AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಬಂದಂತೆ ಸುಂಕ ಹೇರಿದ ಟ್ರಂಪ್​ಗೆ ಶಾಕ್ ಕೊಟ್ಟ ಅಮೆರಿಕದ ಸುಪ್ರೀಂ ಕೋರ್ಟ್

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಮನಸಿಗೆ ಬಂದಂತೆ ಭಾರೀ ಸುಂಕ ಹೇರುತ್ತಿದ್ದರು. ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ ಎಂಬ ಒಂದೇ ಕಾರಣಕ್ಕೆ ಭಾರತದ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂಕ ವಿಧಿಸುವ ಮೂಲಕ ಭಾರತದ ಮೇಲಿನ ಆಮದು ಸುಂಕವನ್ನು ಶೇ. 50ಕ್ಕೆ ಏರಿಸಿದ್ದರು. ಆದರೆ, ಇತ್ತೀಚೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಮೂಲಕ ಆ ಸುಂಕವನ್ನು ಶೇ. 18ಕ್ಕೆ ಕಡಿತಗೊಳಿಸಿದ್ದರು. ಈ ರೀತಿ ತಮಗಿಷ್ಟ ಬಂದಂತೆ ಸುಂಕಗಳನ್ನು ಹಾಕುವ ಅಧಿಕಾರ ಡೊನಾಲ್ಡ್ ಟ್ರಂಪ್​ಗಿಲ್ಲ ಎಂದು ಅಮೆರಿಕದ ಸುಪ್ರೀಂ ಕೋರ್ಟ್​ ಆದೇಶ ನೀಡುವ ಮೂಲಕ ದೊಡ್ಡ ಹೊಡೆತ ನೀಡಿದೆ.

ಮನಬಂದಂತೆ ಸುಂಕ ಹೇರಿದ ಟ್ರಂಪ್​ಗೆ ಶಾಕ್ ಕೊಟ್ಟ ಅಮೆರಿಕದ ಸುಪ್ರೀಂ ಕೋರ್ಟ್
Donald Trump
ಸುಷ್ಮಾ ಚಕ್ರೆ
|

Updated on:Feb 20, 2026 | 9:46 PM

Share

ವಾಷಿಂಗ್ಟನ್, ಫೆಬ್ರವರಿ 20: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರಿಗೆ ಕ್ಯಾಬಿನೆಟ್​​ ಒಪ್ಪಿಗೆಯಿಲ್ಲದೆ ಸರ್ವಾಧಿಕಾರದಿಂದ ಜಾಗತಿಕ ಸುಂಕಗಳನ್ನು ವಿಧಿಸುವ ಅಧಿಕಾರವಿಲ್ಲ ಎನ್ನುವ ಮೂಲಕ ಅಮೆರಿಕದ ಸುಪ್ರೀಂ ಕೋರ್ಟ್​ ಟ್ರಂಪ್​ಗೆ ದೊಡ್ಡ ಶಾಕ್ ನೀಡಿದೆ. ಅಲ್ಲದೆ, ಟ್ರಂಪ್ ಅವರ ಸುಂಕ ನೀತಿ ಕಾನೂನುಬಾಹಿರ ಎಂದು ಕೂಡ ಹೇಳಿದೆ. ಈ ಮೂಲಕ ಟ್ರಂಪ್ ಅವರ ಜಾಗತಿಕ ಸುಂಕಗಳನ್ನು ಅಮೆರಿಕದ ಸುಪ್ರೀಂ ಕೋರ್ಟ್ 6-3 ಅಂತರದಿಂದ ರದ್ದುಗೊಳಿಸಿದೆ. ಹೀಗಾಗಿ, ಟ್ರಂಪ್ ಅವರ ಮುಂದಿನ ಕಾನೂನು ನಡೆಯ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವ್ಯಾಪಕ ಸುಂಕಗಳನ್ನು ವಿಧಿಸುವ ಮೂಲಕ ಫೆಡರಲ್ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಯುಎಸ್ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದು ಟ್ರಂಪ್ ಅವರ ಆಕ್ರಮಣಕಾರಿ ವ್ಯಾಪಾರ ನೀತಿಗಳಿಗೆ ಪ್ರಮುಖ ಹಿನ್ನಡೆಯಾಗಿದೆ. ಟ್ರಂಪ್ ಅವರು ಜಗತ್ತಿನಾದ್ಯಂತದ ದೇಶಗಳ ಮೇಲೆ ವಿಧಿಸಿರುವ ಸುಂಕಗಳು ಕಾನೂನುಬಾಹಿರ ಎಂದು ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಲು ವಿನ್ಯಾಸಗೊಳಿಸಲಾದ ಅಮೆರಿಕದ ಫೆಡರಲ್ ಕಾನೂನಿನಡಿ ಜಾರಿಗೆ ತರಲಾದ ಡೊನಾಲ್ಡ್ ಟ್ರಂಪ್ ಅವರ ಜಾಗತಿಕ ಸುಂಕಗಳ ವಿರುದ್ಧ ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪು ಇದಾಗಿದೆ. ಇಂತಹ ಪ್ರಕರಣಗಳಲ್ಲಿ ಅಧ್ಯಕ್ಷರು ತುರ್ತು ಅಧಿಕಾರವನ್ನು ಬಳಸುವಂತಿಲ್ಲ, ಕ್ಯಾಬಿನೆಟ್ ಅಭಿಪ್ರಾಯವೂ ಮುಖ್ಯ ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: ನಾನೇ ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು; ಮತ್ತೆ ಹಳೇ ರಾಗ ಹಾಡಿದ ಟ್ರಂಪ್, ಶೆಹಬಾಜ್ ಷರೀಫ್ ಗಪ್​ಚುಪ್

ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (ಐಇಇಪಿಎ) ಅಡಿಯಲ್ಲಿ ಡೊನಾಲ್ಡ್ ಟ್ರಂಪ್ ಅವರಿಗೆ ನೀಡಲಾದ ಅಧಿಕಾರವನ್ನು ಅತಿಯಾಗಿ ಬಳಸಿಕೊಂಡಿದ್ದಾರೆ ಎಂದು ಕೆಳ ನ್ಯಾಯಾಲಯಗಳು ತೀರ್ಪು ನೀಡಿವೆ. ಯುಎಸ್ ಸಂವಿಧಾನದ ಪ್ರಕಾರ, ಸುಂಕಗಳನ್ನು ವಿಧಿಸುವ ಅಧಿಕಾರ ಕಾಂಗ್ರೆಸ್‌ಗೆ ಇದೆ. ಅಮೆರಿಕದ ಅಧ್ಯಕ್ಷರು ಈ ಹಿಂದೆ 1977ರ ಈ ಕಾನೂನನ್ನು ನಿಷೇಧಗಳನ್ನು ವಿಧಿಸಲು ಮಾತ್ರ ಬಳಸುತ್ತಿದ್ದರು. ಆದರೆ, ಆಮದುಗಳ ಮೇಲೆ ದೊಡ್ಡ ಪ್ರಮಾಣದಲ್ಲಿ ತೆರಿಗೆ ವಿಧಿಸಲು ಇದನ್ನು ಬಳಸಿದ ಮೊದಲ ಅಧ್ಯಕ್ಷರೆಂದರೆ ಡೊನಾಲ್ಡ್ ಟ್ರಂಪ್.

ಟ್ರಂಪ್ ಅವರ ತುರ್ತು ಅಧಿಕಾರಗಳ ಅಡಿಯಲ್ಲಿ ಸುಂಕಗಳನ್ನು ವಿಧಿಸುವ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ಟ್ರಂಪ್ ಹಲವಾರು ದೇಶಗಳಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಭಾರೀ ಸುಂಕಗಳನ್ನು ವಿಧಿಸಿದ್ದರು. ಅದರಲ್ಲಿ ಭಾರತವೂ ಸೇರಿತ್ತು. ಇದೀಗ ಭಾರತದ ಮೇಲಿನ ಸುಂಕವನ್ನು ಕಡಿತಗೊಳಿಸಲಾಗಿದೆ. ಏಪ್ರಿಲ್ 2025ರಲ್ಲಿ ಟ್ರಂಪ್ ವ್ಯಾಪಾರ ಕೊರತೆಯನ್ನು ರಾಷ್ಟ್ರೀಯ ತುರ್ತುಸ್ಥಿತಿ ಎಂದು ಘೋಷಿಸಿದರು. ಬಹುತೇಕ ಎಲ್ಲಾ ಇತರ ದೇಶಗಳ ಮೇಲೆ ಭಾರೀ ಆಮದು ಸುಂಕಗಳನ್ನು ವಿಧಿಸುವುದಾಗಿ ಘೋಷಿಸಿದರು.

ಇದನ್ನೂ ಓದಿ: ಹತ್ತು ದಿನ ಟೈಂ ಕೊಡ್ತೀನಿ, ಹೇಳಿದ್ದು ಕೇಳದೆ ಇದ್ರೆ ಯುದ್ಧ ಗ್ಯಾರಂಟಿ, ಇರಾನ್​ಗೆ ಗಡುವು ಕೊಟ್ಟ ಟ್ರಂಪ್

ಅವರು ಚೀನಾ, ಕೆನಡಾ ಮತ್ತು ಮೆಕ್ಸಿಕೊದ ಮೇಲೂ ಅದೇ ಕಾನೂನಿನಡಿಯಲ್ಲಿ ಸುಂಕಗಳನ್ನು ವಿಧಿಸಿದ್ದರು. ಫೆಂಟನಿಲ್ ಮತ್ತು ಇತರ ಅಕ್ರಮ ಔಷಧಿಗಳ ಕಳ್ಳಸಾಗಣೆಯನ್ನೂ ಅವರು ರಾಷ್ಟ್ರೀಯ ತುರ್ತುಸ್ಥಿತಿ ಎಂದು ಘೋಷಿಸಿದ್ದರು. ಇದರ ವಿರುದ್ಧ ನ್ಯಾಯಾಲಯದಲ್ಲಿ ಹಲವು ದಾವೆಗಳು ದಾಖಲಾಗಿತ್ತು. ಆ ಪ್ರಕರಣದಲ್ಲಿ ಇದೀಗ ತೀರ್ಪು ಹೊರಬಿದ್ದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:38 pm, Fri, 20 February 26

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್