AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

America Hate Crime: ಪ್ರತ್ಯೇಕ ಘಟನೆಗಳಲ್ಲಿ ಮೂವರ ಸಾವು, ಅಮೆರಿಕದ ವಿವಿಧೆಡೆ ಹಿಂಸಾಚಾರ

ನ್ಯೂಯಾರ್ಕ್ ನಗರದ ದಿನಸಿ ಅಂಗಡಿಯಲ್ಲಿ ಗುಂಡಿನ ದಾಳಿ ನಡೆದ ಒಂದು ದಿನದ ನಂತರ ಈ ಘಟನೆಗಳು ವರದಿಯಾಗಿವೆ.

America Hate Crime: ಪ್ರತ್ಯೇಕ ಘಟನೆಗಳಲ್ಲಿ ಮೂವರ ಸಾವು, ಅಮೆರಿಕದ ವಿವಿಧೆಡೆ ಹಿಂಸಾಚಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 16, 2022 | 11:52 AM

Share

ವಾಷಿಂಗ್​ಟನ್: ಅಮೆರಿಕದ ವಿವಿಧೆಡೆ ವರದಿಯಾಗಿರುವ ಎರಡು ಪ್ರತ್ಯೇಕ ಗುಂಡು ಹಾರಾಟ ಪ್ರಕರಣದಲ್ಲಿ ಕನಿಷ್ಠ ಪಕ್ಷ ಮೂವರು ಮೃತಪಟ್ಟಿದ್ದಾರೆ. ನ್ಯೂಯಾರ್ಕ್ ನಗರದ ದಿನಸಿ ಅಂಗಡಿಯಲ್ಲಿ ಗುಂಡಿನ ದಾಳಿ ನಡೆದ ಒಂದು ದಿನದ ನಂತರ ಈ ಘಟನೆಗಳು ವರದಿಯಾಗಿವೆ. ಲಾಸ್​ ಏಂಜಲೀಸ್ ನಗರದ ಚರ್ಚ್ ಒಂದರಲ್ಲಿ ಮುಂಜಾನೆಯ ಪ್ರಾರ್ಥನಾ ಸೇವೆಗಳು ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿ ಗುಂಡು ಹಾರಿಸಿದ. ಈ ವೇಳೆ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟರೆ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡರು.

ಸುಮಾರು 60 ವರ್ಷ ವಯಸ್ಸಿನ ಏಷ್ಯನ್ ಮೂಲದ ಪುರುಷನನ್ನು ಈ ಪ್ರಕರಣದ ಮುಖ್ಯ ಆರೋಪಿ ಎಂಬ ಶಂಕೆಯ ಮೇರೆಗೆ ಸ್ಥಳೀಯರು ಹಿಡಿದು, ಕಟ್ಟಿಹಾಕಿದ್ದಾರೆ. ಈತನಿಂದ ಎರಡು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟವರೂ ಸಹ ಬಹುತೇಕ ಏಷ್ಯನ್ನರು ಮತ್ತು ತೈವಾನ್ ಮೂಲದವರು ಎಂದು ಹೇಳಲಾಗಿದೆ.

ಈ ನಡುವೆ ಟೆಕ್ಸಾಸ್​ನ ಹ್ಯಾರಿಸ್ ಕೌಂಟಿಯಲ್ಲಿಯೂ ದಿನಬಳಕೆ ವಸ್ತುಗಳ ಮಾರುಕಟ್ಟೆಯಲ್ಲಿ ಗುಂಡು ಹಾರಾಟ ನಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರು. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಎರಡು ಗುಂಪುಗಳ ನಡುವೆ ನಡೆದ ವಾದ ವಿವಾದಗಳು ವಿಕೋಪಕ್ಕೆ ಹೋಗಿ ಹಿಂಸಾಚಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಹಲವು ಸುತ್ತುಗಳ ಗುಂಡಿನ ಹಾರಾಟ ನಡೆದಿದೆ. ಎರಡು ಪಿಸ್ತೂಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶನಿವಾರ ನಡೆದಿದ್ದ ಗುಂಡಿನ ದಾಳಿಯಲ್ಲಿ 18 ವರ್ಷದ ಹುಡುಗನೊಬ್ಬ ನ್ಯೂಯಾರ್ಕ್​ನ ದಿನಸಿ ಅಂಗಡಿಯಲ್ಲಿ ನಡೆಸಿದ್ದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದರು. ಈ ದಾಳಿಯನ್ನು ಅವನು ಲೈವ್​ಸ್ಟ್ರೀಮ್ ಮಾಡಿದ್ದ. ನಂತರ ಪೊಲೀಸರು ಅವನನ್ನು ಬಂಧಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:52 am, Mon, 16 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು