Video Viral: ಹಿಜಾಬ್ ವಿರೋಧಿ ಪ್ರತಿಭಟನೆಗೆ ನನ್ನ ಬೆಂಬಲವಿದೆ ಎಂದು ವೇದಿಕೆಯಲ್ಲಿ ಕೂದಲು ಕತ್ತರಿಸಿಕೊಂಡ ಟರ್ಕಿಶ್ ಗಾಯಕಿ

ಹಿಜಾಬ್ ವಿರೋಧಕ್ಕೆ ಇರಾನ್‌ನಲ್ಲಿ ಪ್ರತಿಭಟನಾಕಾರರಿಗೆ ನನ್ನ ಬೆಂಬಲ ಇದೆ ಎಂದು ವೇದಿಕೆಯ ಮೇಲೆ ಕಲಾವಿದೆ ತನ್ನ ಕೂದಲನ್ನು ಕತ್ತರಿಸುತ್ತಿರುವ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Video Viral: ಹಿಜಾಬ್ ವಿರೋಧಿ ಪ್ರತಿಭಟನೆಗೆ ನನ್ನ ಬೆಂಬಲವಿದೆ ಎಂದು ವೇದಿಕೆಯಲ್ಲಿ ಕೂದಲು ಕತ್ತರಿಸಿಕೊಂಡ ಟರ್ಕಿಶ್ ಗಾಯಕಿ
Video Viral
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 28, 2022 | 1:28 PM

ಟರ್ಕಿಶ್ ಗಾಯಕಿ ಮೆಲೆಕ್ ಮೊಸ್ಸೊ ಇರಾನ್‌ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಸೂಚಿಸಿದ ಮಹಿಳೆಯರ ಸಾಲನ್ನು ಸೇರಿಕೊಂಡಿದ್ದಾರೆ. ಹೌದು ಇರಾನ್‌ನಲ್ಲಿ ಪ್ರತಿಭಟನಾಕಾರರಿಗೆ ನನ್ನ ಬೆಂಬಲ ಇದೆ ಎಂದು ವೇದಿಕೆಯ ಮೇಲೆ ಕಲಾವಿದೆ ತನ್ನ ಕೂದಲನ್ನು ಕತ್ತರಿಸುತ್ತಿರುವ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದೀಗ ಈ ವಿಚಾರ ಭಾರೀ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಸೆಪ್ಟೆಂಬರ್ 17ರಂದು ಹಿಜಾಬ್ ನಿಯಮದ ಕುರಿತಾಗಿ ನಡೆದ ಘಟನೆಯಲ್ಲಿ ಪೋಲೀಸರ ಬಂಧನದಲ್ಲಿದ್ದ 22 ವರ್ಷದ ಮಹಾಸಾ ಅಮಿನಿಯ ಮರಣದ ನಂತರ ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಆಕೆಯ ಸಾವಿನ ಹತ್ತು ದಿನಗಳ ನಂತರ, ಪ್ರತಿಭಟನೆಗಳು ಈಗ ಇರಾನಿ 46 ಕಡೆ ಹರಡಿವೆ. ನಗರಗಳು, ಪಟ್ಟಣಗಳು ​​ಮತ್ತು ಹಳ್ಳಿಗಳಲ್ಲೂ ಈ ಪ್ರತಿಭಟನೆಯ ಕಿಡಿ ಹತ್ತಿಕೊಂಡಿದೆ.

ಭದ್ರತಾ ಪಡೆಗಳೊಂದಿಗಿನ ಘರ್ಷಣೆಯ ನಡುವೆ ನಡೆದ ಪ್ರತಿಭಟನೆಯಲ್ಲಿ 75 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರತಿಭಟನೆಕಾರರೂ ಹೇಳಿಕೊಂಡಿದ್ದಾರೆ. ದೇಶದಲ್ಲಿ ಜಾರಿಯಲ್ಲಿರುವ ಕಟ್ಟುನಿಟ್ಟಿನ ಡ್ರೆಸ್ ಕೋಡ್ ವಿರುದ್ಧ ಪ್ರತಿಭಟಿಸಲು ಮಹಿಳಾ ಪ್ರತಿಭಟನಾಕಾರರು ತಮ್ಮ ಕೂದಲನ್ನು ಕತ್ತರಿಸಿ ಹಿಜಾಬ್ ತೆಗೆದು ಬೆಂಕಿ ಹಚ್ಚುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತಿದ್ದಾರೆ.

ಕಟ್ಟುನಿಟ್ಟಾದ ಡ್ರೆಸ್ ಕೋಡ್

ಇರಾನ್‌ನ ಷರಿಯಾ ಅಥವಾ ಇಸ್ಲಾಮಿಕ್ ಕಾನೂನಿನ ಅಡಿಯಲ್ಲಿ, ಏಳು ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ತಮ್ಮ ಕೂದಲನ್ನು ಮುಚ್ಚಲು ಮತ್ತು ಉದ್ದವಾದ, ಸಡಿಲವಾದ ಬಟ್ಟೆಗಳನ್ನು ಧರಿಸಲು ನಿರ್ಬಂಧವನ್ನು ಹೊಂದಿರುತ್ತಾರೆ. ಜುಲೈ 5 ರಂದು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಹಿಜಾಬ್ ಕಾನೂನನ್ನು ಜಾರಿಗೊಳಿಸಲು ಆದೇಶಿಸಿದ ನಂತರ ಮಹಿಳೆಯರು ಹೇಗೆ ಬಟ್ಟೆ ಧರಿಸಬಹುದು ಎಂಬ ನಿರ್ಬಂಧಗಳ ಹೊಸ ವಿವಾದಕ್ಕೆ ಕಾರಣವಾಯಿತು. ಇದೀಗ ಇದು ಸಾರ್ವಜನಿಕ ಖಂಡನೆ ಕಾರಣವಾಗಿದೆ. ಇದನ್ನು ವಿರೋಧಿವರಿಗೆ ದಂಡ ಅಥವಾ ಬಂಧನವನ್ನು ಎದುರಿಸುತ್ತಿದ್ದಾರೆ.

Published On - 1:15 pm, Wed, 28 September 22

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು