AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

US Election Result: ಚುನಾವಣಾ ಗೆಲುವಿನ ಬಳಿಕ ಮೊದಲ ಭಾಷಣದಲ್ಲಿ ಡೊನಾಲ್ಡ್​ ಟ್ರಂಪ್ ಹೇಳಿದ್ದೇನು?

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಗೆಲುವಿನ ಹಿನ್ನೆಲೆಯಲ್ಲಿ ಟ್ರಂಪ್​ ಮೊದಲ ಭಾಷಣ ಮಾಡಿದ್ದಾರೆ. ದೇಶವನ್ನು ಸುಭದ್ರಗೊಳಿಸಲು ಬೇಕಾದ ಎಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದರು. ಮೇಕ್ ಅಮೆರಿಕ ಗ್ರೇಟ್ ಅಗೇನ್ ಎಂಬ ಘೋಷಣೆಯನ್ನು ಪುನರುಚ್ಚರಿಸಿದ ಡೊನಾಲ್ಡ್ ಟ್ರಂಪ್, ನಾನು ಪ್ರತಿ ಕ್ಷಣವೂ ಅಮೆರಿಕಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.

US Election Result: ಚುನಾವಣಾ ಗೆಲುವಿನ ಬಳಿಕ ಮೊದಲ ಭಾಷಣದಲ್ಲಿ ಡೊನಾಲ್ಡ್​ ಟ್ರಂಪ್ ಹೇಳಿದ್ದೇನು?
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Nov 06, 2024 | 2:04 PM

Share

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಗೆಲುವಿನ ಹಿನ್ನೆಲೆಯಲ್ಲಿ ಟ್ರಂಪ್​ ಮೊದಲ ಭಾಷಣ ಮಾಡಿದ್ದಾರೆ. ದೇಶವನ್ನು ಸುಭದ್ರಗೊಳಿಸಲು ಬೇಕಾದ ಎಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದರು. ಮೇಕ್ ಅಮೆರಿಕ ಗ್ರೇಟ್ ಅಗೇನ್ ಎಂಬ ಘೋಷಣೆಯನ್ನು ಪುನರುಚ್ಚರಿಸಿದ ಡೊನಾಲ್ಡ್ ಟ್ರಂಪ್, ನಾನು ಪ್ರತಿ ಕ್ಷಣವೂ ಅಮೆರಿಕಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.

ಇದು ನನ್ನ ಜೀವನದ ಅತ್ಯಂತ ಮಹತ್ವದ ಕ್ಷಣವಾಗಿದ್ದು, ನನ್ನ ಸರ್ವಸ್ವವನ್ನು ಅಮೆರಿಕಕ್ಕೆ ಸಮರ್ಪಿಸಲಾಗಿದೆ ಎಂದರು. ನಾನು ಪ್ರತಿಯೊಬ್ಬ ನಾಗರಿಕರಿಗಾಗಿ, ನಿಮಗಾಗಿ, ನಿಮ್ಮ ಕುಟುಂಬಕ್ಕಾಗಿ ಮತ್ತು ನಿಮ್ಮ ಭವಿಷ್ಯಕ್ಕಾಗಿ ಹೋರಾಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ. ಪ್ರತಿದಿನ, ನನ್ನ ದೇಹದ ಪ್ರತಿ ಉಸಿರಿನೊಂದಿಗೆ ನಾನು ನಿಮಗಾಗಿ ಹೋರಾಡುತ್ತೇನೆ. ನಾವು ನಮ್ಮ ಮಕ್ಕಳಿಗೆ ನೀವು ಅರ್ಹವಾದ ಬಲವಾದ, ಸುರಕ್ಷಿತ ಮತ್ತು ಸಮೃದ್ಧ ಅಮೆರಿಕವನ್ನು ನೀಡುವವರೆಗೂ ನಾನು ವಿಶ್ರಮಿಸುವುದಿಲ್ಲ.

ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ತಮ್ಮ ಭಾಷಣದಲ್ಲಿ ಉದ್ಯಮಿ ಎಲಾನ್ ಮಸ್ಕ್ ಹೆಸರನ್ನೂ ಪ್ರಸ್ತಾಪಿಸಿದ್ದಾರೆ. ತಮ್ಮ ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದಾರೆ. ಎಲಾನ್ ಮಸ್ಕ್ ಅವರು ಚುನಾವಣೆಯಲ್ಲಿ ಟ್ರಂಪ್ ಅವರನ್ನು ಉತ್ಸಾಹದಿಂದ ಬೆಂಬಲಿಸಿದ್ದಾರೆ ಮತ್ತು ಹಣವನ್ನು ಸಹ ಒದಗಿಸಿದ್ದಾರೆ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರನ್ನು ಅಭಿನಂದಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತ ಡೊನಾಲ್ಡ್​ಟ್ರಂಪ್​ಗೆ ಹೃತ್ಪೂರ್ವಕ ಅಭಿನಂದನೆಗಳು, ಒಟ್ಟಾಗಿ, ನಮ್ಮ ಜನರ ಒಳಿತಿಗಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಕೆಲಸ ಮಾಡೋಣ ಎಂದು ಬರೆದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್