AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪಗಳು; 164 ಜನ ಸಾವು, 971 ಜನರಿಗೆ ಗಂಭೀರ ಗಾಯ

ವೆನೆಜುವೆಲಾದಲ್ಲಿ ಸಂಭವಿಸಿದ ಎರಡು ಪ್ರಬಲ ಭೂಕಂಪಗಳ ಪರಿಣಾಮವಾಗಿ ಕನಿಷ್ಠ 164 ಜನರು ಸಾವನ್ನಪ್ಪಿದ್ದಾರೆ ಮತ್ತು 971 ಜನರು ಗಾಯಗೊಂಡಿದ್ದಾರೆ ಎಂದು ದೇಶದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ತಿಳಿಸಿದ್ದಾರೆ. ಬುಧವಾರ ಸಂಜೆ 7.2 ಮತ್ತು 7.5 ತೀವ್ರತೆಯ ಭೀಕರ ಭೂಕಂಪಗಳು ಸಂಭವಿಸಿತ್ತು. ಈ ಭೂಕಂಪಗಳು ವೆನೆಜುವೆಲಾದಲ್ಲಿ ಕಳೆದ ಒಂದು ಶತಮಾನಕ್ಕೂ ಹೆಚ್ಚು ಅವಧಿಯಲ್ಲಿ ಸಂಭವಿಸಿದ ಅತ್ಯಂತ ಪ್ರಬಲ ಭೂಕಂಪಗಳಲ್ಲಿ ಒಂದಾಗಿದ್ದು, ಇದರ ಕಂಪನಗಳು ಇಡೀ ಪ್ರದೇಶದಾದ್ಯಂತ ದಾಖಲಾಗಿವೆ.

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪಗಳು; 164 ಜನ ಸಾವು, 971 ಜನರಿಗೆ ಗಂಭೀರ ಗಾಯ
Venezuela EarthquakeImage Credit source: AP
ಸುಷ್ಮಾ ಚಕ್ರೆ
|

Updated on: Jun 25, 2026 | 4:31 PM

Share

ಮುಖ್ಯಾಂಶಗಳು

  • ವೆನೆಜುವೆಲಾದಲ್ಲಿ ಪ್ರಬಲ ಭೂಕಂಪದಿಂದ 164 ಜನ ಸಾವು
  • ಭೂಕಂಪದ ತೀವ್ರತೆಗೆ ನೂರಾರು ಕಟ್ಟಡಗಳು ನೆಲಸಮ
  • ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ದುರಂತ

ಕರಾಕಸ್, ಜೂನ್ 25: ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ಭೀಕರ ಪ್ರಕೃತಿ ವಿಕೋಪ ಸಂಭವಿಸಿದೆ. ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ಸರಣಿ ಪ್ರಬಲ ಭೂಕಂಪಗಳ (Earthquake) ಪರಿಣಾಮವಾಗಿ ಕನಿಷ್ಠ 164 ಜನರು ಸಾವನ್ನಪ್ಪಿದ್ದಾರೆ ಮತ್ತು 971ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭೂಕಂಪದ ತೀವ್ರತೆಗೆ ನೂರಾರು ಕಟ್ಟಡಗಳು ನೆಲಸಮವಾಗಿದ್ದು, ಅವಶೇಷಗಳ ಅಡಿಯಲ್ಲಿ ಇನ್ನೂ ನೂರಾರು ಜನರು ಸಿಲುಕಿರುವ ಆತಂಕ ಎದುರಾಗಿದೆ.

ಪ್ರಬಲ ಭೂಕಂಪದ ಕಂಪನಕ್ಕೆ ರಾಜಧಾನಿ ಕರಾಕಸ್ ಸೇರಿದಂತೆ ಪ್ರಮುಖ ನಗರಗಳ ಬಹು ಅಂತಸ್ತಿನ ಕಟ್ಟಡಗಳು, ವಸತಿ ಗೃಹಗಳು ಮತ್ತು ವಾಣಿಜ್ಯ ಸಂಕೀರ್ಣಗಳು ಕ್ಷಣಾರ್ಧದಲ್ಲಿ ಕುಸಿದು ಬಿದ್ದಿವೆ. ರಸ್ತೆಗಳು ಬಿರುಕು ಬಿಟ್ಟಿದ್ದು, ವಿದ್ಯುತ್ ಮತ್ತು ಸಂವಹನ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಇದನ್ನೂ ಓದಿ: ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ

ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ:

ಸ್ಥಳೀಯ ವಿಪತ್ತು ನಿರ್ವಹಣಾ ಪಡೆಗಳು, ಸೇನೆ ಮತ್ತು ಸ್ವಯಂಸೇವಕರು ಜಂಟಿಯಾಗಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗುತ್ತಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಆಸ್ಪತ್ರೆಗಳು ಹೌಸ್‌ಫುಲ್:

900ಕ್ಕೂ ಅಧಿಕ ಜನರು ಗಾಯಗೊಂಡಿರುವುದರಿಂದ ಸ್ಥಳೀಯ ಆಸ್ಪತ್ರೆಗಳಲ್ಲಿ ಬೆಡ್‌ಗಳು ಮತ್ತು ವೈದ್ಯಕೀಯ ಸಾಮಗ್ರಿಗಳ ಕೊರತೆ ಎದುರಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು, ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Telangana Earthquake: ತೆಲಂಗಾಣದಲ್ಲಿ 3.8 ತೀವ್ರತೆಯ ಭೂಕಂಪ

ಭೂಕಂಪ ಪೀಡಿತ ವೆನೆಜುವೆಲಾಕ್ಕೆ ನೆರೆಹೊರೆಯ ದೇಶಗಳು ಹಾಗೂ ಜಾಗತಿಕ ಸಮುದಾಯವು ತುರ್ತು ರಕ್ಷಣಾ ಸಾಮಗ್ರಿಗಳು, ವೈದ್ಯಕೀಯ ತಂಡಗಳು ಮತ್ತು ಆಹಾರ ಪದಾರ್ಥಗಳನ್ನು ಕಳುಹಿಸಿಕೊಡಲು ಮುಂದಾಗಿವೆ. ದೇಶದ ಇತಿಹಾಸದಲ್ಲೇ ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಭೂಕಂಪ ಇದಾಗಿದೆ ಎಂದು ಹೇಳಲಾಗುತ್ತಿದ್ದು, ಸಂತ್ರಸ್ತರ ಆಕ್ರಂದನ ಮುಗಿಲು ಮುಟ್ಟಿದೆ.

ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ, ವೆನೆಜುವೆಲಾದ ರಾಜಧಾನಿ ಕರಾಕಸ್‌ನಿಂದ ಸುಮಾರು 1,700 ಕಿಲೋಮೀಟರ್ ದೂರದಲ್ಲಿರುವ ಬ್ರೆಜಿಲ್‌ನ ಅಮೆಜಾನ್ ಪ್ರದೇಶದವರೆಗೂ ಕಂಪನದ ಅನುಭವವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಕಟ್ಟಡಗಳಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಸಾಗುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?