ಭಾರತದ ಆಂತರಿಕ ವಿಷಯಗಳ ಬಗ್ಗೆ ಮತ್ತೆ ಮಾತಾಡಿದ ಅಮೆರಿಕ, ಕೇಜ್ರಿವಾಲ್ ಬಂಧನ, ಕಾಂಗ್ರೆಸ್​ ಖಾತೆ ಸ್ಥಗಿತ ಪ್ರಸ್ತಾಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದಾದ ಬಳಿಕವೂ ಭಾರತದ ಆಂತರಿಕ ವಿಚಾರದ ಬಗ್ಗೆ ಅಮೆರಿಕ(America) ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದೆ. ಮೊದಲಿಗೆ, ಅರವಿಂದ್ ಕೇಜ್ರಿವಾಲ್ ಬಂಧನ ಮತ್ತು ಈಗ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಅಮೆರಿಕ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಭಾರತದ ಆಂತರಿಕ ವಿಷಯಗಳ ಬಗ್ಗೆ ಮತ್ತೆ ಮಾತಾಡಿದ ಅಮೆರಿಕ, ಕೇಜ್ರಿವಾಲ್ ಬಂಧನ, ಕಾಂಗ್ರೆಸ್​ ಖಾತೆ ಸ್ಥಗಿತ ಪ್ರಸ್ತಾಪ
ಮ್ಯಾಥ್ಯೂ ಮಿಲ್ಲರ್

Updated on: Mar 28, 2024 | 11:10 AM

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದಾದ ಬಳಿಕವೂ ಭಾರತದ ಆಂತರಿಕ ವಿಚಾರದ ಬಗ್ಗೆ ಅಮೆರಿಕ(America) ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದೆ. ಮೊದಲಿಗೆ, ಅರವಿಂದ್ ಕೇಜ್ರಿವಾಲ್ ಬಂಧನ ಮತ್ತು ಈಗ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಅಮೆರಿಕ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಅಮೆರಿಕದ ರಕ್ಷಣಾ ಇಲಾಖೆ ವಕ್ತಾರ ಮ್ಯಾಥ್ಯೂ ಬುಧವಾರ ತಮ್ಮ ನಿಲುವನ್ನು ಪುನರುಚ್ಚರಿಸಿ, ನ್ಯಾಯಸಮ್ಮತ, ಪಾರದರ್ಶಕ ಹಾಗೂ ಸಕಾಲಿಕ ಕಾನೂನು ಕ್ರಮಗಳನ್ನು ವಾಷಿಂಗ್ಟನ್ ಸ್ವಾಗತಿಸುತ್ತದೆ ಎಂದಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಸೇರಿದಂತೆ ಹಲವು ಕ್ರಮಗಳನ್ನು ನಾವು ನಿಕಟವಾಗಿ ಗಮನಿಸುತ್ತಿದ್ದೇವೆ ಎಂದು ಮಿಲ್ಲರ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿರುವುದರ ಬಗ್ಗೆ ಕೇಳಿದ ಪ್ರಶ್ನೆಗೂ ಉತ್ತರಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸೌತ್ ಬ್ಲಾಕ್ ಕಚೇರಿಯಲ್ಲಿ ಸುಮಾರು 40 ನಿಮಿಷಗಳ ಕಾಲ ಸಭೆ ನಡೆದಿದ್ದು, ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಭಾರತದ ಕಾನೂನು ಪ್ರಕ್ರಿಯೆಗಳು ವಸ್ತುನಿಷ್ಠ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿರುವ ಸ್ವತಂತ್ರ ನ್ಯಾಯಾಂಗವನ್ನು ಆಧರಿಸಿವೆ. ಅದರ ವಿರುದ್ಧ ಆರೋಪಗಳನ್ನು ಮಾಡುವುದು ಸೂಕ್ತವಲ್ಲ ಎಂದು ಸಚಿವಾಲಯ ಪ್ರತಿಪಾದಿಸಿದೆ.

ಮತ್ತಷ್ಟು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ; ಏಪ್ರಿಲ್ 3ರಂದು ಮುಂದಿನ ವಿಚಾರಣೆ

ಕೇಜ್ರಿವಾಲ್ ನ್ಯಾಯಯುತ ವಿಚಾರಣೆಗೆ ಅರ್ಹರು ಎಂದು ಜರ್ಮನಿಯ ವಿದೇಶಾಂಗ ಕಚೇರಿ ಒತ್ತಿ ಹೇಳಿದ ದಿನಗಳ ನಂತರ ಅಮೆರಿಕ ಹೇಳಿಕೆ ನೀಡಿದೆ. ಆಂತರಿಕ ವ್ಯವಹಾರಗಳಲ್ಲಿ ಬಲವಂತದ ಹಸ್ತಕ್ಷೇಪ ಎಂದು ಭಾರತ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us