Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್

ವಿಮಾನದ ತುರ್ತು ಬಾಗಿಲು ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ

Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್
ವೈರಲ್​ ವೀಡಿಯೊ
Follow us
|

Updated on: Jun 17, 2023 | 12:20 PM

ವಿಮಾನದ ತುರ್ತು ಬಾಗಿಲು (Aircraft emergency door) ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ, ಹೌದು ಈ ಬಗ್ಗೆ ಒಂದು ವೀಡಿಯೊ ಕೂಡ ಟ್ವಿಟರ್​​ನಲ್ಲಿ ವೈರಲ್​ ಆಗಿದೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕರೊಬ್ಬರು ಹಂಚಿಕೊಂಡಿದ್ದಾರೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನಾಕಾರ ಟಿಯೆರ್ರಿ ಅವರ ಹಂಚಿಕೊಂಡಿದ್ದು, ವಿಮಾನದಲ್ಲಿ ಬಾಗಿಲು ತೆರೆದಿರುವ ಮತ್ತು ಜೋರಾಗಿ ಗಾಳಿ ಬರುತ್ತಿರುವುದನ್ನು ಕಾಣುಬಹುದು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಬ್ರೇಕಿಂಗ್ ಏವಿಯೇಷನ್ ​​ನ್ಯೂಸ್ ತಮ್ಮ ಟ್ವಿಟ್ಟರ್​​ನಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನೆಕಾರ ಟಿಯೆರ್ರಿಯ ವಿಮಾನವು ಸಾವೊ ಲೂಯಿಸ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ, ಎಂದು ಟ್ವೀಟ್ ಮಾಡಿದ್ದಾರೆ. ನಂತರದ ಟ್ವೀಟ್‌ನಲ್ಲಿ, ಎನ್‌ಎಚ್‌ಆರ್ ಟ್ಯಾಕ್ಸಿ ಏರಿಯೊ ನಿರ್ವಹಿಸುವ ಎಂಬ್ರೇರ್ -110 ವಿಮಾನದಲ್ಲಿಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ನನ್ನದೊಂದು ಅಳಿಲು ಸೇವೆ ಎಂದು ಮನೆ ಮಾಲೀಕನ ಜೊತೆಗೆ ಗೋವಿಗೆ ಹುಲ್ಲು ತಂದ ಶ್ವಾನ

ವಿಮಾನದಲ್ಲಿದ್ದ ಎಲ್ಲರೂ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ಅವರನ್ನು ಹೊಟೇಲ್​​ಗಳಿಗೆ ಸಾಗಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ವೀಡಿಯೊವನ್ನು ಜೂನ್ 14ರಂದು ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಅನೇಕರು ಕಮೆಂಟ್ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರ ವಿಮಾನದಲ್ಲಿ ನೈಸರ್ಗಿಕವಾಗಿ ಗಾಳಿಬಂದಿದೆ. ಇನ್ನೂಬ್ಬ ಬಳಕೆದಾರ ಇದು ತುಂಬಾ ಭಯಾನಕವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ