AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ ಎಷ್ಟು ಗಲೀಜಾಗಿದೆ ನೋಡಿ.. ಅದರ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆ ಅಬ್ಬಬ್ಬಾ!’

ಚೀನಾನ ಒಮ್ಮೆ ನೋಡಿ. ಎಷ್ಟು ಗಲೀಜಾಗಿದೆ. ಒಮ್ಮೆ ರಷ್ಯಾನ ನೋಡಿ. ಅದೂ ಎಷ್ಟು ಗಲೀಜಾಗಿದೆ. ಮತ್ತೆ ಈ ಇಂಡಿಯಾ.. ಪೂರಾ ಗಲೀಜು.. ಆ ದೇಶದಲ್ಲಿ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆಯೋ ನೋಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂಗವಾಗಿ ಇಂದು ನಡೆದ ಅಂತಿಮ ನೇರಾನೇರ ಚರ್ಚೆಯಲ್ಲಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆ ಜಾಗತಿಕ ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡುತ್ತಿದ್ದ ಅಧ್ಯಕ್ಷ ಟ್ರಂಪ್​ ಈ ಮಾತನ್ನು […]

‘ಭಾರತ ಎಷ್ಟು ಗಲೀಜಾಗಿದೆ ನೋಡಿ.. ಅದರ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆ ಅಬ್ಬಬ್ಬಾ!’
KUSHAL V
|

Updated on: Oct 23, 2020 | 2:44 PM

Share

ಚೀನಾನ ಒಮ್ಮೆ ನೋಡಿ. ಎಷ್ಟು ಗಲೀಜಾಗಿದೆ. ಒಮ್ಮೆ ರಷ್ಯಾನ ನೋಡಿ. ಅದೂ ಎಷ್ಟು ಗಲೀಜಾಗಿದೆ. ಮತ್ತೆ ಈ ಇಂಡಿಯಾ.. ಪೂರಾ ಗಲೀಜು.. ಆ ದೇಶದಲ್ಲಿ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆಯೋ ನೋಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂಗವಾಗಿ ಇಂದು ನಡೆದ ಅಂತಿಮ ನೇರಾನೇರ ಚರ್ಚೆಯಲ್ಲಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆ ಜಾಗತಿಕ ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡುತ್ತಿದ್ದ ಅಧ್ಯಕ್ಷ ಟ್ರಂಪ್​ ಈ ಮಾತನ್ನು ಪ್ರಸ್ತಾಪಿಸಿದ್ದಾರೆ. ಪ್ಯಾರಿಸ್​ ಒಪ್ಪಂದದಿಂದ ಅಮೆರಿಕ ಹಿಂದೆ ಸರಿದ ನಿರ್ಧಾರವನ್ನು ಸಮರ್ಥಿಸಿಕೊಂಡ ಟ್ರಂಪ್​.. ನಮ್ಮನ್ನು ನ್ಯಾಯಸಮ್ಮತವಾಗಿ ನಡೆಸಿಕೊಳ್ಳುತ್ತಿರಲಿಲ್ಲ. ಪ್ಯಾರಿಸ್​ ಒಪ್ಪಂದದಿಂದ ನಮಗೆ ಭಾರಿ ಅನ್ಯಾಯವಾಗಿದೆ. ಅದರಿಂದ ನಾನು ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳಲು ಇಷ್ಟವಿರಲಿಲ್ಲ ಎಂದು ಹೇಳಿದರು.

ಅಂದ ಹಾಗೆ, ಭಾರತದ ಬಗ್ಗೆ ಅಧ್ಯಕ್ಷ ಟ್ರಂಪ್​ ವಿವಾದಾತ್ಮಕ ಹೇಳಿಕೆ ಕೊಟ್ಟಿರುವುದು ಇದೇ ಮೊದಲಲ್ಲ. ಈ ಹಿಂದೆ ನಡೆದಿದ್ದ ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆಯೂ ಸಹ ಡೊನಾಲ್ಟ್​ ಟ್ರಂಪ್​ ಕೊರೊನಾ ಬಗ್ಗೆ ಮಾತನಾಡುತ್ತಾ.. ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯನ್ನು ಭಾರತ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಕಟಕಿಯಾಡಿದ್ದರು.

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!