AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಕೆಫೆಟೇರಿಯಾದಲ್ಲಿ ವಿದ್ಯಾರ್ಥಿಗಳಿಗೆ ಥಳಿಸುತ್ತಿರುವ ಅಮೆರಿಕದ ಪೊಲೀಸ್; ತನಿಖೆಗೆ ಆದೇಶ

ಅಧಿಕಾರಿಗಳು ಮಧ್ಯಪ್ರವೇಶಿಸಲು ಮುಂದಾದಾಗ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ವಿಡಿಯೊ ಇದಾಗಿದೆ. ಒಬ್ಬ ಅಧಿಕಾರಿಯು ಒಬ್ಬ ವಿದ್ಯಾರ್ಥಿಯನ್ನು ಹಿಡಿದು ಅವನು ನೆಲದ ಮೇಲೆ ಬೀಳುವ ಮೊದಲು ಗಾಡಿ ಮೇಲೆ ತಳ್ಳಿ ಹೊಡೆಯುವುದನ್ನು...

Watch ಕೆಫೆಟೇರಿಯಾದಲ್ಲಿ ವಿದ್ಯಾರ್ಥಿಗಳಿಗೆ ಥಳಿಸುತ್ತಿರುವ ಅಮೆರಿಕದ ಪೊಲೀಸ್; ತನಿಖೆಗೆ ಆದೇಶ
ಅಮೆರಿಕ ಪೊಲೀಸರು ವಿದ್ಯಾರ್ಥಿಗಳಿಗೆ ಥಳಿಸುತ್ತಿರುವುದು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 27, 2022 | 1:52 PM

ಪೋಲೀಸ್ ಅಧಿಕಾರಿಯೊಬ್ಬರು ವಿದ್ಯಾರ್ಥಿಯನ್ನು ಹಿಡಿದು ಕೆಫೆಟೇರಿಯಾ ಕಾರ್ಟ್‌ಗೆ ಹೊಡೆಯುತ್ತಿರುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಹಲವಾರು ಕಾನೂನು ಜಾರಿ  ಅಧಿಕಾರಿಗಳ (law enforcement officers) ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿರುವ ನಿಮಿಟ್ಜ್ ಪ್ರೌಢಶಾಲೆಯಲ್ಲಿ (Nimitz High School) ಬುಧವಾರ ಈ ಘಟನೆ ನಡೆದಿದೆ. ಅಧಿಕಾರಿಗಳು ಮಧ್ಯಪ್ರವೇಶಿಸಲು ಮುಂದಾದಾಗ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ವಿಡಿಯೊ ಇದಾಗಿದೆ. ಒಬ್ಬ ಅಧಿಕಾರಿಯು ಒಬ್ಬ ವಿದ್ಯಾರ್ಥಿಯನ್ನು ಹಿಡಿದು ಅವನು ನೆಲದ ಮೇಲೆ ಬೀಳುವ ಮೊದಲು ಗಾಡಿ ಮೇಲೆ ತಳ್ಳಿ ಹೊಡೆಯುವುದನ್ನು ಕಾಣಬಹುದು. ವಿದ್ಯಾರ್ಥಿ ಎದ್ದು ನಿಂತಾಗ, ಪೋಲೀಸ್ ಮತ್ತೆ ಅವನನ್ನು ನೆಲಕ್ಕೆ ತಳ್ಳುತ್ತಾನೆ. ಈ ಜಗಳಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ ಅಥವಾ ಈ ವಿಡಿಯೊ ಚಿತ್ರೀಕರಣ ಮಾಡುವ ಮುನ್ನ ಪೊಲೀಸ್ ಅಧಿಕಾರಿ ಮತ್ತು ವಿದ್ಯಾರ್ಥಿ ಗಳ ನಡುವೆ ಜಗಳ ನಡೆದಿದೆಯೇ ಎಂಬುದು ಗೊತ್ತಾಗಿಲ್ಲ. ವಿದ್ಯಾರ್ಥಿಗಳ ನಡುವೆ ಜಗಳ ಬಿಡಿಸಲು ಪೊಲೀಸರು ಬಂದಿದ್ದರು ಎಂದು ಇರ್ವಿಂಗ್ ಪೊಲೀಸ್ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ನೀತಿಗಳು ಮತ್ತು ಕಾರ್ಯವಿಧಾನಗಳನ್ನು ಸೂಕ್ತವಾಗಿ ಅನ್ವಯಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಬಳಸಲಾದ ಪೊಲೀಸ್ ಪಡೆ ಬಗ್ಗೆ ಇರ್ವಿಂಗ್ ಪೋಲೀಸ್ ಇಲಾಖೆ ಪರಿಶೀಲಿಸುತ್ತಿದೆ. ವಿಡಿಯೊ ತುಣುಕುಗಳನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೇವೆ. ಈ ಬಗ್ಗೆ ಆಂತರಿಕ ತನಿಖೆ ಪ್ರಾರಂಭವಾಗಿದೆ ಎಂದು ಪೊಲೀಸ್ ಪ್ರಕಟಣೆ ಹೇಳಿದೆ. ಇದಲ್ಲದೆ, ವಿದ್ಯಾರ್ಥಿಯನ್ನು ತಳ್ಳಿದ ಅಧಿಕಾರಿಯನ್ನು ಬೇರೆಡೆಗೆ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ, ಕಾದಾಟದಲ್ಲಿ ತೊಡಗಿರುವ ವಿದ್ಯಾರ್ಥಿಗಳನ್ನು ಸಾರ್ವಜನಿಕವಾಗಿ ಹೋರಾಡುವ ಸಿ ವರ್ಗದ ದುಷ್ಕೃತ್ಯಕ್ಕಾಗಿ ಉಲ್ಲೇಖಿಸಲಾಗುತ್ತಿದೆ ಎಂದು ಎನ್‌ಬಿಸಿ ನ್ಯೂಸ್ ವರದಿ ಮಾಡಿದೆ. ತನಿಖೆಯ ಅಂಗವಾಗಿ ಪೊಲೀಸ್ ಇಲಾಖೆ ಇರ್ವಿಂಗ್ ಇಂಡಿಪೆಂಡೆಂಟ್ ಸ್ಕೂಲ್ ಡಿಸ್ಟ್ರಿಕ್ ಜತೆ ಮತ್ತು ವಿದ್ಯಾರ್ಥಿಗಳ ಹೆತ್ತವರ ಜತೆ ಮಾತನಾಡಿ ಮಾಹಿತಿ ಸಂಗ್ರಹಿಸುತ್ತಿದೆ.

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್