AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದ ವಿಚಾರ, ಕದ್ದಿರುವ ಎಕೆ-47ನಿಂದ ಭಾರತೀಯನ ಹತ್ಯೆಗೈದ ಉಗಾಂಡದ ಆಫ್​​-ಡ್ಯೂಟಿ ಪೊಲೀಸ್

ಉಗಾಂಡದ ಆಫ್​ ಡ್ಯೂಟಿ ಪೊಲೀಸ್ ಪೇದೆಯೊಬ್ಬರು ಸಾಲದ ವಿಚಾರವಾಗಿ ನಡೆದ ಗಲಾಟೆಯಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ

ಸಾಲದ ವಿಚಾರ, ಕದ್ದಿರುವ ಎಕೆ-47ನಿಂದ ಭಾರತೀಯನ ಹತ್ಯೆಗೈದ ಉಗಾಂಡದ ಆಫ್​​-ಡ್ಯೂಟಿ ಪೊಲೀಸ್
ಉಗಾಂಡ ಪೊಲೀಸ್
ನಯನಾ ರಾಜೀವ್
|

Updated on: May 16, 2023 | 10:52 AM

Share

ಉಗಾಂಡದ ಆಫ್​ ಡ್ಯೂಟಿ ಪೊಲೀಸ್ ಪೇದೆಯೊಬ್ಬರು ಸಾಲದ ವಿಚಾರವಾಗಿ ನಡೆದ ಗಲಾಟೆಯಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ. ಉತ್ತಮ್​ ಭಂಡಾರಿ ಮೃತರು, ಟಿಎಫ್‌ಎಸ್ ಫೈನಾನ್ಷಿಯಲ್ ಸರ್ವೀಸಸ್ ಕಂಪನಿಯ ನಿರ್ದೇಶಕರಾಗಿದ್ದಾರೆ, ಉಗಾಂಡಾದ ರಾಜಧಾನಿ ಕಂಪಾಲಾದಲ್ಲಿ ಪೊಲೀಸ್ ಪೇದೆಯೊಬ್ಬರು ಕದ್ದ ಎಕೆ-47 ರೈಫಲ್​​ನಿಂದ ಭಾರತೀಯ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆ ವೇಳೆ ಆರೋಪಿ ಕಾನ್‌ಸ್ಟೆಬಲ್ ಕರ್ತವ್ಯದಲ್ಲಿ ಇರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ, ಮೇ 12 ರಂದು ಉತ್ತಮ್ ಭಂಡಾರಿ ಅವರನ್ನು ಹತ್ಯೆ ಮಾಡಿರುವ ಆರೋಪದ ಮೇಲೆ 30 ವರ್ಷದ ಇವಾನ್ ವಾಬ್‌ವೈರ್ ಅವರನ್ನು ಬಂಧಿಸಲಾಗಿದೆ ಎಂದು ಕಂಪಾಲಾ ಮೆಟ್ರೋಪಾಲಿಟನ್ ಪೊಲೀಸರು ತಿಳಿಸಿದ್ದಾರೆ.

ಭಂಡಾರಿ ಅವರು ಟಿಎಫ್‌ಎಸ್ ಫೈನಾನ್ಷಿಯಲ್ ಸರ್ವೀಸಸ್ ಕಂಪನಿಯ ನಿರ್ದೇಶಕರಾಗಿದ್ದು, ವಾಬ್‌ವೈರ್ ಅದರ ಕ್ಲೈಂಟ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಪ್ರಕಾರ, ಕಾನ್‌ಸ್ಟೆಬಲ್ ಕಂಪನಿಯಿಂದ ಸಾಲ ಪಡೆದ ಮೊತ್ತಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು.

ಮೇ 12 ರಂದು ವಾಬ್‌ವೈರ್‌ಗೆ ತನ್ನ ಸಾಲದ ಮೊತ್ತದ ಬಗ್ಗೆ ತಿಳಿಸಿದಾಗ, ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಭಂಡಾರಿಯೊಂದಿಗೆ ಜಗಳವಾಡಿದ್ದಾನೆ ಎನ್ನಲಾಗಿದೆ. ಭಂಡಾರಿಗೆ ಗುಂಡು ಹಾರಿಸಿದ ನಂತರ ವಾಬ್‌ವೈರ್ ತನ್ನ ಎಕೆ -47 ರೈಫಲ್ ಅನ್ನು ಬಿಟ್ಟು ಓಡಿಹೋಗಿದ್ದಾನೆ. ಪೊಲೀಸರು ಸ್ಥಳದಿಂದ 13 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ವಾಬ್‌ವೈರ್‌ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ 18 ವರ್ಷದ ಯುವಕನಿಂದ ಫೈರಿಂಗ್: ಮೂವರ ಸಾವು

ಮಾನಸಿಕ ಆರೋಗ್ಯ ಸಮಸ್ಯೆಗಳಿಗಾಗಿ ಎರಡು ಬಾರಿ ಆಸ್ಪತ್ರೆಗೆ ದಾಖಲಾದ ನಂತರ ಐದು ವರ್ಷಗಳ ಕಾಲ ಶಸ್ತ್ರಾಸ್ತ್ರಗಳನ್ನು ಸಾಗಿಸುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಬ್‌ವೈರ್ ತನ್ನ ರೂಮ್‌ಮೇಟ್ ಆಗಿರುವ ಮತ್ತೋರ್ವ ಪೊಲೀಸರಿಂದ ಈ ರೈಫಲ್ ಅನ್ನು ಕದ್ದಿದ್ದ.

ಏತನ್ಮಧ್ಯೆ, ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೋಲೀಸ್, ಜೆಫ್ರಿ ತುಮುಸಿಮೆ ಕಟ್ಸಿಗಾಜಿ ಅವರು ಉಗಾಂಡಾದಲ್ಲಿರುವ ಭಾರತೀಯ ಸಮುದಾಯವನ್ನು ಭೇಟಿ ಮಾಡಿ ಅವರ ಸುರಕ್ಷತೆಯ ಬಗ್ಗೆ ಭರವಸೆ ನೀಡಿದ್ದಾರೆ ಎಂದು ನೈಲ್ ಪೋಸ್ಟ್ ವರದಿ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!