AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣವನ್ನೂ ಬಿಡದ ಕಾಮುಕ, ರೈಲಿನಲ್ಲಿ ಮೃತ ಮಹಿಳೆಯೊಂದಿಗೆ ಸಂಭೋಗ ನಡೆಸಿದ ಪಾಪಿ

ಸತ್ತ ಹೆಣದ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಮಹಿಳೆಯೊಬ್ಬರು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಸಹಜವಾಗಿ ಸಾವನ್ನಪ್ಪಿದ್ದರು, ಆ ಮಹಿಳೆಯ ಮೃತದೇಹದ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ವರದಿಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮೆಟ್ರೋಪಾಲಿಟನ್ ಸಾರಿಗೆ ಪ್ರಾಧಿಕಾರದ (ಎಂಟಿಎ) ಕಣ್ಗಾವಲು ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, 50ರ ಆಸುಪಾಸಿನ ವ್ಯಕ್ತಿ ಶವದೊಂದಿಗೆ ಸಂಭೋಗ ನಡೆಸುತ್ತಿರುವುದು ಕಂಡುಬಂದಿದೆ.

ಹೆಣವನ್ನೂ ಬಿಡದ ಕಾಮುಕ, ರೈಲಿನಲ್ಲಿ ಮೃತ ಮಹಿಳೆಯೊಂದಿಗೆ ಸಂಭೋಗ ನಡೆಸಿದ ಪಾಪಿ
ಆರೋಪಿImage Credit source: Webdunia
Follow us
ನಯನಾ ರಾಜೀವ್
|

Updated on: Apr 11, 2025 | 2:14 PM

ವಾಷಿಂಗ್ಟನ್, ಏಪ್ರಿಲ್ 11: ರೈಲಿನಲ್ಲಿ ಮೃತ ಮಹಿಳೆ(Woman) ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ನ್ಯೂಯಾರ್ಕ್​ನ ರೈಲಿನಲ್ಲಿ ಸತ್ತ ಪ್ರಯಾಣಿಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ವರದಿಗಳ ಪ್ರಕಾರ ಏಪ್ರಿಲ 9 ರಂದು ಈ ಘಟನೆ ನಡೆದಿದೆ. ಈ ದೌರ್ಜನ್ಯವೆಸಗಿರುವುದು ಸಬ್​ವೇ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಲೋವರ್ ಮ್ಯಾನ್‌ಹ್ಯಾಟನ್‌ನ ವೈಟ್‌ಹಾಲ್ ಸ್ಟ್ರೀಟ್ ನಿಲ್ದಾಣದಲ್ಲಿ ಆರ್ ರೈಲಿನಲ್ಲಿ ಮೃತ ದೇಹ ಪತ್ತೆಯಾದ ನಂತರ ಈ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮೆಟ್ರೋಪಾಲಿಟನ್ ಸಾರಿಗೆ ಪ್ರಾಧಿಕಾರದ (ಎಂಟಿಎ) ಕಣ್ಗಾವಲು ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, 50ರ ಆಸುಪಾಸಿನ ವ್ಯಕ್ತಿ ಶವದೊಂದಿಗೆ ಸಂಭೋಗ ನಡೆಸುತ್ತಿರುವುದು ಕಂಡುಬಂದಿದೆ. ಮ್ಯಾನ್‌ಹ್ಯಾಟನ್ ಸುರಂಗಮಾರ್ಗದಲ್ಲಿ ವ್ಯಕ್ತಿ ಶವದ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೃತ ಮಹಿಳೆಯನ್ನು ಇನ್ನೂ ಗುರುತಿಸಲಾಗಿಲ್ಲ ಮತ್ತು ವರದಿಗಳ ಪ್ರಕಾರ ಸಹಜ ಕಾರಣಗಳಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಇಬ್ಬರೂ ಪರಸ್ಪರ ತಿಳಿದಿದ್ದರು ಎಂಬುದಕ್ಕೆ ಪುರಾವೆ ಇಲ್ಲ.

ಇದನ್ನೂ ಓದಿ
Image
13 ವರ್ಷದ ಕ್ಯಾನ್ಸರ್​​ ರೋಗಿ ಮೇಲೆ ಅತ್ಯಾಚಾರ; ಗರ್ಭಿಣಿಯಾದಾಗ ವಿಷಯ ಬಯಲು
Image
9 ವರ್ಷದ ಮಗಳ ಮೇಲೆ ತಂದೆಯಿಂದ ಅತ್ಯಾಚಾರ; ದಾರುಣ ಕತೆ ಬಿಚ್ಚಿಟ್ಟ ತಾಯಿ
Image
2ನೇ ಕ್ಲಾಸ್ ಬಾಲಕಿಗೆ ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ
Image
ಅಪ್ಪನ ರೋಗ ಗುಣಪಡಿಸುತ್ತೇನೆಂದು ಕರೆಸಿ ಸ್ಮಶಾನದಲ್ಲೇ ಬಾಲಕಿ ಮೇಲೆ ಅತ್ಯಾಚಾರ

ಮತ್ತಷ್ಟು ಓದಿ: ದಾವಣಗೆರೆ: ಜಾತ್ರೆಗೆ ಬಂದಿದ್ದ ದಲಿತ ಮಹಿಳೆ ಮೇಲೆ ಬಸ್​ನಲ್ಲಿ ಲೈಂಗಿಕ ದೌರ್ಜನ್ಯ ಯತ್ನ

ಮತ್ತೊಂದು ಘಟನೆ ಕ್ಯಾನ್ಸರ್ ರೋಗಿ ಮೇಲೆ ಅತ್ಯಾಚಾರ ಚಿಕಿತ್ಸೆ ಕೊಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ 13 ವರ್ಷದ ಕ್ಯಾನ್ಸರ್(Cancer) ರೋಗಿ ಮೇಲೆ ಅತ್ಯಾಚಾರ ನಡೆಸಿ, ಗರ್ಭಿಣಿ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಬಿಹಾರದಲ್ಲಿ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಬಾಲಕಿ ಕ್ಯಾನ್ಸ್ ಚಿಕಿತ್ಸೆಗೆಂದು ಮಹಾರಾಷ್ಟ್ರಕ್ಕೆ ಬಂದಿದ್ದಳು. ಅದೇ ಹಳ್ಳಿಯಿಂದ ಬಂದಿರುವ ಈ ವ್ಯಕ್ತಿ ಆಕೆಗೆ ಸಹಾಯ ಮಾಡಿದ್ದ, ಎರಡು ತಿಂಗಳ ಹಿಂದೆ ಬದ್ಲಾಪುರದಲ್ಲಿ ವಾಸಿಸಲು ಒಂದು ಸ್ಥಳವನ್ನು ಬಾಡಿಗೆಗೆ ಪಡೆದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆ ವ್ಯಕ್ತಿ ಆಕೆಯ ಮೇಲೆ ಮೂರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮುಂಬೈ ಆಸ್ಪತ್ರೆಯಲ್ಲಿ, ಅಪ್ರಾಪ್ತ ಬಾಲಕಿಯೊಬ್ಬಳು ಕಿಮೊಥೆರಪಿ ಪಡೆಯುತ್ತಿದ್ದಾಗ ನಿಯಮಿತ ತಪಾಸಣೆಯ ಸಮಯದಲ್ಲಿ ಅವಳು ಗರ್ಭಿಣಿಯಾಗಿರುವುದು ಪತ್ತೆಯಾಗಿದೆ.

ಆರೋಪಿ ಸಂತ್ರಸ್ತೆಯ ಕುಟುಂಬಕ್ಕೆ ಸಹಾಯ ಮಾಡಿದ್ದ, ಈ ಸಮಯದಲ್ಲಿ, ಅವನು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭ ಧರಿಸುವಂತೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ