AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

US Shootings: ಅಮೆರಿಕದ ಶಾಲೆಯಲ್ಲಿ ಗುಂಡುಹಾರಾಟ; ಇಬ್ಬರು ವಿದ್ಯಾರ್ಥಿಗಳು ಸಾವು, ಶಿಕ್ಷಕಿಗೆ ಗಾಯ

ಗುಂಡುಹಾರಾಟಕ್ಕೆ ಏನು ಕಾರಣ ಎಂಬ ಬಗ್ಗೆ ಈವರೆಗೆ ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಪೊಲೀಸರು ಬಿಡುಗಡೆ ಮಾಡಿಲ್ಲ.

US Shootings: ಅಮೆರಿಕದ ಶಾಲೆಯಲ್ಲಿ ಗುಂಡುಹಾರಾಟ; ಇಬ್ಬರು ವಿದ್ಯಾರ್ಥಿಗಳು ಸಾವು, ಶಿಕ್ಷಕಿಗೆ ಗಾಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 24, 2023 | 7:34 AM

Share

ಇಯೊವಾ: ಅಮೆರಿಕದ ಇಯೊವಾ (Iowa) ನಗರದ ಶಾಲೆಯಲ್ಲಿ ನಡೆದ ಅಪ್ರಚೋದಿತ ಗುಂಡು ಹಾರಾಟದಲ್ಲಿ (Shooting in America) ಇಬ್ಬರು ಮೃತಪಟ್ಟು, ಶಿಕ್ಷಕಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇತರ ಮೂವರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯ ನಂತರ ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಆಧರಿಸಿ ಕಾರೊಂದನ್ನು ತಡೆದು ನಿಲ್ಲಿಸಿದ ಪೊಲೀಸರು ಮೂವರು ಸಂಭಾವ್ಯ ಶಂಕಿತರನ್ನು ವಶಕ್ಕೆ ತೆಗೆದುಕೊಂಡರು. ಗುಂಡುಹಾರಾಟಕ್ಕೆ ಏನು ಕಾರಣ ಎಂಬ ಬಗ್ಗೆ ಈವರೆಗೆ ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಪೊಲೀಸರು ಬಿಡುಗಡೆ ಮಾಡಿಲ್ಲ.

‘ಘಟನೆಯಲ್ಲಿ ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳಾಗಿದ್ದಾರೆ. ಅವರ ವಯಸ್ಸು ನಿಖರವಾಗಿ ಗೊತ್ತಿಲ್ಲ. ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯು ಶಾಲೆಯ ಸಿಬ್ಬಂದಿಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸ್ ಇಲಾಖೆಯ ವಕ್ತಾರ ಡೆಸ್ ಮೊಯಿನ್ಸ್​ ಹೇಳಿದ್ದಾರೆ.

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಶನಿವಾರ ಸಂಜೆಯಷ್ಟೇ ಗುಂಡಿನದಾಳಿ ನಡೆದು 11 ಮಂದಿ ಮೃತಪಟ್ಟಿದ್ದರು. ಘಟನೆಯ ಸಂಬಂಧ 72 ವರ್ಷದ ಏಷ್ಯಾ ವಲಸಿಗನನ್ನು ಪೊಲೀಸರು ಪತ್ತೆಮಾಡಿ ಬಂಧಿಸಲು ಯತ್ನಿಸಿದ್ದರು. ಆದರೆ ಅವನು ಸ್ವತಃ ಗುಂಡುಹಾರಿಸಿಕೊಂಡು ಮೃತಪಟ್ಟಿದ್ದ.

ಇದನ್ನೂ ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಮತ್ತಷ್ಟು ವಿದೇಶ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 am, Tue, 24 January 23

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್