AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan Video: ತಲೆಗೆ ಬುಲೆಟ್​ ಪ್ರೂಫ್ ಬಕೆಟ್ ಧರಿಸಿ ಕೋರ್ಟ್​ಗೆ ಹಾಜರಾದ ಇಮ್ರಾನ್ ಖಾನ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಲಾಹೋರ್ ಕೋರ್ಟ್‌ಗೆ ಹಾಜರಾದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಮ್ರಾನ್ ಖಾನ್ ಭಾರೀ ಭದ್ರತೆಯ ನಡುವೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

Imran Khan Video: ತಲೆಗೆ ಬುಲೆಟ್​ ಪ್ರೂಫ್ ಬಕೆಟ್ ಧರಿಸಿ ಕೋರ್ಟ್​ಗೆ ಹಾಜರಾದ ಇಮ್ರಾನ್ ಖಾನ್
ಇಮ್ರಾನ್ ಖಾನ್
ನಯನಾ ರಾಜೀವ್
|

Updated on:Apr 05, 2023 | 11:51 AM

Share

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಲಾಹೋರ್ ಕೋರ್ಟ್‌ಗೆ ಹಾಜರಾದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಮ್ರಾನ್ ಖಾನ್ ಭಾರೀ ಭದ್ರತೆಯ ನಡುವೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಈ ಸಮಯದಲ್ಲಿ ಬುಲೆಟ್​ಪ್ರೂಫ್ ಬಕೆಟ್​ ಒಂದನ್ನು ಇಮ್ರಾನ್ ಖಾನ್ ತಲೆಗೆ ಹಾಕಿರುವುದನ್ನು ಕಾಣಬಹುದು. ಯಾವುದೇ ದಾಳಿಕೋರನು ಮೇಲಿನಿಂದ ಗುಂಡು ಹಾರಿಸಬಾರದು ಎನ್ನುವ ಮುನ್ನೆಚ್ಚರಿಕೆಯಿಂದ ಬ್ಯಾಲಿಸ್ಟಿಕ್​ ಶೀಲ್ಡ್​ನ್ನು ಬಕೆಟ್​ನಂತೆ ಮಾಡಿ ತಲೆಗೆ ಹಾಕಿಕೊಂಡಿದ್ದರು.

ಝಿಲ್ಲೆ ಷಾ ಹತ್ಯೆ ಪ್ರಕರಣ, ಬೆಂಕಿ ಹಚ್ಚುವಿಕೆ ಮತ್ತು ರಾಜ್ಯ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವ ಮೂರು ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಜಾಮೀನು ಕೋರಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಭಯೋತ್ಪಾದನೆ ನಿಗ್ರಹ ಹಾಗೂ ನೆರವು ಮತ್ತು ಕುಮ್ಮಕ್ಕು ನೀಡುವ ಕಾನೂನುಗಳಡಿಯಲ್ಲಿ ರೇಸ್​ಕೋರ್ಸ್​ ಪೊಲೀಸ್ ಠಾಣೆಯಲ್ಲಿ ಇಮ್ರಾನ್ ಖಾನ್ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

ಮತ್ತಷ್ಟು ಓದಿ: Imran Khan: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ಗೆ ಮಧ್ಯಂತರ ಜಾಮೀನು

ಇಮ್ರಾನ್ ಖಾನ್ ಅವರ ತಲೆಯನ್ನು ಬುಲೆಟ್​ ಪ್ರೂಫ್ ಬಕೆಟ್​ನಿಂದ ಮುಚ್ಚಲಾಗಿತ್ತು ಅವರು ನ್ಯಾಯಾಲಯಕ್ಕೆ ಹಾಜರಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇಮ್ರಾನ್ ಖಾನ್ ಬುಲೆಟ್​ ಪ್ರೂಫ್ ಬುರ್ಖಾ ಧರಿಸಿದ್ದಾರೆ ಎಂದು ಕೆಲವರು ಕೇಳಿದ್ದಾರೆ. ಕಳೆದ ವರ್ಷ ವಜೀರಾಬಾದ್​ನಲ್ಲಿ ನಡೆದ ದಾಳಿಯ ಬಳಿಕ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಖಾನ್ ಪ್ರಸ್ತುತ 140ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದು, ಭಯೋತ್ಪಾದನೆ, ಕೊಲೆ ಯತ್ನ, ಧರ್ಮನಿಂದನೆ ಬಗ್ಗೆ PMNL ನೇತೃತ್ವದ ಸಮ್ಮಿಶ್ರ ಸರ್ಕಾರ ಕಳೆದ 11 ತಿಂಗಳುಗಳಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಇದನ್ನು ಪಾಕಿಸ್ತಾನದ Z+ ಭದ್ರತೆ ಎಂದು ಬಣ್ಣಿಸಲಾಗುತ್ತಿದೆ.

ಇಮ್ರಾನ್ ಖಾನ್ ಅವರ ಈ ವಿಡಿಯೋ ಇಂದಿನದು. ಈ ವಿಡಿಯೋವನ್ನು ಇಮ್ರಾನ್ ಖಾನ್ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಕೂಡ ಹಂಚಿಕೊಂಡಿದೆ. ಒಟ್ಟು ಮೂರು ಪ್ರಕರಣಗಳಲ್ಲಿ ಇಮ್ರಾನ್​ ಖಾನ್​ಗೆ ಜಾಮೀನು ಸಿಕ್ಕಿದೆ. ಜಾಮೀನನ್ನು ಏಪ್ರಿಲ್ 13 ರವರೆಗೆ ವಿಸ್ತರಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:47 am, Wed, 5 April 23

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು