆಕ್ಸ್​ಫರ್ಡ್​ನ ಹೈಸ್ಕೂಲ್​ನಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ