AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್​ ನಡುವೆ ಯುದ್ಧಾತಂಕ; ನ್ಯಾಟೋ ಬಲವರ್ಧನೆಗೆ 3000 ಯೋಧರನ್ನು ಪೂರ್ವ ಯುರೋಪ್​ಗೆ ಕಳಿಸಿದ ಯುಎಸ್​​

ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುತಿನ್​ ಅವರು ತುಂಬ ಆಕ್ರಮಣಕಾರಿಯಾಗಿ ವರ್ತಿಸುತ್ತಿದ್ದಾರೆ. ಅವರು ಹಾಗೆ ನಡೆದುಕೊಳ್ಳುವವರೆಗೂ ನಾವು ನ್ಯಾಟೋ ಮಿತ್ರರಾಷ್ಟ್ರಗಳು ಉಕ್ರೇನ್​ಗೆ ಎಲ್ಲ ರೀತಿಯ ಬೆಂಬಲವನ್ನೂ ನೀಡುತ್ತಲೇ ಇರುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್​ ಹೇಳಿದ್ದಾರೆ. 

ರಷ್ಯಾ-ಉಕ್ರೇನ್​ ನಡುವೆ ಯುದ್ಧಾತಂಕ; ನ್ಯಾಟೋ ಬಲವರ್ಧನೆಗೆ 3000 ಯೋಧರನ್ನು ಪೂರ್ವ ಯುರೋಪ್​ಗೆ ಕಳಿಸಿದ ಯುಎಸ್​​
ಉಕ್ರೇನ್​ ಗಡಿಯ ಸೆಟಲೈಟ್ ಚಿತ್ರ
TV9 Web
| Edited By: |

Updated on:Feb 12, 2022 | 4:09 PM

Share

ದೆಹಲಿ: ರಷ್ಯಾ ಮತ್ತು ಉಕ್ರೇನ್​ ಮಧ್ಯೆ ಯುದ್ಧ ಸನ್ನಿವೇಶ ಉಂಟಾಗಿದೆ. ಯಾವುದೇ ಕ್ಷಣದಲ್ಲೂ ಆಕ್ರಮಣ ತೀವ್ರಗೊಳ್ಳಬಹುದು ಎಂಬ ಆತಂಕದ ಮಧ್ಯೆಯೇ ರಷ್ಯಾ ಇದೀಗ ತನ್ನ ಸಾವಿರಾರು ಸೈನಿಕರನ್ನು, ಫಿರಂಗಿಗಳನ್ನು, ಯೋಧರಿಗಾಗಿ ರಕ್ಷಾಕವಚಗಳನ್ನು ಉಕ್ರೇನ್​ ಗಡಿಗೆ ಕಳಿಸುತ್ತಿರುವುದು ಸೆಟಲೈಟ್​ ಫೋಟೋದಲ್ಲಿ ಕಂಡುಬಂದಿದೆ. ಒಂದೆಡೆ ರಷ್ಯಾ ತನ್ನ ಸೈನ್ಯ ಬಲ ಏರಿಸುತ್ತಿದ್ದರೆ, ಇನ್ನೊಂದೆಡೆ  ಅಮೆರಿಕ ಮತ್ತು ಮಿತ್ರರಾಷ್ಟ್ರ ಗಳು ತಮ್ಮ ಸೇನಾ ಒಕ್ಕೂಟವಾದ  ಉತ್ತರ ಅಟ್ಲಾಂಟಿಕ್ ಒಪ್ಪಂದ ಸಂಸ್ಥೆ (North Atlantic Treaty Organization- NATO )ಯ ಪಡೆಯನ್ನು ಉಕ್ರೇನ್​ಗೆ ಕಳಿಸಿ, ಸಹಕಾರ ನೀಡುತ್ತಿವೆ.

ಯುಎಸ್​ ಬುಧವಾರ ಸುಮಾರು ಮೂರು ಸಾವಿರ ಸೈನಿಕರನ್ನು ಪೂರ್ವ ಯುರೋಪ್​ಗೆ ಕಳಿಸುವ ಮೂಲಕ ನ್ಯಾಟೋ ಪಡೆಯನ್ನು ಬಲಗೊಳಿಸಿದೆ.  ಉಕ್ರೇನ್ ಬಾರ್ಡರ್​ನಲ್ಲಿ ಲಕ್ಷಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಿರುವ ರಷ್ಯಾ ಅವರನ್ನು ಹಿಂಪಡೆಯಲು ಹಿಂದೇಟು ಹಾಕುತ್ತಿದೆ. ಯುಎಸ್ ಮತ್ತು ಮಿತ್ರ ರಾಷ್ಟ್ರಗಳು ಈಗಾಗಲೇ ಉಕ್ರೇನ್​​ ಸಹಾಯಕ್ಕೆ ನಿಂತಿದ್ದು, ಯಾವುದೇ ಕ್ಷಣಕ್ಕೆ ಸಿದ್ಧವಾಗುವಂತೆ ಅಮೆರಿಕ ತನ್ನ ಸುಮಾರು 8500 ಯೋಧರಿಗೆ ಹೇಳಿದೆ. ಬುಧವಾರ ಜರ್ಮನಿಯಲ್ಲಿದ್ದ ಯುಎಸ್​ನ 1000 ಯೋಧರನ್ನು ರೋಮಾನಿಯಾಕ್ಕೆ ಕಳಿಸಲಾಗಿದ್ದು ಮತ್ತು ಯುಸ್​​ನಲ್ಲಿದ್ದ 2000 ಸೈನಿಕರನ್ನು ಜರ್ಮನಿ ಮತ್ತು ಪೋಲ್ಯಾಂಡ್​ಗೆ ಕಳಿಸಲಾಗಿದೆ.  ಒಟ್ಟಾರೆ ನ್ಯಾಟೋ ಪಡೆಗಳು ಉಕ್ರೇನ್​​ಗೆ ರಕ್ಷಾ ಕವಚದಂತೆ ನಿಂತಿವೆ.

ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುತಿನ್​ ಅವರು ತುಂಬ ಆಕ್ರಮಣಕಾರಿಯಾಗಿ ವರ್ತಿಸುತ್ತಿದ್ದಾರೆ. ಅವರು ಹಾಗೆ ನಡೆದುಕೊಳ್ಳುವವರೆಗೂ ನಾವು ನ್ಯಾಟೋ ಮಿತ್ರರಾಷ್ಟ್ರಗಳು ಉಕ್ರೇನ್​ಗೆ ಎಲ್ಲ ರೀತಿಯ ಬೆಂಬಲವನ್ನೂ ನೀಡುತ್ತಲೇ ಇರುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್​ ಹೇಳಿದ್ದಾರೆ.  ಆದರೆ ಯುಎಸ್ ಹೆಚ್ಚುವರಿ ಸೈನಿಕರನ್ನು ಜಮಾವಣೆ ಮಾಡಿದ್ದಕ್ಕೆ ರಷ್ಯಾ ಕಿಡಿಕಾರಿದೆ. ಯುಎಸ್​ ವಿನಾಶಕಾರಿ ಹೆಜ್ಜೆಯನ್ನಟ್ಟಿದೆ ಎಂದು ರಷ್ಯಾ ವಿದೇಶಾಂಗ ವ್ಯವಹಾರಗಳ ಕಿರಿಯ ಸಚಿವ ಅಲೆಕ್ಸಾಂಡರ್  ಗ್ರುಷ್ಕೋ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್​ಅಪ್​ನ್ನು ಹೆಚ್ಚಿಸಲು ಇಲ್ಲಿವೆ ಆರು ಉಪಯುಕ್ತ ಮಾಹಿತಿ

Published On - 11:51 am, Thu, 3 February 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ