AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್ಎ – ಕಾರಿನಲ್ಲಿದ್ದ ಭಾರತದ ಮೆಡಿಕಲ್ ವಿದ್ಯಾರ್ಥಿ ಶೂಟೌಟ್​​ಗೆ ಬಲಿ

ಅಮೆರಿಕದ ಓಹಿಯೋದಲ್ಲಿ 26 ವರ್ಷದ ಭಾರತೀಯ ಡಾಕ್ಟರೇಟ್ ವಿದ್ಯಾರ್ಥಿಯನ್ನು ಅಪರಿಚಿತರು ಕಾರಿನೊಳಗೆ ಗುಂಡಿಕ್ಕಿ ಕೊಂದಿದ್ದಾರೆ.

ಯುಎಸ್ಎ - ಕಾರಿನಲ್ಲಿದ್ದ ಭಾರತದ ಮೆಡಿಕಲ್ ವಿದ್ಯಾರ್ಥಿ ಶೂಟೌಟ್​​ಗೆ ಬಲಿ
ಆದಿತ್ಯ ಅದ್ಲಾಖಾ ಅವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರದಲ್ಲಿ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದರು
Follow us
ಸಾಧು ಶ್ರೀನಾಥ್​
|

Updated on: Nov 24, 2023 | 9:40 AM

ವಾಷಿಂಗ್ಟನ್, ನವೆಂಬರ್ 24: ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಉತ್ತರ ಭಾರತದ ವೈದ್ಯಕೀಯ ವಿದ್ಯಾರ್ಥಿ ಆದಿತ್ಯ ಅದ್ಲಾಖಾ ( US state of Ohio) ಅವರು ಕಾರಿನಲ್ಲಿದ್ದಾಗ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆದಿತ್ಯ ಎರಡು ದಿನಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನವೆಂಬರ್ 9 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ, ಸಿನ್ಸಿನಾಟಿ ವೈದ್ಯಕೀಯ ಕೇಂದ್ರ ವಿಶ್ವವಿದ್ಯಾಲಯ ಪ್ರಕಟಣೆ ಹೊರಡಿಸಿದೆ. ಹ್ಯಾಮಿಲ್ಟನ್ ಕೌಂಟಿ ಕರೋನರ್ ಕಚೇರಿಯು ಡಾಕ್ಟರೇಟ್ ವಿದ್ಯಾರ್ಥಿ ಆದಿತ್ಯ ಸಾವಿನ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದೆ ( US state of Ohio).

ಆದಿತ್ಯ ಅದ್ಲಾಖಾ ಅವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರದಲ್ಲಿ (molecular and developmental biology programme at the University of Cincinnati Medical School) ನಾಲ್ಕನೇ ವರ್ಷದ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದರು. ಈ ವರ್ಷ ನವೆಂಬರ್ 9 ರಂದು ಘಟ್ಟ ಪ್ರದೇಶದಲ್ಲಿ ಕಾರು ಚಲಾಯಿಸುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದರಿಂದ ಕಾರು ನಿಯಂತ್ರಣ ತಪ್ಪಿ ತಡೆಗೋಡೆ ( Western Hills Viaduct) ಡಿಕ್ಕಿ ಹೊಡೆದಿದೆ. ಬೆಳಗ್ಗೆ 6:20ರ ಸುಮಾರಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಕಾರಿನಲ್ಲಿ ಬುಲೆಟ್ ನಿಂದ ಗಾಯಗೊಂಡ ವ್ಯಕ್ತಿ ದೂರವಾಣಿ 911 (ಅಮೆರಿಕನ್ ಆಂಬ್ಯುಲೆನ್ಸ್ ಸಂಖ್ಯೆ) ಗೆ ಕರೆ ಮಾಡಿದ್ದು, ಅವರನ್ನು ಕನ್ನಿಂಗ್ಹ್ಯಾಮ್​ಗೆ ಸ್ಥಳಾಂತರಿಸಲಾಯಿತು. ಇದರ ನಂತರ, ಅವರ ಸ್ಥಿತಿ ಗಂಭೀರವಾದ ಕಾರಣ, ಅವರನ್ನು ತಕ್ಷಣವೇ ಯುಸಿ ವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಆದರೆ, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಎರಡು ದಿನಗಳ ನಂತರ ಸಾವನ್ನಪ್ಪಿದ್ದಾರೆ ಎಂದು ಹ್ಯಾಮಿಲ್ಟನ್ ಕೌಂಟಿ ಕರೋನರ್ ಕಚೇರಿ ಖಚಿತಪಡಿಸಿದೆ. ಗುಂಡಿನ ದಾಳಿ ವಿಷಯದಲ್ಲಿ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಆದಿತ್ಯ ನಾಡಿನ ಕಾರಿನಲ್ಲಿ ಮೂರು ಗುಂಡಿನ ರಂಧ್ರಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Also read: ಖಮ್ಮಂ: ಅಮೆರಿಕದಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಎಂಎಸ್ ತೆಲುಗು ವಿದ್ಯಾರ್ಥಿ ಸಾವು 

ಅದ್ಲಾಖಾ ಅವರ ಹಠಾತ್ ಸಾವಿನ ಬಗ್ಗೆ ವಿಶ್ವವಿದ್ಯಾನಿಲಯದ ಆರೋಗ್ಯ ವ್ಯವಹಾರಗಳ ಹಿರಿಯ ಉಪಾಧ್ಯಕ್ಷ ಡೀನ್ ಆಂಡ್ರ್ಯೂ ಫಿಲಾಕ್ ತೀವ್ರ ದುಃಖ ವ್ಯಕ್ತಪಡಿಸಿದರು. ಅದ್ಲಾಖಾ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಅವರು ತುಂಬಾ ಬುದ್ಧಿವಂತ ಮನುಷ್ಯ. ನ್ಯೂರೋಇಮ್ಯೂನ್ ಸಂವಹನದಲ್ಲಿ ಅದ್ಭುತ ಸಂಶೋಧನೆ ಮಾಡಿದ್ದಕ್ಕಾಗಿ ಅವರನ್ನು ನೆನಪಿಸಿಕೊಳ್ಳಬೇಕು ಎಂದು ಆದಿತ್ಯ ಅವರ ಕುಟುಂಬಕ್ಕೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆದಿತ್ಯ ಅದ್ಲಾಖಾ ಅವರು ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಉತ್ತರ ಭಾರತದಿಂದ ಸಿನ್ಸಿನಾಟಿ ವಿಶ್ವವಿದ್ಯಾಲಯಕ್ಕೆ ಬಂದರು.

Also Read: ಅಮೆರಿಕದಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಎಸ್ ಮಾಡುತ್ತಿದ್ದ ತೆಲಂಗಾಣ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ, ಸ್ಥಿತಿ ಗಂಭೀರ -ಕುಟುಂಬಕ್ಕೆ ನೆರವಾಗಿರುವ ಸಚಿವ ಕೆಟಿಆರ್

2018 ರಲ್ಲಿ, ಆದಿತ್ಯ ಅದ್ಲಾಖಾ ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ರಾಜಾಸ್ ಕಾಲೇಜಿನಲ್ಲಿ ಪ್ರಾಣಿಶಾಸ್ತ್ರದಲ್ಲಿ ಬ್ಯಾಚುಲರ್ ಪದವಿಯನ್ನು ಅಧ್ಯಯನ ಮಾಡಿದರು. ನಂತರ 2020 ರಲ್ಲಿ, ಅವರು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಿಂದ ಶರೀರಶಾಸ್ತ್ರ ಅಥವಾ ವೈದ್ಯಕೀಯದಲ್ಲಿ ತಮ್ಮ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು. ನಂತರ ಅವರು ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರದಲ್ಲಿ ಪಿಎಚ್‌ಡಿಗಾಗಿ ಅಮೆರಿಕಕ್ಕೆ ಹೋದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ