AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bipin Rawat: ಸಿಡಿಎಸ್​ ಬಿಪಿನ್​ ರಾವತ್ ನಿಧನಕ್ಕೆ ಯುಎಸ್​ ಉನ್ನತ ಅಧಿಕಾರಿಗಳ ಸಂತಾಪ; ಅವರೊಬ್ಬ ಉತ್ತಮ ಸ್ನೇಹಿತ ಎಂದ ರಕ್ಷಣಾ ಕಾರ್ಯದರ್ಶಿ

ಯುಎಸ್​ನ ರಕ್ಷಣಾ ಸಿಬ್ಬಂದಿಗಳ ಜಂಟಿ ಮುಖ್ಯಸ್ಥರ ಅಧ್ಯಕ್ಷ ಜನರಲ್​ ಮಾರ್ಕ್ ಮಿಲ್ಲೆ ಕೂಡ ಬಿಪಿನ್​ ರಾವತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಭಾರತೀಯ ಸೇನೆ ಮೇಲೆ ಬಿಪಿನ್​ ರಾವತ್ ಬೀರಿರುವ ಪ್ರಭಾವ ಎಂದಿಗೂ ನೆನಪಿಟ್ಟುಕೊಳ್ಳುವಂಥದ್ದು ಎಂದಿದ್ದಾರೆ.

Bipin Rawat: ಸಿಡಿಎಸ್​ ಬಿಪಿನ್​ ರಾವತ್ ನಿಧನಕ್ಕೆ ಯುಎಸ್​ ಉನ್ನತ ಅಧಿಕಾರಿಗಳ ಸಂತಾಪ; ಅವರೊಬ್ಬ ಉತ್ತಮ ಸ್ನೇಹಿತ ಎಂದ ರಕ್ಷಣಾ ಕಾರ್ಯದರ್ಶಿ
ಬಿಪಿನ್​ ರಾವತ್​
TV9 Web
| Edited By: |

Updated on:Dec 09, 2021 | 8:57 AM

Share

ತಮಿಳುನಾಡಿನ ಕೂನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನದಲ್ಲಿ ಸಿಡಿಎಸ್​ ಬಿಪಿನ್​ ರಾವತ್​ ಮೃತಪಟ್ಟಿದ್ದಾರೆ. ರಾವತ್​ ನಿಧನಕ್ಕೆ ಯುಎಸ್​ ರಾಜ್ಯ ಕಾರ್ಯದರ್ಶಿ ಅಂತೋನಿ ಬ್ಲಿಂಕೆನ್​ ಮತ್ತು ರಕ್ಷಣಾ ಕಾರ್ಯದರ್ಶಿ ಲಾಯ್ಡ್​ ಆಸ್ಟಿನ್​ ಸಂತಾಪ ಸೂಚಿಸಿದ್ದಾರೆ.  ಭಾರತೀಯ ಡಿಫೆನ್ಸ್ ಸ್ಟಾಫ್​ ಮುಖ್ಯಸ್ಥ ಜನರಲ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು ಸಹೋದ್ಯೋಗಿಗಳು ಇಂದು ಒಂದು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇದು ನೋವಿನ ಸಂಗತಿ. ಬಿಪಿನ್​ ರಾವತ್​ ಅವರ ದೇಶಕ್ಕೆ ಸೇವೆ ಸಲ್ಲಿಸುವ ಜತೆಗೆ, ಯುಎಸ್​-ಭಾರತ ರಕ್ಷಣಾ ಸಂಬಂಧಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಬ್ಲಿಂಕೆನ್​ ಹೇಳಿದ್ದಾರೆ. 

ನಂತರ ಮಾತನಾಡಿದ ಯುಎಸ್​ ರಕ್ಷಣಾ ಕಾರ್ಯದರ್ಶಿ ಆಸ್ಟಿನ್​, ಯುಎಸ್​-ಭಾರತ ನಡುವಿನ ರಕ್ಷಣಾ ಸಹಭಾಗಿತ್ವದಲ್ಲಿ ಜನರಲ್​ ರಾವತ್​ ಅವರು ಒಂದು ಅಳಿಸಲಾಗದ ಗುರುತು ಬಿಟ್ಟುಹೋಗಿದ್ದಾರೆ. ಹಾಗೇ, ಅವರು ಭಾರತೀಯ ಸಶಸ್ತ್ರಪಡೆಗಳ ಸಂಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದರು. ಹಾಗೇ, ಈ ವರ್ಷದ ಪ್ರಾರಂಭದಲ್ಲಿ ನಾನು ಬಿಪಿನ್​ ರಾವತ್​ರನ್ನು ಭೇಟಿಯಾಗಿದ್ದೆ. ಅವರು ಯುಎಸ್​​ನ ಮೌಲ್ಯಯುತ ಸ್ನೇಹಿತ ಮತ್ತು ಪಾಲುದಾರ ಎಂಬುದು ಸತ್ಯವಾಗಿತ್ತು ಎಂದರು.

ಹಾಗೇ. ಯುಎಸ್​ನ ರಕ್ಷಣಾ ಸಿಬ್ಬಂದಿಗಳ ಜಂಟಿ ಮುಖ್ಯಸ್ಥರ ಅಧ್ಯಕ್ಷ ಜನರಲ್​ ಮಾರ್ಕ್ ಮಿಲ್ಲೆ ಕೂಡ ಬಿಪಿನ್​ ರಾವತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಭಾರತೀಯ ಸೇನೆ ಮೇಲೆ ಬಿಪಿನ್​ ರಾವತ್ ಬೀರಿರುವ ಪ್ರಭಾವ ಎಂದಿಗೂ ನೆನಪಿಟ್ಟುಕೊಳ್ಳುವಂಥದ್ದು. ಹಾಗೇ, ಯುಎಸ್​-ಭಾರತ ಮಿಲಿಟರಿ ಸಂಬಂಧದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಪೊಲೀಸರಿಂದ ರಸ್ತೆ ಮಾರ್ಗ ವ್ಯವಸ್ಥೆಯಾಗಿತ್ತು, ಆದರೆ ರಾವತ್ ಪ್ಲ್ಯಾನ್ ಪ್ರಕಾರ ಹೆಲಿಕಾಪ್ಟರ್​​ನಲ್ಲಿ​​ ಪ್ರಯಾಣ

Published On - 8:54 am, Thu, 9 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ