AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

US vs China: ಸ್ಪೈ ಬಲೂನು ಹೊಡೆದುರುಳಿಸಿದ ಅಮೆರಿಕ; ಗರಂ ಆದ ಚೀನಾ

America Shots Down Chinese Balloon: ಶಂಕಿತ ಚೀನೀ ಬೇಹುಗಾರಿಕಾ ಬಲೂನೊಂದನ್ನು ಅಮೆರಿಕ ಹೊಡೆದುರುಳಿಸಿದೆ. ಶನಿವಾರ ಇಲ್ಲಿಯ ಕಡಲತೀರದ ಮೇಲೆ ಹಾದು ಹೋಗುತ್ತಿತ್ತೆನ್ನಲಾದ ಈ ಬಲೂನನ್ನು ಅಮೆರಿಕದ ಯುದ್ಧವಿಮಾನ ನಾಶಗೊಳಿಸಿರುವುದು ವರದಿಯಾಗಿದೆ.

US vs China: ಸ್ಪೈ ಬಲೂನು ಹೊಡೆದುರುಳಿಸಿದ ಅಮೆರಿಕ; ಗರಂ ಆದ ಚೀನಾ
ಸ್ಪೈ ಬಲೂನು ಹೊಡೆದುರುಳಿಸಿದ ಅಮೆರಿಕImage Credit source: Reuters
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 05, 2023 | 7:43 AM

Share

ಸೌತ್ ಕರೋಲಿನಾ: ಶಂಕಿತ ಚೀನೀ ಬೇಹುಗಾರಿಕಾ ಬಲೂನೊಂದನ್ನು (Chinese Spy Balloon) ಅಮೆರಿಕ ಹೊಡೆದುರುಳಿಸಿದೆ. ಶನಿವಾರ ಇಲ್ಲಿಯ ಕಡಲತೀರದ ಮೇಲೆ ಹಾದು ಹೋಗುತ್ತಿತ್ತೆನ್ನಲಾದ ಈ ಬಲೂನನ್ನು ಅಮೆರಿಕದ ಯುದ್ಧವಿಮಾನ ನಾಶಗೊಳಿಸಿರುವುದು ವರದಿಯಾಗಿದೆ. ಈ ಘಟನೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಚೀನಾ, ಅಮೆರಿಕದಿಂದ ಅಂತಾರಾಷ್ಟ್ರೀಯ ಪ್ರಮಾಣಿತ ನಡಾವಳಿ ನಿಯಮಗಳ (International Standard Practices) ಉಲ್ಲಂಘನೆಯಾಗಿದೆ ಎಂದಿದೆ.

ಚೀನಾದ ಬಲೂನುಗಳು ಅಮೆರಿಕದ ವಾಯುಭಾಗದಲ್ಲಿ ಹಾರಾಡುತ್ತಿದ್ದ ಬಗ್ಗೆ ಇತ್ತೀಚೆಗೆ ಕೆಲ ವರದಿಗಳು ಬಂದಿದ್ದವು. ಇವುಗಳು ಬೇಹುಗಾರಿಕೆ ಉದ್ದೇಶದಿಂದ ಹಾರಾಡುತ್ತಿದ್ದ ವಸ್ತುಗಳೆಂದು ಅಮೆರಿಕ ಶಂಕಿಸಿತ್ತು. ಅಮೆರಿಕ ಅಧ್ಯಕ್ಷ ಜೋ ಬೈಡನ್ ಈ ಬಲೂನುಗಳನ್ನು ಹೊಡೆದುರುಳಿಸುವಂತೆ ಆದೇಶಿಸಿದ್ದರು. ಆದರೆ, ಬಲೂನು ಶೂಟ್ ಮಾಡಿದರೆ ನಾಗರಿಕರಿಗೆ ಅಪಾಯವಾಗುವ ಸಾಧ್ಯತೆಯಿಂದ ಅಮೆರಿಕನ್ ಮಿಲಿಟರಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ವರದಿಗಳ ಪ್ರಕಾರ, ನಿನ್ನೆ ಹೊಡೆದುರುಳಿಸಲಾದ ಬಲೂನು ಜನವರಿ 28ರಂದು ಅಮೆರಿಕದ ವಾಯುಪ್ರದೇಶವನ್ನು ಮೊದಲು ಪ್ರವೇಶಿಸಿತು. ಬಳಿಕ ಜನವರಿ 30ರಂದು ಕೆನಡಾ ಭಾಗಕ್ಕೆ ಹೋಗಿ ಮರುದಿನ ಮತ್ತೆ ಅಮೆರಿಕದ ಕಡೆ ಬಂದಿತ್ತು. ಆದರೆ ಇದು ಸಾಗರ ಪ್ರದೇಶಕ್ಕೆ ಬರದೇ ಇದ್ದರಿಂದ ಶೂಟ್ ಮಾಡಲು ಕಷ್ಟವಾಗಿತ್ತು. ಕೊನೆಗೆ ನಿನ್ನೆ ಶನಿವಾರ ಈ ಬಲೂನನ್ನು ಕ್ಷಿಪಣಿ ಮೂಲಕ ಹೊಡೆದುರುಳಿಸಲಾಗಿದೆ.

ಇದನ್ನೂ ಓದಿ: Chinese ‘Spy’ Balloon: ಅಮೆರಿಕದಲ್ಲಿ ಮತ್ತೆ ಕಾಣಿಸಿದ ಚೀನಾ ರಹಸ್ಯ ಬಲೂನ್; ಬ್ಲಿಂಕೆನ್ ಚೀನಾ ಭೇಟಿ ರದ್ದು

ಚೀನಾದ ಈ ಬಲೂನು ತಮ್ಮ ದೇಶದ ಸಾರ್ವಭೌಮತೆಗೆ (Sovereignty) ಧಕ್ಕೆ ತರುವಂತಿತ್ತು ಎಂದು ಹೇಳಿರುವ ಅಮೆರಿಕ, ಬಲೂನು ಹೊಡೆಯುತ್ತಿರುವ ಬಗ್ಗೆ ಚೀನಾಗೆ ಮಾಹಿತಿಯನ್ನೂ ನೀಡಿತ್ತು ಎಂದು ಅಮೆರಿಕದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಚೀನಾ ಗರಂ:

ಅಮೆರಿಕ ಹೊಡೆದುರುಳಿಸುವ ತನ್ನ ಬಲೂನು ಯಾವುದೇ ಬೇಹುಗಾರಿಕೆ ಕಾರ್ಯಕ್ಕೆ ಬಳಕೆಯಾಗುತ್ತಿರಲಿಲ್ಲ. ನಾಗರಿಕ ಸೇವೆ ಉದ್ದೇಶದಿಂದ ಆ ಪ್ರದೇಶದ ಬಳಿ ಹೋಗಿತ್ತು. ಆದರೆ, ಆಕಸ್ಮಿಕವಾಗಿ ಅದು ಅಮೆರಿಕ ಪ್ರದೇಶಕ್ಕೆ ಹಾದು ಹೋಗಿದೆ. ಅಷ್ಟಕ್ಕೆ ಅಮೆರಿಕ ಅತಿರೇಕವಾಗಿ ವರ್ತಿಸಿದೆ ಎಂದು ಚೀನಾ ಹೇಳಿದೆ.

ಅಮೆರಿಕದ ಈ ಕ್ರಮಕ್ಕೆ ತಾನು ಅಷ್ಟೇ ತೀವ್ರವಾಗಿ ಸ್ಪಂದಿಸುವ ಅಧಿಕಾರ ತನಗಿದೆ ಎಂದೂ ಚೀನಾ ಬೆದಕರಿಕೆ ಹಾಕಿದೆ.

ಇದನ್ನೂ ಓದಿ: Pakistan: ಕೈಯಲ್ಲಿ ಕುರಾನ್, ಅಣುಬಾಂಬ್; ಬಡತನ ನಿರ್ಮೂಲನೆಗೆ ಸೂತ್ರ ಕೊಟ್ಟ ಪಾಕ್ ಇಸ್ಲಾಮಿಕ್ ಮುಖಂಡ

ಅಮೆರಿಕದ ಗುಪ್ತಚರ ವರದಿಗಳ ಪ್ರಕಾರ, ಚೀನಾದ ಸ್ಪೈ ಬಲೂನುಗಳು ಬೇರೆ ದೇಶದ ಮೇಲೆ ಕದ್ದು ಹೋಗುವುದು ಇದೇ ಮೊದಲಲ್ಲ. ಅಮೆರಿಕ ಮಾತ್ರವಲ್ಲ, ಏಷ್ಯಾ, ಯೂರೋಪ್ ಸೇರಿದಂತೆ ಐದು ಖಂಡಗಳ ವಿವಿಧ ದೇಶಗಳ ವಾಯು ಪ್ರದೇಶಗಳಲ್ಲಿ ಚೀನಾದ ಬಲೂನುಗಳು ಅಕ್ರಮವಾಗಿ ಪ್ರವೇಶಿಸಿ ಬೇಹುಗಾರಿಕೆ ನಡೆಸುತ್ತಿರುವ ಘಟನೆಗಳು ಹಲವು ವರ್ಷಗಳಿಂದ ಆಗುತ್ತಿವೆ ಎಂದು ಆರೋಪಿಸಲಾಗಿದೆ.

ಅಮೆರಿಕದ ವಿದೇಶಾಂಗ ಸಚಿವ ಆಂಟೋನಿ ಬ್ಲಿಂಕೆನ್ ಅವರು ಮೊನ್ನೆ ಶುಕ್ರವಾರ ಚೀನಾಗೆ ಪೂರ್ವನಿಗಧಿತ ಭೇಟಿ ನೀಡಬೇಕಿತ್ತು. ಆದರೆ, ಈ ಬೇಹುಗಾರಿಕೆ ಬಲೂನು ಕಾರಣದಿಂದ ಅವರ ಭೇಟಿಯನ್ನು ಮುಂದೂಡಲಾಗಿದೆ.

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು