AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ

ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲಕೊಬ್ಬನ ಬಾಯಿಗೆ ಮುತ್ತಿಟ್ಟು ತನ್ನ ನಾಲಿಗೆಯನ್ನು ಚೀಪುವಂತೆ ಹೇಳಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.

Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ
ದಲೈ ಲಾಮಾ
ನಯನಾ ರಾಜೀವ್
|

Updated on:Apr 10, 2023 | 9:48 AM

Share

ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲಕೊಬ್ಬನ ಬಾಯಿಗೆ ಮುತ್ತಿಟ್ಟು ತನ್ನ ನಾಲಿಗೆಯನ್ನು ಚೀಪುವಂತೆ ಹೇಳಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಬಂದಿದ್ದ ಭಾರತೀಯ ಬಾಲಕನಿಗೆ ಮುತ್ತಿಟ್ಟು ನೀನು ನನ್ನ ನಾಲಿಗೆ ಚೀಪುವೆಯಾ ಎಂದು ದಲೈಲಾಮಾ ಕೇಳಿದ್ದರು.

ಈ ವಿಡಿಯೋವನ್ನು ಜೂಸ್ಟ್​ ಬ್ರೋಕರ್ ಎಂಬ ಟ್ವಿಟ್ಟರ್ ಬಳಕೆದಾರ ಹಂಚಿಕೊಂಡಿದ್ದು, ದಲೈಲಾಮಾರ ಈ ವರ್ತನೆಗೆ ಹಿಂದಿನ ಉದ್ದೇಶವೇನೆಂದು ಎಲ್ಲರೂ ಪ್ರಶ್ನಿಸಿದ್ದಾರೆ. ಅನೇಕರು ಈ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ. ದೇಶದಲ್ಲಿ ಮಕ್ಕಳ ಕೆನ್ನೆಗೆ ಮುತ್ತು ಕೊಡುವುದು ಆಕ್ಷೇಪಾರ್ಹವಲ್ಲ ಆದರೆ ಭಾರತೀಯ ಸಂಪ್ರದಾಯವಾದಿಗಳು ಸಾರ್ವಜನಿಕವಾಗಿ ಚುಂಬಿಸುವುದನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಇದು ಸಾಮಾನ್ಯವೇ ಆಗಿರಬಹುದು. ಆದರೆ ಅಲ್ಲಿಯೂ ಕೂಡ ಹಿರಿಯರಿಗೆ ಸೀಮಿತವಾಗಿದೆ.

ಮತ್ತಷ್ಟು ಓದಿ: Dalai Lama: ಲಡಾಖ್ ಪ್ರವಾಸದ ಬೆನ್ನಲ್ಲೇ ಚೀನಾಗೆ ಮಹತ್ವದ ಸಂದೇಶ ರವಾನಿಸಿದ ದಲೈ ಲಾಮಾ

ಬೌದ್ಧರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಗುವೊಂದು ದಲೈಲಾಮಾ ಅವರನ್ನು ಅಪ್ಪಿಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿತ್ತು ಎಂದು ಹೇಳಲಾಗಿದೆ. ನಂತರ ದಲೈಲಾಮಾ ಮಗುವನ್ನು ಕರೆದರು. ಮಗುವಿನೊಂದಿಗೆ ಮಾತನಾಡುವಾಗ, ದಲೈ ಲಾಮಾ ಮೊದಲು ಅವನ ತುಟಿಗಳನ್ನು ಚುಂಬಿಸಿದರು ಮತ್ತು ನಂತರ ಅವರ ನಾಲಿಗೆಯನ್ನು ಹೊರತೆಗೆದು ನನ್ನ ನಾಲಿಗೆಯನ್ನು ನೆಕ್ಕುವಂತೆ ಹೇಳಿದ್ದರು.

ವೀಡಿಯೋ ವೈರಲ್ ಆದ ನಂತರ ಟೀಕೆಗೆ ಗುರಿಯಾಗಿರುವ ದಲೈ ಲಾಮಾ ಅವರ ಅನುಯಾಯಿಯೊಬ್ಬರು ಅವರು ಬೌದ್ಧ ಸನ್ಯಾಸಿ ಹುಡುಗನೊಂದಿಗೆ ತಮಾಷೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗೆ ಟ್ವಿಟರ್ ಬಳಕೆದಾರರು ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:46 am, Mon, 10 April 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ