AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮದ ಮೇಲಿನ ನಂಬಿಕೆಯೇ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಫೂರ್ತಿ: ವಿವೇಕ್ ರಾಮಸ್ವಾಮಿ

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲಿಟ್ಟಿರುವ ನಂಬಿಕೆಯೇ ಸ್ಫೂರ್ತಿ ಎಂದು ಭಾರತ ಮೂಲದ ವಿವೇಕ್ ರಾಮಸ್ವಾಮಿ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ, ಈ ಸಲದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್, ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್​ ರಾಮಸ್ವಾಮಿ ಸೇರಿದಂತೆ ಹಲವರು ರೇಸ್​ನಲ್ಲಿದ್ದಾರೆ.

ಹಿಂದೂ ಧರ್ಮದ ಮೇಲಿನ ನಂಬಿಕೆಯೇ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಫೂರ್ತಿ: ವಿವೇಕ್ ರಾಮಸ್ವಾಮಿ
ವಿವೇಕ್ ರಾಮಸ್ವಾಮಿImage Credit source: Reuters
ನಯನಾ ರಾಜೀವ್
|

Updated on: Nov 19, 2023 | 12:42 PM

Share

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲಿಟ್ಟಿರುವ ನಂಬಿಕೆಯೇ ಸ್ಫೂರ್ತಿ ಎಂದು ಭಾರತ ಮೂಲದ ವಿವೇಕ್ ರಾಮಸ್ವಾಮಿ(Vivek Ramaswamy) ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ, ಈ ಸಲದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್, ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್​ ರಾಮಸ್ವಾಮಿ ಸೇರಿದಂತೆ ಹಲವರು ರೇಸ್​ನಲ್ಲಿದ್ದಾರೆ.

ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲೆ ಇಟ್ಟಿರುವ ನಂಬಿಕೆಯೇ ಕಾರಣ ಎಂದಿದ್ದಾರೆ. ನಾನು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವನು, ಈ ಕಾರಣವೇ ನನ್ನನ್ನು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದೆ, ನಾನೊಬ್ಬ ಹಿಂದೂ ಎಂದು ಹೇಳುಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದಿದ್ದಾರೆ.

ನಾನು ಸಾಂಪ್ರದಾಯಿಕ ಕುಟುಂಬದಲ್ಲಿ ಬೆಳೆದವನು, ಕುಟುಂಬವೇ ಅಡಿಪಾಯ ಎಂದು ನನ್ನ ಪೋಷಕರು ನನಗೆ ಕಲಿಸಿದ್ದಾರೆ. ನಿಮ್ಮ ಹೆತ್ತವರನ್ನು ಗೌರವಿಸಿ ಎಂದರು.

ಮತ್ತಷ್ಟು ಓದಿ: ಟ್ವಿಟ್ಟರ್​ನಲ್ಲಿ ಇಲಾನ್ ಮಸ್ಕ್ ಕತ್ತರಿಹಾಕಿದಂತೆ ನನ್ನ ಆಡಳಿತ ಇರುತ್ತೆ: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ

ಓಹಿಯೋ ಮೂಲದ ಬಯೋಟೆಕ್ ಉದ್ಯಮಿ ಹಿಂದೂ ಮತ್ತು ಕ್ರಿಶ್ಚಿಯನ್ ನಂಬಿಕೆಗಳ ನಡುವಿನ ಹೋಲಿಕೆಗಳನ್ನು ಸಹ ಮಾಡಿದರು. ಅವರ ತಂದೆ ಜನರಲ್ ಎಲೆಕ್ಟ್ರಿಕ್​ ಎಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದರು, ಪೋಷಕರು ಕೇರಳದಿಂದ ಅಮೆರಿಕಕ್ಕೆ ವಲಸೆ ಬಂದವರಾಗಿದ್ದರು. ವಿವೇಕ್ ರಾಮಸ್ವಾಮಿ ಹುಟ್ಟಿ ಬೆಳೆದಿದ್ದು ಅಮೆರಿಕದಲ್ಲಿ, ಇದೇ ದೇಶದಲ್ಲೇ ವಿವಾಹವಾದರು, ಇಬ್ಬರು ಮಕ್ಕಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್