AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಅಧ್ಯಕ್ಷ ಜೋ ಬೈಡನ್​ ಕೀವ್​​ಗೆ ತೆರಳಲಿದ್ದಾರಾ?- ಪ್ರಶ್ನೆಗೆ ಉತ್ತರ ನೀಡಿದ ಶ್ವೇತ ಭವನ

ಅಮೆರಿಕ ಅಧ್ಯಕ್ಷ ಜೋ ಬೈಡನ್​ ಉಕ್ರೇನ್​​ ರಾಜಧಾನಿ ಕೀವ್​ಗೆ ಭೇಟಿ ಕೊಡುವ ಬಗ್ಗೆ ಯೋಚಿಸಿಲ್ಲ. ಸದ್ಯ ಅಲ್ಲಿಗೆ ಹೋಗುವುದಿಲ್ಲ ಎಂದು ಶ್ವೇತಭವನ ಸೋಮವಾರ ತಿಳಿಸಿದೆ. ರಷ್ಯಾ ಸಾರಿರುವ ಯುದ್ಧದಿಂದ ಉಕ್ರೇನ್​ ಪರಿಸ್ಥಿತಿ ಹದಗೆಟ್ಟಿದೆ. ಈ ಮಧ್ಯೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಯುಎಸ್​ ಸಹಾಯವನ್ನು ಪದೇಪದೆ ಕೇಳುತ್ತಿದ್ದಾರೆ. ಅಲ್ಲದೆ, ಯುಎಸ್​ ನೇತೃತ್ವದ ನ್ಯಾಟೋ ನಮ್ಮನ್ನು ಕೈಬಿಟ್ಟಿದೆ ಎಂದು ಆಕ್ರೋಶವನ್ನೂ ವ್ಯಕ್ತಪಡಿಸಿದ್ದಾರೆ. ಇದೆಲ್ಲದರ ಮಧ್ಯೆ ಬೈಡನ್​ ಕೀವ್​ಗೆ ಹೋಗಲಿದ್ದಾರಾ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಸದ್ಯಕ್ಕಂತೂ ಅಂಥ ಭೇಟಿ […]

ಅಮೆರಿಕ ಅಧ್ಯಕ್ಷ ಜೋ ಬೈಡನ್​ ಕೀವ್​​ಗೆ ತೆರಳಲಿದ್ದಾರಾ?- ಪ್ರಶ್ನೆಗೆ  ಉತ್ತರ ನೀಡಿದ ಶ್ವೇತ ಭವನ
ಜೋ ಬೈಡನ್​
TV9 Web
| Edited By: |

Updated on:Apr 19, 2022 | 11:37 AM

Share

ಅಮೆರಿಕ ಅಧ್ಯಕ್ಷ ಜೋ ಬೈಡನ್​ ಉಕ್ರೇನ್​​ ರಾಜಧಾನಿ ಕೀವ್​ಗೆ ಭೇಟಿ ಕೊಡುವ ಬಗ್ಗೆ ಯೋಚಿಸಿಲ್ಲ. ಸದ್ಯ ಅಲ್ಲಿಗೆ ಹೋಗುವುದಿಲ್ಲ ಎಂದು ಶ್ವೇತಭವನ ಸೋಮವಾರ ತಿಳಿಸಿದೆ. ರಷ್ಯಾ ಸಾರಿರುವ ಯುದ್ಧದಿಂದ ಉಕ್ರೇನ್​ ಪರಿಸ್ಥಿತಿ ಹದಗೆಟ್ಟಿದೆ. ಈ ಮಧ್ಯೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಯುಎಸ್​ ಸಹಾಯವನ್ನು ಪದೇಪದೆ ಕೇಳುತ್ತಿದ್ದಾರೆ. ಅಲ್ಲದೆ, ಯುಎಸ್​ ನೇತೃತ್ವದ ನ್ಯಾಟೋ ನಮ್ಮನ್ನು ಕೈಬಿಟ್ಟಿದೆ ಎಂದು ಆಕ್ರೋಶವನ್ನೂ ವ್ಯಕ್ತಪಡಿಸಿದ್ದಾರೆ. ಇದೆಲ್ಲದರ ಮಧ್ಯೆ ಬೈಡನ್​ ಕೀವ್​ಗೆ ಹೋಗಲಿದ್ದಾರಾ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಸದ್ಯಕ್ಕಂತೂ ಅಂಥ ಭೇಟಿ ಇಲ್ಲ ಎಂದು ಅಧಿಕೃತಗೊಳಿಸಲಾಗಿದೆ.

ಒಂದಷ್ಟು ಯುರೋಪಿಯನ್ ನಾಯಕರು ಈಗಾಗಲೇ ಕೀವ್​ಗೆ ತೆರಳಿ, ಉಕ್ರೇನ್​ ಅಧ್ಯಕ್ಷ ಝೆಲೆನ್ಸ್ಕಿಯವರನ್ನು ಭೇಟಿಯಾಗಿದ್ದಾರೆ. ಆದರೆ ಜೋ ಬೈಡನ್​ ಭೇಟಿ ಅಷ್ಟು ಸುಲಭವಲ್ಲ.  ಬೈಡನ್​ ಭೇಟಿ ವಿಷಯದಲ್ಲಿ ಭದ್ರತೆ ಸವಾಲುಗಳೂ ಸಂಕೀರ್ಣವಾಗಿವೆ. ಹೀಗಾಗಿ ಜೋ ಬೈಡನ್​ ಕೀವ್​ಗೆ ತೆರಳುವ ಬಗ್ಗೆ ಯಾವುದೇ ಯೋಜನೆ ರೂಪುಗೊಂಡಿಲ್ಲ. ಅದರ ಬದಲು ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಅಲ್ಲಿಗೆ ಕಳಿಸಲಾಗುವುದು. ಯುಎಸ್​ ರಾಜ್ಯ ಕಾರ್ಯದರ್ಶಿ ಅಂಟೋನಿ ಬ್ಲಿಂಕನ್​ ಅಥವಾ ರಕ್ಷಣಾ ಕಾರ್ಯದರ್ಶಿ ಲಾಯ್ಡ್​ ಆಸ್ಟಿನ್​ ಕೀವ್​ಗೆ ತೆರಳಲಿದ್ದಾರೆ ಎಂದು ವೈಟ್​ ಹೌಸ್​ ತಿಳಿಸಿದೆ. ಕಳೆದ ವಾರ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಜೋ ಬೈಡನ್​, ನಾನು ಕೀವ್​​ಗೆ ಹೋಗುವ ಬಗ್ಗೆ ಯೋಚಿಸುತ್ತೇನೆ, ಶೀಘ್ರದಲ್ಲೇ ನಿರ್ಣಯ ತೆಗೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ  ಈ ವಿಚಾರದಲ್ಲಿ ಕುತೂಹಲ ಮೂಡಿಸಿದ್ದರು.

ಹಾಗೇ, ಬೈಡನ್​ ಭೇಟಿಯ ಬಗ್ಗೆ ಝೆಲೆನ್ಸ್ಕಿ ಕೂಡ ಆಶಯ ವ್ಯಕ್ತಪಡಿಸಿದ್ದರು. ಯುನೈಟೆಡ್​ ಸ್ಟೇಟ್ಸ್​ಗೇ ನಾಯಕ ಅವರು. ಅಂದಮೇಲೆ ಇಲ್ಲೊಮ್ಮೆ ಬಂದು ಯಾಕೆ ಇಲ್ಲಿನ ಪರಿಸ್ಥಿತಿ ವೀಕ್ಷಿಸಬಾರದು? ಎಂದೂ ಪ್ರಶ್ನಿಸಿದ್ದರು. ಉಕ್ರೇನಿಯನ್​ ವಿದೇಶಾಂಗ ಇಲಾಖೆ ಸಚಿವ ಡಿಮಿಟ್ರೋ ಕುಲೆಬಾ ಕೂಡ ಬೈಡನ್​​ರನ್ನು ಹೊಗಳಿದ್ದರು. ಬೈಡನ್ ಉಕ್ರೇನ್​ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ದ ಅವರು, ಒಮ್ಮೆ ಅವರು ಇಲ್ಲಿಗೆ ಭೇಟಿ ಕೊಟ್ಟು ಹೋದರೆ ಉಕ್ರೇನ್​​ಗೆ ಇನ್ನಷ್ಟು ಬಲಬಂದಂತೆ ಆಗುತ್ತದೆ ಎಂದಿದ್ದರು.

ಇದನ್ನೂ ಓದಿ: ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು?- ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಹೆಚ್​ಡಿ ಕುಮಾರಸ್ವಾಮಿ

Published On - 9:56 am, Tue, 19 April 22

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ