AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

US Strikes on Iran: ಇರಾನ್ ಮೇಲೆ ದಾಳಿ ಮಾಡಿ ಮೈಕ್ ಎದುರು ಶಾಂತಿ ಮಂತ್ರ ಜಪಿಸಿದ ಟ್ರಂಪ್

ಇರಾನ್‌ನ ಮೂರು ಪರಮಾಣು ತಾಣಗಳನ್ನು ಗುರಿಯಾಗಿಸಿಕೊಂಡು ಪ್ರಾರಂಭಿಸಲಾದ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿದ್ದಾರೆ.ಈ ಸಂದರ್ಭದಲ್ಲಿ, ಅಮೆರಿಕ ಇರಾನ್ ಮೇಲೆ ದೊಡ್ಡ ದಾಳಿ ನಡೆಸಿದೆ ಎಂದು ಹೇಳಿದರು. ಬೇರೆ ಯಾವುದೇ ಸೈನ್ಯವು ಇದನ್ನು ಮಾಡಲು ಸಾಧ್ಯವಿಲ್ಲ. ಅಂತಹ ಹೆಜ್ಜೆ ಇಡದಿರಲು ನಾನು ತುಂಬಾ ಪ್ರಯತ್ನಿಸಿದೆ, ಆದರೆ ನಮಗೆ ಬೇರೆ ಆಯ್ಕೆ ಉಳಿದಿರಲಿಲ್ಲ. ಈಗ ಇರಾನ್ ಶಾಂತಿಯ ಹಾದಿಗೆ ಮರಳಬೇಕು ಎಂದರು. ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆ ಅಮೆರಿಕವು ಇರಾನ್‌ನ ಮೂರು ಪರಮಾಣು ಸೌಲಭ್ಯಗಳ ಮೇಲೆ ದಾಳಿ ಮಾಡಿದ ನಂತರ, ಅಮೆರಿಕ ಅಧ್ಯಕ್ಷರು ಇರಾನ್ ಶಾಂತಿಯ ಹಾದಿಗೆ ಮರಳಲು ಇನ್ನೂ ಸಮಯವಿದೆ ಎಂದು ಹೇಳಿದರು.

US Strikes on Iran: ಇರಾನ್ ಮೇಲೆ ದಾಳಿ ಮಾಡಿ ಮೈಕ್ ಎದುರು ಶಾಂತಿ ಮಂತ್ರ ಜಪಿಸಿದ ಟ್ರಂಪ್
ಡೊನಾಲ್ಡ್​ ಟ್ರಂಪ್ Image Credit source: NBC News
ನಯನಾ ರಾಜೀವ್
|

Updated on: Jun 22, 2025 | 8:30 AM

Share

ವಾಷಿಂಗ್ಟನ್, ಜೂನ್ 22: ಇರಾನ್​ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಸೇನೆಯು ವೈಮಾನಿಕ ದಾಳಿ ನಡೆದಿದೆ. ಈ ಕುರಿತು ಖುದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮಾಹಿತಿ ನೀಡಿದ್ದು, ಇದೀಗ ಶಾಂತಿಯ ಸಮಯ ಎಂದಿದ್ದಾರೆ. ಒಂದೊಮ್ಮೆ ಈಗ ಶಾಂತಿ ಸ್ಥಾಪಿಸದಿದ್ದರೆ ಮತ್ತೊಮ್ಮೆ ದಾಳಿ ನಡೆಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಈಗ ಅಮೆರಿಕ ಕೂಡ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಬಹಿರಂಗವಾಗಿ ಸೇರಿಕೊಂಡಿದೆ. ಒಂದೊಮ್ಮೆ ಈಗ ಇರಾನ್ ಶಾಂತಿ ಕಾಪಾಡದೆ ಪ್ರತ್ಯುತ್ತರ ನೀಡಲು ಪ್ರಯತ್ನಿಸಿದರೆ ಸಂಪೂರ್ಣ ವಿನಾಶ ಮಾಡುವವರೆಗೂ ನಾವು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಸಾಮಾನ್ಯವಾಗಿ ಯಾವುದೇ ದೇಶಗಳು ತಮ್ಮ ಮೇಲೆ ಬೇರೆ ದೇಶಗಳು ದಾಳಿ ಮಾಡಿದಾಗ ನೋಡಿಕೊಂಡು ಶಾಂತವಾಗಿರಲು ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಮೂರು ಪ್ರಮುಖ ಪರಮಾಣು ತಾಣಗಳಾದ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ಯಶಸ್ವಿಯಾಗಿ ವಾಯುದಾಳಿ ನಡೆಸಿದೆ ಎಂದು ಹೇಳಿದ್ದಾರೆ.ಯುದ್ಧ ವಿಮಾನಗಳು ಪ್ರಮುಖ ಗುರಿಯಾದ ಫೋರ್ಡೊ ಮೇಲೆ ಬಾಂಬ್ ದಾಳಿ ನಡೆಸಿದವು ಮತ್ತು ಈಗ ಎಲ್ಲಾ ವಿಮಾನಗಳು ಸುರಕ್ಷಿತವಾಗಿ ಹಿಂತಿರುಗಿವೆ. ಅವರು ಇದನ್ನು ಅಮೆರಿಕದ ಮಿಲಿಟರಿ ಶಕ್ತಿಯ ಉದಾಹರಣೆ ಎಂದು ಕರೆದರು ಮತ್ತು ಈಗ ಶಾಂತಿಯ ಸಮಯ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ, ಪ್ರಪಂಚದಾದ್ಯಂತ ಮೂರನೇ ಮಹಾಯುದ್ಧದ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಉದ್ವಿಗ್ನತೆಯನ್ನು ಅನೇಕ ಜನರು ಮೂರನೇ ಮಹಾಯುದ್ಧದ ಟ್ರೇಲರ್ ಎಂದೇ ಹೇಳುತ್ತಿದ್ದಾರೆ. ಆದರೆ ಕೆಲವು ವಿಶ್ಲೇಷಕರು ಈ ದಿಕ್ಕಿನಲ್ಲಿ ಚೀನಾ ಮತ್ತು ಪಾಕಿಸ್ತಾನದ ಪಾತ್ರವು ಇನ್ನಷ್ಟು ಅಪಾಯಕಾರಿ ಎಂದು ಹೇಳುತ್ತಾರೆ.

30,000 ಪೌಂಡ್ ತೂಕದ “ಬಂಕರ್ ಬಸ್ಟರ್” ಬಾಂಬ್ ಹೊಂದಿದ ಅಮೆರಿಕನ್ ಸ್ಟೆಲ್ತ್ ಬಾಂಬರ್‌ಗಳು ಮಾತ್ರ ಇರಾನ್​ನ ಫೋರ್ಡೋವ್‌ನಂತಹ ಆಳವಾಗಿ ಹೂತುಹೋಗಿರುವ ಪರಮಾಣು ಸೌಲಭ್ಯಗಳನ್ನು ತಲುಪುವ ಸಾಮರ್ಥ್ಯ ಹೊಂದಿವೆ ಎಂದು ಅಮೆರಿಕ ಮತ್ತು ಇಸ್ರೇಲಿ ಅಧಿಕಾರಿಗಳು ಬಹಳ ಹಿಂದಿನಿಂದಲೂ ವಾದಿಸುತ್ತಿದ್ದಾರೆ. ತನ್ನ ಪರಮಾಣು ನೆಲೆಗಳ ಮೇಲಿನ ದಾಳಿಗಳು ಪ್ರತೀಕಾರಕ್ಕೆ ಕಾರಣವಾಗುತ್ತವೆ ಎಂದು ಇರಾನ್ ಪದೇ ಪದೇ ಎಚ್ಚರಿಸುತ್ತಲೇ ಇದೆ.

ಮತ್ತಷ್ಟು ಓದಿ: ರಾತ್ರೋರಾತ್ರಿ ಇರಾನ್​​ ಮೇಲೆ ಅಮೆರಿಕ ದಾಳಿ: ಮೂರು ಪರಮಾಣು ಕೇಂದ್ರಗಳು ಉಡೀಸ್​!

ಇರಾನ್ ಮೇಲಿನ ದಾಳಿಯಲ್ಲಿ ಅಮೆರಿಕದ ಯಾವುದೇ ಪಾಲ್ಗೊಳ್ಳುವಿಕೆ ತುಂಬಾ ತುಂಬಾ ಅಪಾಯಕಾರಿ ಎಂದು ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಈ ಮೊದಲೇ ಹೇಳಿದ್ದರು. ಇದೀಗ ಅಮೆರಿಕ ಯುದ್ಧಕ್ಕೆ ಎಂಟ್ರಿಯಾಗಿದ್ದು, ಇದು ಯಾವ ಸ್ವರೂಪ ಪಡೆಯುತ್ತದೆ ಎಂದು ಕಾದು ನೋಡಬೇಕಿದೆ.

ಈ ಯುದ್ಧವು ಮಾನವ ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ, ಲಕ್ಷಾಂತರ ಜನರು ಪರಿಣಾಮ ಬೀರುತ್ತಾರೆ, ಜಾಗತಿಕ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ಇಡೀ ಜಗತ್ತು ರಾಜಕೀಯ ಮತ್ತು ಸಾಮಾಜಿಕ ಅಸ್ಥಿರತೆಯನ್ನು ಎದುರಿಸಬೇಕಾಗುತ್ತದೆ. ಈ ಭಯಾನಕ ಯುದ್ಧದ ಪರಿಣಾಮವು ಒಂದು ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ, ಆದರೆ ಅದು ಜಾಗತಿಕ ಸ್ವರೂಪವನ್ನು ಪಡೆಯಬಹುದು ಈ ಕುರಿತು ಬಾಬಾ ವಾಂಗಾ ಸೇರಿದಂತೆ ಹಲವರು ಭವಿಷ್ಯ ನುಡಿದಿದ್ದರು.

ಇದೆಲ್ಲಕ್ಕೂ ಮುನ್ನ ಟ್ರಂಪ್ ವಾರಗಳ ಹಿಂದೆಯೇ ಇರಾನ್​ಗೆ ಎಚ್ಚರಿಕೆ ನೀಡಿದ್ದರು,ಇಸ್ರೇಲ್ ಮುಂದೆ ಬೇಷರತ್ ಶರಣಾಗುವಂತೆ ಕೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು