AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ದೊಡ್ಡಣ್ಣ ಎನಿಸಿಕೊಂಡ ಅಮೆರಿಕಾವೇ ಭಾರತಕ್ಕೆ ದೊಡ್ಡ ಮಟ್ಟದ ಸಾಲ ತೀರಿಸಬೇಕಿದೆ!

USA: ಅಮೆರಿಕಾ ದೇಶ ಚೀನಾಕ್ಕೆ 1 ಟ್ರಿಲಿಯನ್ ಡಾಲರ್, ಜಪಾನ್​ಗೆ 1 ಟ್ರಿಲಿಯನ್ ಡಾಲರ್ ಹಾಗೂ ಭಾರತಕ್ಕೆ 216 ಬಿಲಿಯನ್ ಡಾಲರ್ ನೀಡುವುದು ಬಾಕಿ ಉಳಿದಿದೆ. ಒಟ್ಟಾರೆ 2020ರಲ್ಲಿ ಅಮೆರಿಕಾ 23.4 ಟ್ರಿಲಿಯನ್ ಡಾಲರ್ ಸಾಲ ಹೊಂದಿದ್ದು, ಆಮೆರಿಕಾದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ 72,309 ಡಾಲರ್ ಸಾಲ ಇದೆ

ವಿಶ್ವದ ದೊಡ್ಡಣ್ಣ ಎನಿಸಿಕೊಂಡ ಅಮೆರಿಕಾವೇ ಭಾರತಕ್ಕೆ ದೊಡ್ಡ ಮಟ್ಟದ ಸಾಲ ತೀರಿಸಬೇಕಿದೆ!
ಸಂಗ್ರಹ ಚಿತ್ರ
Skanda
|

Updated on: Feb 27, 2021 | 1:37 PM

Share

ಇರುವೆಗೆ ಇರುವೆ ಭಾರ, ಆನೆಗೆ ಆನೆ ಭಾರ ಎಂಬ ಮಾತಿದೆ. ಎಷ್ಟೇ ಶ್ರೀಮಂತರಾದರೂ ಅದಕ್ಕೆ ತಕ್ಕನಾದ ಖರ್ಚು, ವೆಚ್ಚ, ಸಾಲಗಳಿರುತ್ತವೆ. ಈ ಮಾತಿಗೆ ತಕ್ಕಂತೆ ವಿಶ್ವದ ದೊಡ್ಡಣ ಅಮೆರಿಕಾ ಭಾರತದ ಬಳಿ ಪಡೆದಿರುವ ದೊಡ್ಡ ಮೊತ್ತದ ಸಾಲವೊಂದನ್ನು ಹಿಂದಿರುಗಿಸುವುದು ಬಾಕಿ ಇದೆಯಂತೆ. ಈ ಬಗ್ಗೆ ಸ್ವತಃ ಆಮೆರಿಕಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್​​ನಲ್ಲಿ ಆಮೆರಿಕಾ ಕಾಂಗ್ರೆಸ್ ಸದಸ್ಯ ಆಲೆಕ್ಸ್ ಮೂನಿ ಹೇಳಿಕೆ ನೀಡಿದ್ದು, ಭಾರತಕ್ಕೆ ಆಮೆರಿಕಾ ಬರೋಬ್ಬರಿ 216 ಬಿಲಿಯನ್ ಡಾಲರ್ ಹಣವನ್ನು ‌ನೀಡುವುದು ಬಾಕಿ‌‌ ಇದೆ ಎಂದು ತಿಳಿಸಿದ್ದಾರೆ.

ರಿಪಬ್ಲಿಕನ್ ಪಕ್ಷದ ಸೆನೆಟರ್ ಆಗಿರುವ ಆಲೆಕ್ಸ್ ಮೂನಿ ಆಮೆರಿಕಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್​​ನಲ್ಲಿ ಮಾತನಾಡುತ್ತಾ, ಕೊರೊನಾ ವೈರಸ್ ಸಂಕಷ್ಟ ಪರಿಹಾರಕ್ಕೆ 2 ಟ್ರಿಲಿಯನ್ ಡಾಲರ್ ಪರಿಹಾರ ಪ್ಯಾಕೇಜ್ ನೀಡುವ ಬಗ್ಗೆ ವಿರೋಧಿಸಿದರು. ಅದೇ ಭಾಷಣದ ವೇಳೆ ಅಮೆರಿಕಾದ ಸಾಲದ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಆಲೆಕ್ಸ್ ಮೂನಿ ಆಮೆರಿಕಾ ಯಾವ ಯಾವ ದೇಶಕ್ಕೆ ಎಷ್ಟು ಹಣ ನೀಡುವುದು ಬಾಕಿ ಇದೆ ಎಂದು ಹೇಳಿದ್ದಾರೆ.

ಅಮೆರಿಕಾ ದೇಶ ಚೀನಾಕ್ಕೆ 1 ಟ್ರಿಲಿಯನ್ ಡಾಲರ್, ಜಪಾನ್​ಗೆ 1 ಟ್ರಿಲಿಯನ್ ಡಾಲರ್ ಹಾಗೂ ಭಾರತಕ್ಕೆ 216 ಬಿಲಿಯನ್ ಡಾಲರ್ ನೀಡುವುದು ಬಾಕಿ ಉಳಿದಿದೆ. ಒಟ್ಟಾರೆ 2020ರಲ್ಲಿ ಅಮೆರಿಕಾ 23.4 ಟ್ರಿಲಿಯನ್ ಡಾಲರ್ ಸಾಲ ಹೊಂದಿದ್ದು, ಆಮೆರಿಕಾದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ 72,309 ಡಾಲರ್ ಸಾಲ ಇದೆ ಎಂದು ಆಲೆಕ್ಸ್ ಮೂನಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಾರತ ನ್ಯಾಯಾಂಗದ ಪ್ರಾಮಾಣಿಕತೆಯನ್ನೇ ಪ್ರಶ್ನಿಸಿದ ಕಾಟ್ಜು, ಸಮರ್ಥಿಸಿದ ಲಂಡನ್ ಕೋರ್ಟ್

ದುಬೈ ರಾಜಕುಮಾರಿ ಲತೀಫಾ ಯಾರು? ಅವಳು ಬದುಕಿರುವುದಕ್ಕೆ ವಿಶ್ವಸಂಸ್ಥೆ ಸಾಕ್ಷ್ಯ ಕೇಳುತ್ತಿರುವುದೇಕೆ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ