AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್

ವಿಮಾನದ ತುರ್ತು ಬಾಗಿಲು ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ

Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್
ವೈರಲ್​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: Jun 17, 2023 | 12:20 PM

Share

ವಿಮಾನದ ತುರ್ತು ಬಾಗಿಲು (Aircraft emergency door) ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ, ಹೌದು ಈ ಬಗ್ಗೆ ಒಂದು ವೀಡಿಯೊ ಕೂಡ ಟ್ವಿಟರ್​​ನಲ್ಲಿ ವೈರಲ್​ ಆಗಿದೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕರೊಬ್ಬರು ಹಂಚಿಕೊಂಡಿದ್ದಾರೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನಾಕಾರ ಟಿಯೆರ್ರಿ ಅವರ ಹಂಚಿಕೊಂಡಿದ್ದು, ವಿಮಾನದಲ್ಲಿ ಬಾಗಿಲು ತೆರೆದಿರುವ ಮತ್ತು ಜೋರಾಗಿ ಗಾಳಿ ಬರುತ್ತಿರುವುದನ್ನು ಕಾಣುಬಹುದು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಬ್ರೇಕಿಂಗ್ ಏವಿಯೇಷನ್ ​​ನ್ಯೂಸ್ ತಮ್ಮ ಟ್ವಿಟ್ಟರ್​​ನಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನೆಕಾರ ಟಿಯೆರ್ರಿಯ ವಿಮಾನವು ಸಾವೊ ಲೂಯಿಸ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ, ಎಂದು ಟ್ವೀಟ್ ಮಾಡಿದ್ದಾರೆ. ನಂತರದ ಟ್ವೀಟ್‌ನಲ್ಲಿ, ಎನ್‌ಎಚ್‌ಆರ್ ಟ್ಯಾಕ್ಸಿ ಏರಿಯೊ ನಿರ್ವಹಿಸುವ ಎಂಬ್ರೇರ್ -110 ವಿಮಾನದಲ್ಲಿಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ನನ್ನದೊಂದು ಅಳಿಲು ಸೇವೆ ಎಂದು ಮನೆ ಮಾಲೀಕನ ಜೊತೆಗೆ ಗೋವಿಗೆ ಹುಲ್ಲು ತಂದ ಶ್ವಾನ

ವಿಮಾನದಲ್ಲಿದ್ದ ಎಲ್ಲರೂ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ಅವರನ್ನು ಹೊಟೇಲ್​​ಗಳಿಗೆ ಸಾಗಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ವೀಡಿಯೊವನ್ನು ಜೂನ್ 14ರಂದು ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಅನೇಕರು ಕಮೆಂಟ್ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರ ವಿಮಾನದಲ್ಲಿ ನೈಸರ್ಗಿಕವಾಗಿ ಗಾಳಿಬಂದಿದೆ. ಇನ್ನೂಬ್ಬ ಬಳಕೆದಾರ ಇದು ತುಂಬಾ ಭಯಾನಕವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ