AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

America Hate Crime: ಪ್ರತ್ಯೇಕ ಘಟನೆಗಳಲ್ಲಿ ಮೂವರ ಸಾವು, ಅಮೆರಿಕದ ವಿವಿಧೆಡೆ ಹಿಂಸಾಚಾರ

ನ್ಯೂಯಾರ್ಕ್ ನಗರದ ದಿನಸಿ ಅಂಗಡಿಯಲ್ಲಿ ಗುಂಡಿನ ದಾಳಿ ನಡೆದ ಒಂದು ದಿನದ ನಂತರ ಈ ಘಟನೆಗಳು ವರದಿಯಾಗಿವೆ.

America Hate Crime: ಪ್ರತ್ಯೇಕ ಘಟನೆಗಳಲ್ಲಿ ಮೂವರ ಸಾವು, ಅಮೆರಿಕದ ವಿವಿಧೆಡೆ ಹಿಂಸಾಚಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 16, 2022 | 11:52 AM

ವಾಷಿಂಗ್​ಟನ್: ಅಮೆರಿಕದ ವಿವಿಧೆಡೆ ವರದಿಯಾಗಿರುವ ಎರಡು ಪ್ರತ್ಯೇಕ ಗುಂಡು ಹಾರಾಟ ಪ್ರಕರಣದಲ್ಲಿ ಕನಿಷ್ಠ ಪಕ್ಷ ಮೂವರು ಮೃತಪಟ್ಟಿದ್ದಾರೆ. ನ್ಯೂಯಾರ್ಕ್ ನಗರದ ದಿನಸಿ ಅಂಗಡಿಯಲ್ಲಿ ಗುಂಡಿನ ದಾಳಿ ನಡೆದ ಒಂದು ದಿನದ ನಂತರ ಈ ಘಟನೆಗಳು ವರದಿಯಾಗಿವೆ. ಲಾಸ್​ ಏಂಜಲೀಸ್ ನಗರದ ಚರ್ಚ್ ಒಂದರಲ್ಲಿ ಮುಂಜಾನೆಯ ಪ್ರಾರ್ಥನಾ ಸೇವೆಗಳು ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿ ಗುಂಡು ಹಾರಿಸಿದ. ಈ ವೇಳೆ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟರೆ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡರು.

ಸುಮಾರು 60 ವರ್ಷ ವಯಸ್ಸಿನ ಏಷ್ಯನ್ ಮೂಲದ ಪುರುಷನನ್ನು ಈ ಪ್ರಕರಣದ ಮುಖ್ಯ ಆರೋಪಿ ಎಂಬ ಶಂಕೆಯ ಮೇರೆಗೆ ಸ್ಥಳೀಯರು ಹಿಡಿದು, ಕಟ್ಟಿಹಾಕಿದ್ದಾರೆ. ಈತನಿಂದ ಎರಡು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟವರೂ ಸಹ ಬಹುತೇಕ ಏಷ್ಯನ್ನರು ಮತ್ತು ತೈವಾನ್ ಮೂಲದವರು ಎಂದು ಹೇಳಲಾಗಿದೆ.

ಈ ನಡುವೆ ಟೆಕ್ಸಾಸ್​ನ ಹ್ಯಾರಿಸ್ ಕೌಂಟಿಯಲ್ಲಿಯೂ ದಿನಬಳಕೆ ವಸ್ತುಗಳ ಮಾರುಕಟ್ಟೆಯಲ್ಲಿ ಗುಂಡು ಹಾರಾಟ ನಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರು. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಎರಡು ಗುಂಪುಗಳ ನಡುವೆ ನಡೆದ ವಾದ ವಿವಾದಗಳು ವಿಕೋಪಕ್ಕೆ ಹೋಗಿ ಹಿಂಸಾಚಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಹಲವು ಸುತ್ತುಗಳ ಗುಂಡಿನ ಹಾರಾಟ ನಡೆದಿದೆ. ಎರಡು ಪಿಸ್ತೂಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶನಿವಾರ ನಡೆದಿದ್ದ ಗುಂಡಿನ ದಾಳಿಯಲ್ಲಿ 18 ವರ್ಷದ ಹುಡುಗನೊಬ್ಬ ನ್ಯೂಯಾರ್ಕ್​ನ ದಿನಸಿ ಅಂಗಡಿಯಲ್ಲಿ ನಡೆಸಿದ್ದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದರು. ಈ ದಾಳಿಯನ್ನು ಅವನು ಲೈವ್​ಸ್ಟ್ರೀಮ್ ಮಾಡಿದ್ದ. ನಂತರ ಪೊಲೀಸರು ಅವನನ್ನು ಬಂಧಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:52 am, Mon, 16 May 22

ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?