Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಸೈನಿಕರಿಗೆ ಸಹಾಯ ಮಾಡಲು ಯುದ್ಧ ನೌಕೆ ಕಳುಹಿಸಿದ ಅಮೆರಿಕ

ಉಗ್ರಗಾಮಿ ಸಂಘಟನೆ ಹಮಾಸ್ ಶನಿವಾರ ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಕೃತ್ಯವನ್ನು ಅಮೆರಿಕ ಹಾಗೂ ಭಾರತ ಖಂಡಿಸಿದೆ. ಇಸ್ರೇಲ್​ಗೆ ತಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡುತ್ತೇವೆ ಎಂದು ಎರಡೂ ದೇಶಗಳು ಅಭಯ ನೀಡಿವೆ.

ಹಮಾಸ್ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಸೈನಿಕರಿಗೆ  ಸಹಾಯ ಮಾಡಲು ಯುದ್ಧ ನೌಕೆ ಕಳುಹಿಸಿದ ಅಮೆರಿಕ
ಯುದ್ಧ ನೌಕೆImage Credit source: NDTV
Follow us
ನಯನಾ ರಾಜೀವ್
|

Updated on:Oct 09, 2023 | 7:48 AM

ಇಸ್ರೇಲ್, ಅಕ್ಟೋಬರ್ 09: ಉಗ್ರಗಾಮಿ ಸಂಘಟನೆ ಹಮಾಸ್ ಶನಿವಾರ ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಕೃತ್ಯವನ್ನು ಅಮೆರಿಕ ಹಾಗೂ ಭಾರತ ಖಂಡಿಸಿದೆ. ಇಸ್ರೇಲ್​ಗೆ ತಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡುತ್ತೇವೆ ಎಂದು ಎರಡೂ ದೇಶಗಳು ಅಭಯ ನೀಡಿವೆ.

ಅದರಂತೆ ಅಮೆರಿಕವು ಇಸ್ರೇಲ್​ ಸೈನಿಕರಿಗೆ ಸಹಾಯವಾಗುವಂತೆ ಯುದ್ಧ ನೌಕೆಯನ್ನು ಕಳುಹಿಸಿದೆ, ಯುದ್ಧ ವಿಮಾನವನ್ನು ಕೂಡ ಕಳುಹಿಸಲು ತಯಾರಿ ನಡೆಸುತ್ತಿದೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಅದೇ ಸಮಯದಲ್ಲಿ, ಹಮಾಸ್ 100 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ತೆಗೆದುಕೊಂಡಿದೆ ಎಂದು ಹೇಳಿಕೊಂಡಿದೆ. ಹಮಾಸ್‌ನ ಈ ದಾಳಿಯ ನಂತರ ಹಲವು ದೇಶಗಳು ಇಸ್ರೇಲ್‌ಗೆ ಸಹಾಯ ಹಸ್ತ ಚಾಚಿವೆ.

ಇಸ್ರೇಲ್‌ಗೆ ಸಹಾಯ ಮಾಡಲು ಅಮೆರಿಕ ಘೋಷಿಸಿದೆ. ಮಾಹಿತಿಯ ಪ್ರಕಾರ, ಯುಎಸ್ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇದರ ನಂತರ ಅವರು ಮೆಡಿಟರೇನಿಯನ್ ಸಮುದ್ರಕ್ಕೆ ಯುದ್ಧ ಹಡಗುಗಳನ್ನು ಕಳುಹಿಸಿದೆ.

ಮತ್ತಷ್ಟು ಓದಿ: Israel War: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ: ಇಲ್ಲಿಯವರೆಗೆ 300ಕ್ಕೂ ಅಧಿಕ ಮಂದಿ ಸಾವು

ಹಮಾಸ್‌ನ ಈ ದಾಳಿಯಲ್ಲಿ ನಾಲ್ವರು ಅಮೆರಿಕನ್ ಪ್ರಜೆಗಳೂ ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಹಿಂದೆ ಹಮಾಸ್ ದಾಳಿಯ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಇಸ್ರೇಲ್ ಅನ್ನು ಬೆಂಬಲಿಸಿ ಹೇಳಿಕೆ ನೀಡಿದ್ದರು.

ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ ಮತ್ತು ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹಲವು ಸೈನಿಕರು ಮತ್ತು ಪೊಲೀಸರು ಸೇರಿದಂತೆ ಸಆವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 2,048ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇಸ್ರೇಲ್ ಮೂಲದ ಮಾಧ್ಯಮ ವರದಿ ಮಾಡಿದೆ.

ಹಮಾಸ್ ರಾಕೆಟ್ ದಾಳಿ ಪ್ರಾರಂಭಿಸಿದ 24 ಗಂಟೆಗಳ ನಂತರ, ಗಾಜಾ ಗಡಿಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಐಡಿಎಫ್​ ಎಲ್ಲಾ ಭಯೋತ್ಪಾದಕರನ್ನು ತಟಸ್ಥಗೊಳಿಸುವ ಪ್ರಯತ್ನ ನಡೆಯುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:46 am, Mon, 9 October 23

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್