AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಕೆಫೆಟೇರಿಯಾದಲ್ಲಿ ವಿದ್ಯಾರ್ಥಿಗಳಿಗೆ ಥಳಿಸುತ್ತಿರುವ ಅಮೆರಿಕದ ಪೊಲೀಸ್; ತನಿಖೆಗೆ ಆದೇಶ

ಅಧಿಕಾರಿಗಳು ಮಧ್ಯಪ್ರವೇಶಿಸಲು ಮುಂದಾದಾಗ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ವಿಡಿಯೊ ಇದಾಗಿದೆ. ಒಬ್ಬ ಅಧಿಕಾರಿಯು ಒಬ್ಬ ವಿದ್ಯಾರ್ಥಿಯನ್ನು ಹಿಡಿದು ಅವನು ನೆಲದ ಮೇಲೆ ಬೀಳುವ ಮೊದಲು ಗಾಡಿ ಮೇಲೆ ತಳ್ಳಿ ಹೊಡೆಯುವುದನ್ನು...

Watch ಕೆಫೆಟೇರಿಯಾದಲ್ಲಿ ವಿದ್ಯಾರ್ಥಿಗಳಿಗೆ ಥಳಿಸುತ್ತಿರುವ ಅಮೆರಿಕದ ಪೊಲೀಸ್; ತನಿಖೆಗೆ ಆದೇಶ
ಅಮೆರಿಕ ಪೊಲೀಸರು ವಿದ್ಯಾರ್ಥಿಗಳಿಗೆ ಥಳಿಸುತ್ತಿರುವುದು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 27, 2022 | 1:52 PM

Share

ಪೋಲೀಸ್ ಅಧಿಕಾರಿಯೊಬ್ಬರು ವಿದ್ಯಾರ್ಥಿಯನ್ನು ಹಿಡಿದು ಕೆಫೆಟೇರಿಯಾ ಕಾರ್ಟ್‌ಗೆ ಹೊಡೆಯುತ್ತಿರುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಹಲವಾರು ಕಾನೂನು ಜಾರಿ  ಅಧಿಕಾರಿಗಳ (law enforcement officers) ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿರುವ ನಿಮಿಟ್ಜ್ ಪ್ರೌಢಶಾಲೆಯಲ್ಲಿ (Nimitz High School) ಬುಧವಾರ ಈ ಘಟನೆ ನಡೆದಿದೆ. ಅಧಿಕಾರಿಗಳು ಮಧ್ಯಪ್ರವೇಶಿಸಲು ಮುಂದಾದಾಗ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ವಿಡಿಯೊ ಇದಾಗಿದೆ. ಒಬ್ಬ ಅಧಿಕಾರಿಯು ಒಬ್ಬ ವಿದ್ಯಾರ್ಥಿಯನ್ನು ಹಿಡಿದು ಅವನು ನೆಲದ ಮೇಲೆ ಬೀಳುವ ಮೊದಲು ಗಾಡಿ ಮೇಲೆ ತಳ್ಳಿ ಹೊಡೆಯುವುದನ್ನು ಕಾಣಬಹುದು. ವಿದ್ಯಾರ್ಥಿ ಎದ್ದು ನಿಂತಾಗ, ಪೋಲೀಸ್ ಮತ್ತೆ ಅವನನ್ನು ನೆಲಕ್ಕೆ ತಳ್ಳುತ್ತಾನೆ. ಈ ಜಗಳಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ ಅಥವಾ ಈ ವಿಡಿಯೊ ಚಿತ್ರೀಕರಣ ಮಾಡುವ ಮುನ್ನ ಪೊಲೀಸ್ ಅಧಿಕಾರಿ ಮತ್ತು ವಿದ್ಯಾರ್ಥಿ ಗಳ ನಡುವೆ ಜಗಳ ನಡೆದಿದೆಯೇ ಎಂಬುದು ಗೊತ್ತಾಗಿಲ್ಲ. ವಿದ್ಯಾರ್ಥಿಗಳ ನಡುವೆ ಜಗಳ ಬಿಡಿಸಲು ಪೊಲೀಸರು ಬಂದಿದ್ದರು ಎಂದು ಇರ್ವಿಂಗ್ ಪೊಲೀಸ್ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ನೀತಿಗಳು ಮತ್ತು ಕಾರ್ಯವಿಧಾನಗಳನ್ನು ಸೂಕ್ತವಾಗಿ ಅನ್ವಯಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಬಳಸಲಾದ ಪೊಲೀಸ್ ಪಡೆ ಬಗ್ಗೆ ಇರ್ವಿಂಗ್ ಪೋಲೀಸ್ ಇಲಾಖೆ ಪರಿಶೀಲಿಸುತ್ತಿದೆ. ವಿಡಿಯೊ ತುಣುಕುಗಳನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೇವೆ. ಈ ಬಗ್ಗೆ ಆಂತರಿಕ ತನಿಖೆ ಪ್ರಾರಂಭವಾಗಿದೆ ಎಂದು ಪೊಲೀಸ್ ಪ್ರಕಟಣೆ ಹೇಳಿದೆ. ಇದಲ್ಲದೆ, ವಿದ್ಯಾರ್ಥಿಯನ್ನು ತಳ್ಳಿದ ಅಧಿಕಾರಿಯನ್ನು ಬೇರೆಡೆಗೆ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ, ಕಾದಾಟದಲ್ಲಿ ತೊಡಗಿರುವ ವಿದ್ಯಾರ್ಥಿಗಳನ್ನು ಸಾರ್ವಜನಿಕವಾಗಿ ಹೋರಾಡುವ ಸಿ ವರ್ಗದ ದುಷ್ಕೃತ್ಯಕ್ಕಾಗಿ ಉಲ್ಲೇಖಿಸಲಾಗುತ್ತಿದೆ ಎಂದು ಎನ್‌ಬಿಸಿ ನ್ಯೂಸ್ ವರದಿ ಮಾಡಿದೆ. ತನಿಖೆಯ ಅಂಗವಾಗಿ ಪೊಲೀಸ್ ಇಲಾಖೆ ಇರ್ವಿಂಗ್ ಇಂಡಿಪೆಂಡೆಂಟ್ ಸ್ಕೂಲ್ ಡಿಸ್ಟ್ರಿಕ್ ಜತೆ ಮತ್ತು ವಿದ್ಯಾರ್ಥಿಗಳ ಹೆತ್ತವರ ಜತೆ ಮಾತನಾಡಿ ಮಾಹಿತಿ ಸಂಗ್ರಹಿಸುತ್ತಿದೆ.

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ