AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಣಾಸಿ ಜ್ಞಾನವಾಪಿ ಮಸೀದಿ ಪ್ರಕರಣ: ನ್ಯಾಯಾಲಯದಿಂದ ಇಂದು ತೀರ್ಪು

ವಿಡಿಯೊ ಚಿತ್ರೀಕರಣವು ಅಕ್ರಮ ಎನ್ನುವ ಮಸೀದಿ ಸಮಿತಿಯ ವಾದವನ್ನು ಆಲಿಸಬೇಕೇ? ಬೇಡವೇ ಎನ್ನುವ ಬಗ್ಗೆಯೂ ನ್ಯಾಯಾಲಯವು ತೀರ್ಮಾನ ಪ್ರಕಟಿಸಲಿದೆ.

ವಾರಣಾಸಿ ಜ್ಞಾನವಾಪಿ ಮಸೀದಿ ಪ್ರಕರಣ: ನ್ಯಾಯಾಲಯದಿಂದ ಇಂದು ತೀರ್ಪು
ಜ್ಞಾನವಾಪಿ ಮಸೀದಿImage Credit source: PTI
TV9 Web
| Edited By: |

Updated on:May 24, 2022 | 12:06 PM

Share

ದೆಹಲಿ: ಸುಪ್ರೀಂಕೋರ್ಟ್ ಸೂಚನೆಯಂತೆ ಜ್ಞಾನವಾಪಿ ಮಸೀದಿ (Gyanvapi Mosque) ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿಯ ಹಿರಿಯ ನ್ಯಾಯಾಧೀಶರು ಇಂದು ತೀರ್ಪು ನೀಡಲಿದ್ದಾರೆ. ಮಸೀದಿ ಆವರಣದಲ್ಲಿ ಕಳೆದ ವಾರ ನಡೆಸಿದ ವಿಡಿಯೊ ಚಿತ್ರೀಕರಣವು ಅಕ್ರಮ ಎನ್ನುವ ಮಸೀದಿ ಸಮಿತಿಯ ವಾದವನ್ನು ಆಲಿಸಬೇಕೇ? ಬೇಡವೇ ಎನ್ನುವ ಬಗ್ಗೆಯೂ ನ್ಯಾಯಾಲಯವು ತೀರ್ಮಾನ ಪ್ರಕಟಿಸಲಿದೆ. ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ 10 ಪ್ರಮುಖ ಬೆಳವಣಿಗೆಗಳಿವು…

  1. ಪ್ರಕರಣದ ಮುಂದಿನ ವಿಚಾರಣೆ ದಿನಾಂಕವನ್ನೂ ನ್ಯಾಯಾಲಯವು ಇಂದೇ ಘೋಷಿಸಲಿದೆ.
  2. ಮಸೀದಿ ಆವರಣದಲ್ಲಿ ವಿಡಿಯೊ ಚಿತ್ರೀಕರಣ ಮತ್ತು ಸಮೀಕ್ಷೆಯು 1991ರ ಕಾನೂನು ಉಲ್ಲಂಘಿಸುತ್ತದೆ. ದೇಶದ ಯಾವುದೇ ಶ್ರದ್ಧಾಕೇಂದ್ರದ ಸ್ಥಿತಿಯನ್ನು ಬದಲಿಸುವಂತಿಲ್ಲ ಎಂದು ಕಾಯ್ದೆ ಸ್ಪಷ್ಟಪಡಿಸುತ್ತದೆ. ಯಥಾಸ್ಥಿತಿ ಕಾಪಾಡಿಕೊಳ್ಳುವ ಕುರಿತ ತನ್ನ ಮನವಿಯನ್ನು ಮೊದಲು ವಿಚಾರಣೆಗೆ ಅಂಗೀಕರಿಸಬೇಕೆಂದು ಮಸೀದಿ ಸಮಿತಿಯು ವಿನಂತಿಸಿದೆ. ಈ ಬಗ್ಗೆ ನ್ಯಾಯಾಲಯ ಇಂದು ತೀರ್ಮಾನ ಪ್ರಕಟಿಸಲಿದೆ.
  3. ಈ ಸಂಬಂಧ ಕಳೆದ ಶುಕ್ರವಾರ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಜ್ಞಾನವಾಪಿ ಮಸೀದಿ ಸಮಿತಿಯ ಅರ್ಜಿ ಅಥವಾ ಸಮೀಕ್ಷೆಗೆ ವಿನಂತಿಸಿದ ಶ್ರದ್ಧಾಳುಗಳ ಅರ್ಜಿಯ ಪೈಕಿ ಯಾವುದನ್ನು ಮೊದಲು ವಿಚಾರಣೆ ನಡೆಸಬೇಕೆಂದು ನಿರ್ಧರಿಸುವ ಹೊಣೆಗಾರಿಕೆಯನ್ನು ವಾರಣಾಸಿ ನ್ಯಾಯಾಲಯಕ್ಕೇ ನೀಡಿತು.
  4. ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಈ ಸಂಬಂಧ ನಿನ್ನೆ ಮಧ್ಯಾಹ್ನ 30 ನಿಮಿಷದ ವಾದವನ್ನು ನ್ಯಾಯಾಧೀಶರು ಆಲಿಸಿದರು.
  5. ‘ಸುಪ್ರೀಂಕೋರ್ಟ್ ಸೂಚನೆಯ ಮೇರೆಗೆ ನಮ್ಮ ವಾದವನ್ನೇ ಮೊದಲು ಆಲಿಸಬೇಕು ಎಂದು ವಿನಂತಿಸಿದೆ. ಪ್ರತಿವಾದಿಗಳು ಇನ್ನಷ್ಟು ಸಮಯ ಬೇಕೆಂದು ಕೋರಿದ್ದರು. ಯಥಾಸ್ಥಿತಿಯ ಬಗ್ಗೆ ನ್ಯಾಯಾಲಯ ಮೊದಲು ತನ್ನ ತೀರ್ಮಾನಿಸಬೇಕೆಂದು ಕೋರಿದೆ’ ಎಂದು ಮಸೀದಿ ಸಮಿತಿ ಪರ ವಕೀಲ ಅಭಯ್ ನಾಥ್ ಯಾದವ್ ಹೇಳಿದರು.
  6. ವಾರಣಾಸಿ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಕಳೆದ ವಾರ ನಡೆಸಿದ ಸುಪ್ರೀಂಕೋರ್ಟ್ ಉತ್ತರ ಪ್ರದೇಶದ ಹಿರಿಯ ನ್ಯಾಯಾಧೀಶರೊಬ್ಬರು ಪ್ರಕರಣದ ವಿಚಾರಣೆ ನಡೆಸಬೇಕು ಎಂದು ಸೂಚಿಸಿತ್ತು.
  7. ಇದು ತುಂಬಾ ಸಂಕೀರ್ಣ ಮತ್ತು ಸೂಕ್ಷ್ಮ ವಿಚಾರ. ಈ ಸಂಬಂಧದ ವಾದವನ್ನು ವಿಚಾರಣಾ ನ್ಯಾಯಾಲಯಕ್ಕಿಂತಲೂ ಅನುಭವಿ ನ್ಯಾಯಾಧೀಶರು ಆಲಿಸುವುದು ಒಳ್ಳೆಯದು ಎಂಬುದು ನಮ್ಮ ಅಭಿಪ್ರಾಯ ಎಂದು ಸುಪ್ರೀಂಕೋರ್ಟ್ ಹೇಳಿತ್ತು.
  8. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಮಾಹಿತಿ ಸೋರಿಕೆಯನ್ನು ತಡೆಗಟ್ಟಬೇಕು. ಈ ಹಿಂದೆ ವಾರಣಾಸಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆಯಾಗುವ ಮೊದಲೇ ಸೂಕ್ಷ್ಮ ಮಾಹಿತಿಯನ್ನು ಹಿಂದೂ ಪರ ವಕೀಲರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು.
  9. ವಿಡಿಯೊ ಸಮೀಕ್ಷೆಯ ವೇಳೆ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದೂ ಅರ್ಜಿದಾರರ ಪರ ವಕೀಲರು ಈ ಮೊದಲು ಪ್ರತಿಪಾದಿಸಿದ್ದರು.
  10. ಈ ಪ್ರತಿಪಾದನೆಯನ್ನು ಮಸೀದಿ ಸಮಿತಿಯ ಸದಸ್ಯರು ಒಪ್ಪಿರಲಿಲ್ಲ. ಇದು ವಝೂಖಾನಾದೊಳಗೆ ಅಳವಡಿಸಿದ್ದ ಕಾರಂಜಿ ವ್ಯವಸ್ಥೆಯ ಭಾಗವಾಗಿತ್ತು. ನಮಾಜ್​ಗೆ ಮೊದಲು ಮುಸ್ಲಿಮರು ಕೈಕಾಲು ಸ್ವಚ್ಛಗೊಳಿಸಲು ಇದೇ ನೀರು ಬಳಸುತ್ತಿದ್ದರು. ಎಂದು ಮಸೀದಿ ಸಮಿತಿಯು ವಾದಿಸಿತ್ತು.

Published On - 11:59 am, Tue, 24 May 22

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ