AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamala Harris: ಭಾರತೀಯರ ಜೊತೆಗೆ ದೀಪಾವಳಿ ಆಚರಿಸಿದ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭಾರತೀಯರ ಜೊತೆಗೆ ದೀಪಾವಳಿಯನ್ನು ಆಚರಿಸಿ ಸಂಭ್ರಮಿಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Kamala Harris: ಭಾರತೀಯರ ಜೊತೆಗೆ ದೀಪಾವಳಿ ಆಚರಿಸಿದ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್
ದೀಪಾವಳಿ ಹಬ್ಬ ಆಚರಿಸಿದ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್
TV9 Web
| Edited By: |

Updated on:Oct 22, 2022 | 6:45 PM

Share

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭಾರತೀಯರ ಜೊತೆಗೆ ದೀಪಾವಳಿಯನ್ನು ಆಚರಿಸಿ ಸಂಭ್ರಮಿಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  ತಮ್ಮ ಅಧಿಕೃತ ನಿವಾಸ-ನೌಕಾ ವೀಕ್ಷಣಾಲಯದಲ್ಲಿ ದೀಪಾವಳಿಯ ಆಚರಣೆ ಮಾಡಿದ್ದಾರೆ. ಇದು ಭಾರತ ಹೆಮ್ಮೆಪಡುವ ವಿಚಾರ ಎಂದು ನೆಟ್ಟಿಗರು ಹೇಳಿದ್ದಾರೆ. ಅನೇಕರು ಇದು ಭಾರತದ ಸಂಸ್ಕೃತಿಗೆ ಕಮಲಾ ಹ್ಯಾರಿಸ್ ನೀಡಿದ ಗೌರವ ಎಂದು ಹೇಳಿದ್ದಾರೆ.

ಕಮಲಾ ಹ್ಯಾರಿಸ್ ಶುಕ್ರವಾರ ಅಮೆರಿಕದಲ್ಲಿರುವ ಭಾರತೀಯರ ಜೊತೆಗೆ ದೀಪಾವಳಿ ಮುನ್ನವೇ ತಮ್ಮ ಅಧಿಕೃತ ನಿವಾಸ-ನೌಕಾ ವೀಕ್ಷಣಾಲಯದಲ್ಲಿ ದೀಪಾವಳಿ ಆಚರಣೆಯನ್ನು ಆಯೋಜಿಸಿದರು. ಈ ಸಂಭ್ರಮದಲ್ಲಿ ನೀರಾ ತಾಂಡೇನ್, ವಿವೇಕ್ ಮೂರ್ತಿ, ರಿಚ್ ವರ್ಮಾ ಮತ್ತು ಅಜಯ್ ಭುಟೋರಿಯಾ ಸೇರಿದಂತೆ ಹಲವಾರು ಪ್ರಮುಖ ಭಾರತೀಯರು ಉಪಸ್ಥಿತರಿದ್ದರು.

ಕಮಲಾ ಹ್ಯಾರಿಸ್ ಅವರು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಸಂಭ್ರಮದಲ್ಲಿ ಕಮಲಾ ಹ್ಯಾರಿಸ್ ಅವರ ಪತಿಯೂ ಭಾಗಿಯಾಗಿದ್ದರು, ಅವರ ಜೊತೆಗೆ ಪಟಾಕಿ ಹೊಡೆದು ದೀಪಾವಳಿಯನ್ನು ಅದ್ಭುತವಾಗಿ ಆಚರಿಸಿಕೊಂಡಿದ್ದಾರೆ. ಕಮಲಾ ಹ್ಯಾರಿಸ್ ಅವರ ನಿವಾಸವನ್ನು ದೀಪಗಳಿಂದ ಅಲಂಕಾರ ಮಾಡಿದ್ದು, ಬಂದಿರುವ ಅತಿಥಿಗಳಿಗೆ ವಿವಿಧ ರೀತಿಯ ಭಾರತೀಯ ಭಕ್ಷ್ಯಗಳನ್ನು ಮಾಡಲಾಗಿತ್ತು.

ಇದನ್ನು ಓದಿ: Viral News: ಕೊರೊನಾದಿಂದ ಸಾವನ್ನಪ್ಪಿದ ರೋಗಿ ಶವಾಗಾರದಲ್ಲಿ ಬದುಕಿ ಬಂದ ಕತೆಯಿದು!

ಕಮಲಾ ಹ್ಯಾರಿಸ್ ಮೂಲತಃ ಭಾರತೀಯರು. ಇವರು ಚೆನ್ನೈನಲ್ಲಿ ಜನಿಸಿ, ಡಾಕ್ಟರೇಟ್ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದರು, ನಂತರ ಅಲ್ಲಿಯೇ  ನೆಲೆಸಿ ಈಗ ಜೋ ಬೈಡನ್ ಸರ್ಕಾರದಲ್ಲಿ ಉಪಧ್ಯಾಕ್ಷೆಯಾಗಿ ಕೆಲಸ ಮಾಡುತ್ತಿದ್ದಾರೆ. ಇವರು ದೀಪಾವಳಿ ಬಗ್ಗೆ ಮತ್ತು ಭಾರತೀಯ ಸಂಸ್ಕೃತಿಯ ಬಗ್ಗೆ ಹೆಚ್ಚು ನಂಬಿಕೆ ಮತ್ತು ಪ್ರೀತಿ ಹೊಂದಿದ್ದಾರೆ. ಪ್ರತಿ ವರ್ಷ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬವನ್ನು ಕುಟುಂಬ ಜೊತೆಗೆ ಆಚರಣೆ ಮಾಡುತ್ತಾರೆ ಎಂದು ಅವರೇ ಒಂದು ಸಂದರ್ಶನದಲ್ಲಿ ಹೇಳುತ್ತಾರೆ.

ನಮ್ಮ ಜೀವನದ ದ್ವಂದ್ವತೆ ಸರಿಪಡಿಸಲು ಮತ್ತು ಕತ್ತಲಿನಿಂದ ಬೆಳಕಿನ ಕಡೆ ಸಾಗಲು ಈ ಹಬ್ಬ ಮುಖ್ಯವಾಗಿರುತ್ತದೆ. ಈ ಆಚರಣೆ ಜಗತ್ತಿನ ಒಂದು ದೊಡ್ಡ ಸಂಸ್ಕೃತಿಯಾಗಿದೆ. ನಮ್ಮ ಕತ್ತಲಿನ ಜೀವನಕ್ಕೆ ಒಂದು ಬೆಳಕಿನ ಮಾರ್ಗದರ್ಶನ ನೀಡುವ ಕೆಲಸ ಆಗಬೇಕು. ನಮ್ಮ ಜೀವನದ ಪ್ರತಿಕ್ಷಣವು ಒಳ್ಳೆಯದ್ದನ್ನೇ ಯೋಚನೆ ಮಾಡಬೇಕು ಎಂದು ಕಮಲಾ ಹ್ಯಾರಿಸ್ ಹೇಳಿದರು.

Published On - 6:39 pm, Sat, 22 October 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!