Russia Ukraine: ಉಕ್ರೇನ್​ಗೆ ಇನ್ನಷ್ಟು ಯುದ್ಧೋಪಕರಣ ಒದಗಿಸಲು ಮುಂದಾದ ಅಮೆರಿಕ

ಉಕ್ರೇನ್ ಸೇನೆಯು ತನ್ನ ದೇಶವನ್ನು ರಕ್ಷಿಸಿಕೊಳ್ಳಲು ಮತ್ತು ರಷ್ಯನ್ ಸೇನೆಯೊಂದಿಗೆ ಹೋರಾಟ ಮುಂದುವರಿಸಲು ಅದರ ಸೇನಾಬಲವನ್ನು ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲು ತನ್ನ ಮಿತ್ರ ರಾಷ್ಟ್ರಗಳು ಮತ್ತು ಬೇರೆ ಸಮಾನಮನಸ್ಕ ರಾಷ್ಟ್ರಗಳ ನೆರವಿನೊಂದಿಗೆ ಯುಎಸ್ ಮುಂದಾಗಿದೆ ಎಂದು ಶ್ವೇತ ಭವನದ ಹೇಳಿಕೆ ತಿಳಿಸುತ್ತದೆ.

Russia Ukraine: ಉಕ್ರೇನ್​ಗೆ ಇನ್ನಷ್ಟು ಯುದ್ಧೋಪಕರಣ ಒದಗಿಸಲು ಮುಂದಾದ ಅಮೆರಿಕ
ಜೋ ಬೈಡೆನ್ ಮತ್ತು ವೊಲೊದಿಮಿರ್ ಜೆಲೆನ್ಸ್ಕಿ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 31, 2022 | 6:39 AM

ವಾಷಿಂಗ್ಟನ್: ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಮುಂದುವರಿದಿದೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ (Vladimir Putin) ಯುದ್ಧ ವಿರಾಮ ಘೋಷಿಸಿಲ್ಲ, ಆದರೆ ಕೀವ್ (Kyiv) ಮೇಲಿನ ಸೇನಾ ಕಾರ್ಯಾಚರಣೆಯ ತೀವ್ರತೆಯನ್ನು ಕಡಿಮೆ ಮಾಡಲಾಗಿದೆಯೇ ಅದನ್ನು ಯುದ್ಧ ವಿರಾಮ ಅಂತ ಭಾವಿಸುವ ಅಗತ್ಯವಿಲ್ಲ ಎಂದಿರುವುದು ಮುಂಬರುವ ದಿನಗಳು ಕರಾಳವಾಗಿರಲಿವೆ ಅನ್ನೋದನ್ನು ಸೂಚಿಸುತ್ತದೆ ಎಂದು ಪಾಶ್ಚಿಮಾತ್ಯ ಮಾಧ್ಯಮಗಳು ಹೇಳುತ್ತಿವೆ. ಏತನ್ಮಧ್ಯೆ, ಯುಎಸ್ ಅಧ್ಯಕ್ಷ ಜೋ ಬೈಡೆನ್ (Joe Biden) ಮತ್ತು ಯುದ್ಧಗ್ರಸ್ತ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಜೆಲೆನ್ಸ್ಕಿ (Volodymyr Zelensky) ನಡುವೆ ಬುಧವಾರದಂದು ದೂರವಾಣಿ ಮೂಲಕ ಮಾತುಕತೆ ನಡೆದಿದ್ದು ಉಕ್ರೇನಿನ ಮಿಲಿಟರಿ ಸಾಮರ್ಥ್ಯವನ್ನು ಬಲಿಪಡಿಸುವ ಕುರಿತು ಉಭಯ ರಾಷ್ಟ್ರಗಳ ನಾಯಕರು ಚರ್ಚಿಸಿದರು ಎಂದು ಶ್ವೇತ ಭವನ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

ರಷ್ಯನ್ ಸೇನೆಯಿಂದ ಕೀವ್ ನಗರದ ಅತಿಕ್ರಮಣ ಮುಂದುವರೆಯುತ್ತಿರುವಂತೆಯೇ ಉಕ್ರೇನ್ ಸರ್ಕಾರಕ್ಕೆ 500 ಮಿಲಿಯನ್ ಡಾಲರ್ ಗಳ ನೇರ ಹಣಕಾಸಿನ ನೆರವು ಒದಗಿಸುವುದಾಗಿ ಬೈಡೆನ್ ಅವರು ಜೆಲೆನ್ಸ್ಕಿ ಗೆ ತಿಳಿಸಿದರು ಎಂದು ಶ್ವೇತ ಭವನದ ಪ್ರಕಟಣೆ ಹೇಳಿದೆ.

ಉಕ್ರೇನ್ ಸೇನೆಯು ತನ್ನ ದೇಶವನ್ನು ರಕ್ಷಿಸಿಕೊಳ್ಳಲು ಮತ್ತು ರಷ್ಯನ್ ಸೇನೆಯೊಂದಿಗೆ ಹೋರಾಟ ಮುಂದುವರಿಸಲು ಅದರ ಸೇನಾಬಲವನ್ನು ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲು ತನ್ನ ಮಿತ್ರ ರಾಷ್ಟ್ರಗಳು ಮತ್ತು ಬೇರೆ ಸಮಾನಮನಸ್ಕ ರಾಷ್ಟ್ರಗಳ ನೆರವಿನೊಂದಿಗೆ ಯುಎಸ್ ಮುಂದಾಗಿದೆ ಎಂದು ಶ್ವೇತ ಭವನದ ಹೇಳಿಕೆ ತಿಳಿಸುತ್ತದೆ.

ಜೆಲೆನ್ಸ್ಕಿ ಅವರು ಬೈಡೆನ್ ಗೆ ತಿಳಿಸಿರುವ ಪ್ರಕಾರ ರಷ್ಯನ್ ಸೇನೆ ಫೆಬ್ರುವರಿ 24 ರಂದು ತನ್ನ ದೇಶದ ಮೇಲೆ ದಂಡೆತ್ತಿ ಬಂದಾಗಿನಿಂದ 20,000 ಕ್ಕಿಂತ ಹೆಚ್ಚು ಜನ ಹತರಾಗಿದ್ದಾರೆ. ಗಾಯಗೊಂಡಿರುವ ಜನರ ಸಂಖ್ಯೆ ಎಷ್ಟಿರಬಹುದೆಂಬ ಸ್ಪಷ್ಟ ಮಾಹಿತಿ ಇಲ್ಲ ಎಂದು ಜೆಲೆನ್ಸ್ಕಿ ಹೇಳಿದ್ದಾರಂತೆ.

ಜೋ ಬೈಡೆನ್ ಅವರೊಂದಿಗೆ ಮಾತಿಕತೆ ಪೂರ್ಣಗೊಂಡ ಬಳಿಕ, ‘ಈಗಷ್ಟೇ ಯುಎಸ್ ಅಧ್ಯಕ್ಷರೊಂದಿಗೆ ಒಂದು ಗಂಟೆ ಕಾಲ ಮಾತುಕತೆ ನಡೆಸಿದೆ,’ ಎಂದು ಜೆಲೆನ್ಸ್ಕಿ ಟ್ವೀಟ್ ಮಾಡಿದ್ದಾರೆ. ಉಕ್ರೇನ ಯುದ್ಧಭೂಮಿಯಲ್ಲಿ ಸ್ಥಿತಿ ಹೇಗಿದೆ ಅಂತ ಅವರಿಗೆ ವಿವರಿಸಿದೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

‘ರಕ್ಷಣಾತ್ಮಕ ಬೆಂಬಲ, ರಷ್ಯಾದ ಮೇಲೆ ಹೇರಬಹುದಾದ ಇನ್ನಷ್ಟು ನಿರ್ಬಂಧಗಳು, ದೊಡ್ಡ ಪ್ರಮಾಣದ ಆರ್ಥಿಕ ನೆರವು ಮತ್ತು ಮಾನವೀಯ ನೆರವಿನ ಬಗ್ಗೆ ಅಧ್ಯಕ್ಷ ಬೈಡೆನ್ ಅವರೊಂದಿಗೆ ಚರ್ಚಿಸಿದೆ,’ ಎಂದು ಬೈಡೆನ್ ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ.

ಮಂಗಳವಾರ ಟರ್ಕಿಯ ಇಸ್ತಾನ್ಬುಲ್ ನಲ್ಲಿ ಉಕ್ರೇನ್ ಮತ್ತು ರಷ್ಯಾ ಮಧ್ಯೆ ನಡೆದು ಮುಖಾಮುಖಿ ಮಾತುಕತೆಯಲ್ಲಿ ಉಕ್ರೇನ್ ರಾಜಧಾನಿ ಕೀವ್ ಮತ್ತು ಚೆರ್ನಿಗಿವ್ ನಗರದ ಸುತ್ತುಮುತ್ತ ಸೇನಾ ಕಾರ್ಯಾಚರಣೆಯನ್ನು ತಗ್ಗಿಸುವ ಬಗ್ಗೆ ರಷ್ಯಾ ಮಾಡಿದ ಪ್ರಮಾಣದ ಮೇಲೆ ಉಕ್ರೇನ್ ಮತ್ತು ಐರೋಪ್ಯ ರಾಷ್ಟ್ರಗಳು ಸಂದೇಹ ವ್ಯಕ್ತಪಡಿಸಿವೆ.

ಇದನ್ನೂ ಓದಿ:   Russia Ukraine War ಸೇನೆ ಹಿಂತೆಗೆತಕ್ಕೆ ಒಪ್ಪಿಗೆ; ಇದು ಕದನ ವಿರಾಮವಲ್ಲ,ಕೀವ್​​ನಲ್ಲಿ ಸೇನಾ ಚಟುವಟಿಕೆ ಕಡಿಮೆ ಮಾಡಲು ಒಪ್ಪಿಕೊಂಡ ರಷ್ಯಾ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ