AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ

ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲಕೊಬ್ಬನ ಬಾಯಿಗೆ ಮುತ್ತಿಟ್ಟು ತನ್ನ ನಾಲಿಗೆಯನ್ನು ಚೀಪುವಂತೆ ಹೇಳಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.

Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ
ದಲೈ ಲಾಮಾ
ನಯನಾ ರಾಜೀವ್
|

Updated on:Apr 10, 2023 | 9:48 AM

Share

ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲಕೊಬ್ಬನ ಬಾಯಿಗೆ ಮುತ್ತಿಟ್ಟು ತನ್ನ ನಾಲಿಗೆಯನ್ನು ಚೀಪುವಂತೆ ಹೇಳಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಬಂದಿದ್ದ ಭಾರತೀಯ ಬಾಲಕನಿಗೆ ಮುತ್ತಿಟ್ಟು ನೀನು ನನ್ನ ನಾಲಿಗೆ ಚೀಪುವೆಯಾ ಎಂದು ದಲೈಲಾಮಾ ಕೇಳಿದ್ದರು.

ಈ ವಿಡಿಯೋವನ್ನು ಜೂಸ್ಟ್​ ಬ್ರೋಕರ್ ಎಂಬ ಟ್ವಿಟ್ಟರ್ ಬಳಕೆದಾರ ಹಂಚಿಕೊಂಡಿದ್ದು, ದಲೈಲಾಮಾರ ಈ ವರ್ತನೆಗೆ ಹಿಂದಿನ ಉದ್ದೇಶವೇನೆಂದು ಎಲ್ಲರೂ ಪ್ರಶ್ನಿಸಿದ್ದಾರೆ. ಅನೇಕರು ಈ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ. ದೇಶದಲ್ಲಿ ಮಕ್ಕಳ ಕೆನ್ನೆಗೆ ಮುತ್ತು ಕೊಡುವುದು ಆಕ್ಷೇಪಾರ್ಹವಲ್ಲ ಆದರೆ ಭಾರತೀಯ ಸಂಪ್ರದಾಯವಾದಿಗಳು ಸಾರ್ವಜನಿಕವಾಗಿ ಚುಂಬಿಸುವುದನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಇದು ಸಾಮಾನ್ಯವೇ ಆಗಿರಬಹುದು. ಆದರೆ ಅಲ್ಲಿಯೂ ಕೂಡ ಹಿರಿಯರಿಗೆ ಸೀಮಿತವಾಗಿದೆ.

ಮತ್ತಷ್ಟು ಓದಿ: Dalai Lama: ಲಡಾಖ್ ಪ್ರವಾಸದ ಬೆನ್ನಲ್ಲೇ ಚೀನಾಗೆ ಮಹತ್ವದ ಸಂದೇಶ ರವಾನಿಸಿದ ದಲೈ ಲಾಮಾ

ಬೌದ್ಧರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಗುವೊಂದು ದಲೈಲಾಮಾ ಅವರನ್ನು ಅಪ್ಪಿಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿತ್ತು ಎಂದು ಹೇಳಲಾಗಿದೆ. ನಂತರ ದಲೈಲಾಮಾ ಮಗುವನ್ನು ಕರೆದರು. ಮಗುವಿನೊಂದಿಗೆ ಮಾತನಾಡುವಾಗ, ದಲೈ ಲಾಮಾ ಮೊದಲು ಅವನ ತುಟಿಗಳನ್ನು ಚುಂಬಿಸಿದರು ಮತ್ತು ನಂತರ ಅವರ ನಾಲಿಗೆಯನ್ನು ಹೊರತೆಗೆದು ನನ್ನ ನಾಲಿಗೆಯನ್ನು ನೆಕ್ಕುವಂತೆ ಹೇಳಿದ್ದರು.

ವೀಡಿಯೋ ವೈರಲ್ ಆದ ನಂತರ ಟೀಕೆಗೆ ಗುರಿಯಾಗಿರುವ ದಲೈ ಲಾಮಾ ಅವರ ಅನುಯಾಯಿಯೊಬ್ಬರು ಅವರು ಬೌದ್ಧ ಸನ್ಯಾಸಿ ಹುಡುಗನೊಂದಿಗೆ ತಮಾಷೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗೆ ಟ್ವಿಟರ್ ಬಳಕೆದಾರರು ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:46 am, Mon, 10 April 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್