AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್, ಝೆಲೆನ್ಸ್ಕಿ ಜತೆ ತ್ರಿಪಕ್ಷೀಯ ಸಭೆ ನಡೆಸಲು ಮುಂದಾದ ಟ್ರಂಪ್

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Vladimir Putin) ಅವರೊಂದಿಗಿನ ಭೇಟಿ ಬಳಿಕ ಇದೀಗ ಆಗಸ್ಟ್​ 22ರಂದು ಪುಟಿನ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆ ತ್ರಿಪಕ್ಷೀಯ ಮಾತುಕತೆ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಸಿದ್ಧರಾಗಿದ್ದಾರೆ. ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ ಹಾಡಿ, ಶಾಂತಿ ಸ್ಥಾಪಿಸುವ ಉದ್ದೇಶದಿಂದ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಡುವೆ ಅಮೆರಿಕದ ಅಲಾಸ್ಕಾದಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆ ಯಾವುದೇ ಸಕಾರಾತ್ಮಕ ಫಲಿತಾಂಶವಿಲ್ಲದೇ ಅಂತ್ಯವಾಗಿದೆ ಎಂದು ಹೇಳಲಾಗಿದೆ.

ಪುಟಿನ್, ಝೆಲೆನ್ಸ್ಕಿ ಜತೆ ತ್ರಿಪಕ್ಷೀಯ ಸಭೆ ನಡೆಸಲು ಮುಂದಾದ ಟ್ರಂಪ್
ಪುಟಿನ್
ನಯನಾ ರಾಜೀವ್
|

Updated on: Aug 17, 2025 | 8:49 AM

Share

ವಾಷಿಂಗ್ಟನ್​, ಆಗಸ್ಟ್​ 17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Vladimir Putin) ಅವರೊಂದಿಗಿನ ಭೇಟಿ ಬಳಿಕ ಇದೀಗ ಆಗಸ್ಟ್​ 22ರಂದು ಪುಟಿನ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆ ತ್ರಿಪಕ್ಷೀಯ ಮಾತುಕತೆ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಸಿದ್ಧರಾಗಿದ್ದಾರೆ. ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ ಹಾಡಿ, ಶಾಂತಿ ಸ್ಥಾಪಿಸುವ ಉದ್ದೇಶದಿಂದ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಡುವೆ ಅಮೆರಿಕದ ಅಲಾಸ್ಕಾದಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆ ಯಾವುದೇ ಸಕಾರಾತ್ಮಕ ಫಲಿತಾಂಶವಿಲ್ಲದೇ ಅಂತ್ಯವಾಗಿದೆ ಎಂದು ಹೇಳಲಾಗಿದೆ.

ಶನಿವಾರ ಎಕ್ಸ್ ಪೋಸ್ಟ್‌ನಲ್ಲಿ ಝೆಲೆನ್ಸ್ಕಿ ಅವರು ಸೋಮವಾರ ವಾಷಿಂಗ್ಟನ್‌ನಲ್ಲಿ ಟ್ರಂಪ್ ಅವರನ್ನು ಭೇಟಿಯಾಗುವುದಾಗಿ ಹೇಳಿದ್ದಾರೆ. ಸೋಮವಾರದ ಶ್ವೇತಭವನದ ಸಭೆಯಲ್ಲಿ ಭಾಗವಹಿಸಲು ಟ್ರಂಪ್ ಯುರೋಪಿಯನ್ ನಾಯಕರನ್ನು ಆಹ್ವಾನಿಸಿದ್ದಾರೆ ಎಂದು ಅಮೆರಿಕದ ಆನ್‌ಲೈನ್ ಮಾಧ್ಯಮ ಸಂಸ್ಥೆ ಆಕ್ಸಿಯೋಸ್ ವರದಿ ಮಾಡಿದೆ.

1945ರ ನಂತರದ ಯುರೋಪಿನ ಅತಿದೊಡ್ಡ ಭೂ ಯುದ್ಧವಾದ ರಷ್ಯಾ ಮತ್ತು ಉಕ್ರೇನ್ ನಡುವಿನ ಕ್ರೂರ ಸಂಘರ್ಷವನ್ನು ಕೊನೆಗೊಳಿಸಲು ಅಥವಾ ವಿರಾಮಗೊಳಿಸಲು ಸೇರಿದ್ದ ಅಲಸ್ಕಾ ಶೃಂಗಸಭೆ ಯಾವುದೇ ಒಪ್ಪಂದವಿಲ್ಲದೆ ಅಂತ್ಯಗೊಂಡಿದೆ.

ಸುಮಾರು ಮೂರು ಗಂಟೆಗಳ ಸುದೀರ್ಘ ಸಮಾಲೋಚನೆ ನಡೆದಿದ್ದು, ಮಾತುಕತೆ ಬಳಿಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ವ್ಲಾಡಿಮಿರ್ ಪುಟಿನ್ ಮಾತನಾಡಿ ಮಾತುಕತೆಯಲ್ಲಿ ಮಹತ್ವದ ಪ್ರಗತಿ ಕಂಡು ಬಂದಿದೆ ಎಂದು ಘೋಷಣೆ ಮಾಡಿದರು.

ಮತ್ತಷ್ಟು ಓದಿ: ಟ್ರಂಪ್ ಇಬ್ಬಗೆ ನೀತಿಯ ಬಣ್ಣ ಬಯಲು! ರಷ್ಯಾ ಜತೆ ಅಮೆರಿಕದ ವಹಿವಾಟು ಭಾರೀ ಹೆಚ್ಚಳ

ಸೋಮವಾರ ಝೆಲೆನ್ಸ್ಕಿ ಮತ್ತು ಟ್ರಂಪ್ ನಡುವಿನ ಸಭೆಯ ನಂತರ ತ್ರಿಪಕ್ಷೀಯ ಸಭೆ ನಡೆಯುವ ನಿರೀಕ್ಷೆಯಿದೆ ಎಂದು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಹೇಳಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆಗಸ್ಟ್ 15 ರಂದು, ಪುಟಿನ್ ಮತ್ತು ಟ್ರಂಪ್ ಅಲಾಸ್ಕಾದ ಎಲ್ಮೆಂಡಾರ್ಫ್-ರಿಚರ್ಡ್ಸನ್ ಮಿಲಿಟರಿ ನೆಲೆಯಲ್ಲಿ ಭೇಟಿಯಾದರು. ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು. ಟ್ರಂಪ್ ಮತ್ತು ಝೆಲೆನ್ಸ್ಕಿ ಸೋಮವಾರ ಶ್ವೇತಭವನದಲ್ಲಿ ಸಭೆ ನಡೆಸಲಿದ್ದಾರೆ.

ಝೆಲೆನ್ಸ್ಕಿ ಜೊತೆಗಿನ ಮಾತುಕತೆ ಯಶಸ್ವಿಯಾದರೆ, ಪುಟಿನ್ ಜೊತೆ ಮತ್ತೊಂದು ಸಭೆಯನ್ನು ನಿಗದಿಪಡಿಸಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ. ಇನ್ನು ಇದೇ ವೇಳೆ ಉಕ್ರೇನ್ ಯುದ್ಧವನ್ನು ನಿಲ್ಲಿಸುವ ಬಗ್ಗೆ ಪುಟಿನ್ ಮತ್ತು ತಮ್ಮ ನಡುವೆ ಯಾವುದೇ ಒಪ್ಪಂದವಾಗಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಝೆಲೆನ್ಸ್ಕಿ ಮತ್ತು ನ್ಯಾಟೋ ನಾಯಕರ ಸಭೆ ಕರೆಯುವುದಾಗಿ ಹೇಳಿದರು. ಜತೆಗೆ ಇಬ್ಬರೂ ನಾಯಕರು ಪರಸ್ಪರ ಹೊಗಳುತ್ತಾ ಹಲವು ಇತರೆ ಒಪ್ಪಂದಗಳು ಆಗಿವೆ ಎಂದರು.

ಕೇವಲ ಭಾರತ-ಪಾಕಿಸ್ತಾವಲ್ಲದೇ, ಟ್ರಂಪ್​ ಆ ಸಂದರ್ಶನದಲ್ಲಿ ಕಾಂಗೋ ಮತ್ತು ರುವಾಂಡಾ, ಥಾಯ್ಲೆಂಡ್​ ಮತ್ತು ಕಾಂಬೋಡಿಯಾ, ಹಾಗೂ ಅರ್ಮೇನಿಯಾ ಮತ್ತು ಅಜರ್‌ಬೈಜಾನ್ ಸೇರಿದಂತೆ ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ತಾನು ಪರಿಹರಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಕಳೆದ ವಾರ ಟ್ರಂಪ್ ಭಾರತದ ಮೇಲೆ ಶೇ 50ರಷ್ಟು ಸುಂಕವನ್ನು ವಿಧಿಸಿದ್ದರು. ಇದರಲ್ಲಿ, ಭಾರತ ರಷ್ಯಾದಿಂದ ಖರೀದಿಸುತ್ತಿದ್ದ ತೈಲದ ಮೇಲೂ ಶೇ 25ರಷ್ಟು ಸುಂಕ ಸೇರಿದೆ. ಹೆಚ್ಚುವರಿ ಸುಂಕಗಳು ಆಗಸ್ಟ್ 27 ರಿಂದ ಜಾರಿಗೆ ಬರಲಿವೆ.ಟ್ರಂಪ್​ ಅವರ ಈ ನಿರ್ಧಾರಗಳಿಗೆ ಭಾರತದ ವಿದೇಶಾಂಗ ಸಚಿವಾಲಯವು ಭಾರತದ ಮೇಲೆ ಗುರಿ ಇಡುವುದು ಅಸಮರ್ಥನೀಯ ಮತ್ತು ಅಸಮಂಜಸವಾಗಿದೆ ಎಂದು ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್