AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಯಾದಲ್ಲಿ ಇರಾನ್​ನ ಬೆಂಬಲಿತ ಶಸ್ತ್ರಾಸ್ತ್ರ ಸಂಗ್ರಹಾಗಾರದ ಮೇಲೆ ಅಮೆರಿಕ ದಾಳಿ, 9 ಮಂದಿ ಸಾವು

ಸಿರಿಯಾದಲ್ಲಿ ಇರಾನ್ ಬೆಂಬಲಿತ ಭಯೋತ್ಪಾದಕ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಶಸ್ತ್ರಾಸ್ತ್ರ ಸಂಗ್ರಹಣಾಗಾರದ ಮೇಲೆ ಅಮೆರಿಕ ದಾಳಿ ನಡೆಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಎರಡು ವಾರಗಳಲ್ಲಿ ಎರಡನೇ ಬಾರಿಗೆ, ಸಿರಿಯಾದಲ್ಲಿ ಒಂದು ಸ್ಥಳವನ್ನು ಗುರಿಯಾಗಿಸಲಾಗಿದೆ. ಕಳೆದ ತಿಂಗಳು, ಈ ಗುಂಪುಗಳು ಸಿರಿಯಾದಲ್ಲಿ ಅಮೆರಿಕದ ಸೈನಿಕರು ಮತ್ತು ಸೇನಾ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದವು.

ಸಿರಿಯಾದಲ್ಲಿ ಇರಾನ್​ನ ಬೆಂಬಲಿತ ಶಸ್ತ್ರಾಸ್ತ್ರ ಸಂಗ್ರಹಾಗಾರದ ಮೇಲೆ ಅಮೆರಿಕ ದಾಳಿ, 9 ಮಂದಿ ಸಾವು
ಅಮೆರಿಕ ಯುದ್ಧ ವಿಮಾನImage Credit source: India Today
ನಯನಾ ರಾಜೀವ್
|

Updated on:Nov 09, 2023 | 9:25 AM

Share

ಸಿರಿಯಾದಲ್ಲಿ ಇರಾನ್(Iran) ಬೆಂಬಲಿತ ಭಯೋತ್ಪಾದಕ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಶಸ್ತ್ರಾಸ್ತ್ರ ಸಂಗ್ರಹಣಾಗಾರದ ಮೇಲೆ ಅಮೆರಿಕ ದಾಳಿ ನಡೆಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಎರಡು ವಾರಗಳಲ್ಲಿ ಎರಡನೇ ಬಾರಿಗೆ, ಸಿರಿಯಾದಲ್ಲಿ ಒಂದು ಸ್ಥಳವನ್ನು ಗುರಿಯಾಗಿಸಲಾಗಿದೆ. ಕಳೆದ ತಿಂಗಳು, ಈ ಗುಂಪುಗಳು ಸಿರಿಯಾದಲ್ಲಿ ಅಮೆರಿಕದ ಸೈನಿಕರು ಮತ್ತು ಸೇನಾ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದವು.

ಇರಾನ್ ಬೆಂಬಲಿತ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಇಸ್ರೇಲ್-ಹಮಾಸ್ ಹೋರಾಟವನ್ನು ಪ್ರಾದೇಶಿಕ ಯುದ್ಧವಾಗಿ ಪರಿವರ್ತಿಸುವುದರಿಂದ ಇರಾನ್ ಮತ್ತು ಅದರ ಪ್ರಾಕ್ಸಿಗಳನ್ನು ತಡೆಯಲು ಯುನೈಟೆಡ್ ಸ್ಟೇಟ್ಸ್ ಪ್ರಯತ್ನಿಸುತ್ತಿದೆ. ಆದರೆ ಪುನರಾವರ್ತಿತ ದಾಳಿಗಳು ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಸಂಘರ್ಷಕ್ಕೆ ಅಪಾಯವನ್ನುಂಟು ಮಾಡುತ್ತವೆ.

ಯುಎಸ್ ಮಿಲಿಟರಿಯು ಅಕ್ಟೋಬರ್ 26 ರಂದು ಸಿರಿಯಾದಲ್ಲಿ ಎರಡು ಕಡೆ ದಾಳಿ ನಡೆಸಿತ್ತು.ಅಕ್ಟೋಬರ್ 17 ರಿಂದ ರಾಕೆಟ್‌ಗಳು ಮತ್ತು ಡ್ರೋನ್‌ಗಳಿಂದ 40 ಕ್ಕೂ ಹೆಚ್ಚು ಬಾರಿ ಗುರಿಯಾಗಿಸಿಕೊಂಡು ದಾಳಿ ಮಾಡಿತ್ತು ಎಂದು ಹೇಳಿದೆ.

ಮತ್ತಷ್ಟು ಓದಿ: ಇಸ್ರೇಲ್​ನಿಂದ ವೈಮಾನಿಕ ದಾಳಿ, 8 ಸಿರಿಯಾ ಸೈನಿಕರು ಸಾವು

ಅಕ್ಟೋಬರ್ 26 ರಂದು ಸಿರಿಯಾದಲ್ಲಿ ಇರಾನ್​ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್​ ಕಾರ್ಪ್ಸ್​ ಮತ್ತು ಬೆಂಬಲಿತ ಗುಂಪುಗಳ ಎರಡು ನೆಲೆಗಳ ಮೇಲೆ ಅಮೆರಿಕ ಸೇನೆ ದಾಳಿ ನಡೆಸಿತ್ತು.

ಸಿರಿಯಾ ಹಾಗೂ ಇರಾಕ್​ನಲ್ಲಿ ಅಮೆರಿಕದ ಸೇನೆ ವಿರುದ್ಧ ನಡೆಸಿದ ದಾಳಿಗೆ ಪ್ರತಿಯಾಗಿ ದಆಳಿ ನಡೆಸಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಆದೇಶ ಹೊರಡಿಸಿದ್ದರು.

ಇಸ್ರೇಲ್ ಹಾಗೂ ಹಮಾಸ್ ನಡುವಿನ ಸಂಘರ್ಷ ತೀವ್ರಗೊಂಡಿರುವ ಹಾಗೆಯೇ ಇರಾಕ್ ಹಾಗೂ ಸಿರಿಯಾದಲ್ಲಿ ಇರಾನ್ ಬೆಂಬಲಿತ ಪಡೆಗಳು ಅಮೆರಿಕ ಮತ್ತು ಮೈತ್ರಿ ಪಡೆಗಳ ಮೇಲೆ ಕನಿಷ್ಠ 19 ಬಾರಿ ದಾಳಿ ನಡೆಸಿವೆ.

ಅಮೆರಿಕ ಸೇನೆಯ ವಿರುದ್ಧ ಬೆಂಬಲಿತ ಪಡೆಗಳ ದಾಳಿ ತಕ್ಷಣ ನಿಲ್ಲಬೇಕು, ಒಂದು ವೇಳೆ ದಾಳಿ ಮುಂದುವರೆದರೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೆಂಟಗನ್ ಎಚ್ಚರಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:21 am, Thu, 9 November 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್