AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಂತೂ ಪಾಕಿಸ್ತಾನಕ್ಕೆ ಭದ್ರತಾ ನೆರವು ನೀಡೋದಿಲ್ಲವೆಂದ ಯುಎಸ್​; ಟ್ರಂಪ್​ ನೀತಿಯನ್ನೇ ಮುಂದುವರಿಸಲು ಬೈಡನ್​ ನಿರ್ಧಾರ

ರಾಷ್ಟ್ರದಲ್ಲಿ ಉಗ್ರರನ್ನು ಮಟ್ಟ ಹಾಕಲು ಪಾಕಿಸ್ತಾನ ಸರಿಯಾಗಿ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದ ಡೊನಾಲ್ಡ್ ಟ್ರಂಪ್​ 2018ರ ಜನವರಿಯಲ್ಲಿ ಪಾಕಿಸ್ತಾನಕ್ಕೆ ನೀಡಲಾಗುತ್ತಿದ್ದ ಎಲ್ಲ ರೀತಿಯ ಭದ್ರತಾ ನೆರವನ್ನೂ ಸ್ಥಗಿತಗೊಳಿಸಿದ್ದರು.

ಸದ್ಯಕ್ಕಂತೂ ಪಾಕಿಸ್ತಾನಕ್ಕೆ ಭದ್ರತಾ ನೆರವು ನೀಡೋದಿಲ್ಲವೆಂದ ಯುಎಸ್​; ಟ್ರಂಪ್​ ನೀತಿಯನ್ನೇ ಮುಂದುವರಿಸಲು ಬೈಡನ್​ ನಿರ್ಧಾರ
ಅಮೆರಿಕ ಅಧ್ಯಕ್ಷ ಜೋ ಬೈಡನ್​ (ಸಂಗ್ರಹ ಚಿತ್ರ)
Lakshmi Hegde
|

Updated on: May 25, 2021 | 3:53 PM

Share

ಪಾಕಿಸ್ತಾನಕ್ಕೆ ನೀಡುತ್ತಿದ್ದ ಭದ್ರತಾ ನೆರವನ್ನು ಅಮೆರಿಕದ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಅವರು 2018ರಲ್ಲಿ ಸ್ಥಗಿತಗೊಳಿಸಿದ್ದರು. ಅದೇ ನೀತಿಯನ್ನು ಈಗಿನ ಅಧ್ಯಕ್ಷ ಜೋ ಬೈಡನ್​ ಕೂಡ ಮುಂದುವರಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಚಾರದಲ್ಲಿ ಬದಲಾವಣೆ ಆಗಲಿದೆಯಾ? ಪಾಕಿಸ್ತಾನಕ್ಕೆ ಅಮೆರಿಕದಿಂದ ರಕ್ಷಣಾ ನೆರವು ಸಿಗಲಿದೆಯಾ ಎಂಬುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ​

ರಾಷ್ಟ್ರದಲ್ಲಿ ಉಗ್ರರನ್ನು ಮಟ್ಟ ಹಾಕಲು ಪಾಕಿಸ್ತಾನ ಸರಿಯಾಗಿ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದ ಡೊನಾಲ್ಡ್ ಟ್ರಂಪ್​ 2018ರ ಜನವರಿಯಲ್ಲಿ ಪಾಕಿಸ್ತಾನಕ್ಕೆ ನೀಡಲಾಗುತ್ತಿದ್ದ ಎಲ್ಲ ರೀತಿಯ ಭದ್ರತಾ ನೆರವನ್ನೂ ಸ್ಥಗಿತಗೊಳಿಸಿದ್ದರು. ಅದೇ ನೀತಿಯನ್ನು ಮುಂದುವರಿಸುವುದಾಗಿ ಯುಎಸ್​ ರಕ್ಷಣಾ ಇಲಾಖೆಯ ಪ್ರಧಾನ ಕಚೇರಿ ಪೆಂಟಗನ್​ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಸದ್ಯದ ಮಟ್ಟಿಗೆ ಪಾಕಿಸ್ತಾನಕ್ಕೆ ಯುಎಸ್​ನಿಂದ ಯಾವುದೇ ಭದ್ರತಾ ನೆರವು ನೀಡುವುದಿಲ್ಲ. ಇದೇ ಕ್ರಮ ಮುಂದುವರಿಯಲಿದೆಯಾ ಅಥವಾ ಮುಂದಿನ ದಿನಗಳಲ್ಲಿ ಬದಲಾಗಲಿದೆಯಾ ಎಂಬುದರ ಬಗ್ಗೆ ಯಾವುದೇ ಊಹೆ ಮಾಡುವುದಿಲ್ಲ ಎಂದು ಪೆಂಟಗನ್​ ಕಚೇರಿಯ ಮಾಧ್ಯಮ ಕಾರ್ಯದರ್ಶಿ ಜಾನ್​ ಕಿರ್ಬಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗೊದಲ್ಲಿ ಸಿಡಿದ ಜ್ವಾಲಾಮುಖಿ, ಆತಂಕದಲ್ಲಿ ಊರುಬಿಟ್ಟು ಓಡುತ್ತಿರುವ ಜನರಿಗೆ ಭಾರತೀಯ ಸೇನೆಯ ನೆರವು

ಕಾಂಗೊದಲ್ಲಿ ಸಿಡಿದ ಜ್ವಾಲಾಮುಖಿ, ಆತಂಕದಲ್ಲಿ ಊರುಬಿಟ್ಟು ಓಡುತ್ತಿರುವ ಜನರಿಗೆ ಭಾರತೀಯ ಸೇನೆಯ ನೆರವು

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!