AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸೌಂದರ್ಯ ಸ್ಪರ್ಧೆಯಲ್ಲಿ ಪತ್ನಿಗೆ 2ನೇ ಸ್ಥಾನ, ವೇದಿಕೆ ಮೇಲೆ ಕಿರೀಟವನ್ನು ನೆಲಕ್ಕೆ ಬಡಿದ ಪತಿ

ಸೌಂದರ್ಯ ಸ್ಪರ್ಧೆಯಲ್ಲಿ ತನ್ನ ಪತ್ನಿಗೆ ಕಿರೀಟ ಬಂದಿಲ್ಲ ಎಂದು ಈ ಪತಿರಾಯ ಗೆಲುವು ಸಾಧಿಸಿದ ಮಹಿಳೆ ತಲೆಯಿಂದ ಕಿರೀಟವನ್ನು ತೆಗೆದು ನೆಲಕ್ಕೆ ಹೊಡೆದಿದ್ದಾನೆ.

Video Viral: ಸೌಂದರ್ಯ ಸ್ಪರ್ಧೆಯಲ್ಲಿ ಪತ್ನಿಗೆ 2ನೇ ಸ್ಥಾನ, ವೇದಿಕೆ ಮೇಲೆ ಕಿರೀಟವನ್ನು ನೆಲಕ್ಕೆ ಬಡಿದ ಪತಿ
ವೈರಲ್​​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on:May 30, 2023 | 6:43 PM

Share

ಸೌಂದರ್ಯ ಸ್ಪರ್ಧೆಯಲ್ಲಿ ತನ್ನ ಪತ್ನಿಗೆ ಕಿರೀಟ ಬಂದಿಲ್ಲ ಎಂದು ಈ ಪತಿರಾಯ ಗೆಲುವು ಸಾಧಿಸಿದ ಮಹಿಳೆ ತಲೆಯಿಂದ ಕಿರೀಟವನ್ನು ತೆಗೆದು ನೆಲಕ್ಕೆ ಹೊಡೆದಿದ್ದಾನೆ. ಹೌದು ಇಂತಹ ಆಘಾತಕಾರಿ ಘಟನೆಯೊಂದರಲ್ಲಿ ಬ್ರೆಜಿಲ್​​ನಲ್ಲಿ ನಡೆದಿದೆ. ಸೌಂದರ್ಯ ಸ್ಪರ್ಧೆಯ ಸ್ಪರ್ಧಿಯ ಪತಿ ವೇದಿಕೆಯ ಮೇಲೆ ಹತ್ತಿ, ವಿಜೇತರ ಕಿರೀಟವನ್ನು ಕಿತ್ತುಕೊಂಡು ನೆಲಕ್ಕೆ ಒಡೆದುಹಾಕಿದ, ನಂತರ ಆತನ ಹೆಂಡತಿಗೆ ಎರಡನೇ ಸ್ಥಾನ ನೀಡಲಾಯಿತು. ಸ್ಥಳೀಯ ಸುದ್ದಿವಾಹಿನಿ ಗ್ಲೋಬೋ ಪ್ರಕಾರ, ಬ್ರೆಜಿಲ್‌ನಲ್ಲಿ ಶನಿವಾರ ನಡೆದ LGBTQ+ ಸೌಂದರ್ಯ ಸ್ಪರ್ಧೆಯಲ್ಲಿ ಈ ಘಟನೆ ನಡೆದಿದೆ. ಇದೀಗ ಈ ವೀಡಿಯೊ ಎಲ್ಲ ಕಡೆ ವೈರಲ್​​​ ಆಗಿದೆ. ಮಿಸ್ ಗೇ ಮಾಟೊ ಗ್ರೊಸೊ 2023 ಸ್ಪರ್ಧೆಯಲ್ಲಿ ವಿಜೇತರನ್ನು ಘೋಷಿಸುತ್ತಿದ್ದಂತೆಯೇ ಈ ವ್ಯಕ್ತಿ ವೇದಿಕೆ ಮೇಲೆ ಬಂದು ಗಲಾಟೆ ಮಾಡಿದ್ದಾನೆ.

ಕಿರೀಟಧಾರಣೆ ಸಮಾರಂಭದಲ್ಲಿ ಇಬ್ಬರು ಫೈನಲಿಸ್ಟ್‌ಗಳಾದ ನತಲ್ಲಿ ಬೆಕರ್ ಮತ್ತು ಇಮಾನ್ಯುಲಿ ಬೆಲಿನಿ ಅವರನ್ನು ವಿಜೇತರು ಎಂದು ಘೋಷಣೆ ಮಾಡುವ ವೀಡಿಯೊದಲ್ಲಿ ತೋರಿಸುತ್ತದೆ. ಈ ಸಮಯದಲ್ಲಿ ಇಬ್ಬರು ಮುಂದೆ ಬರುತ್ತಾರೆ. ಕೊನೆಯಲ್ಲಿ Ms ಬೆಲಿನಿ ಅವರನ್ನು ಅಂತಿಮವಾಗಿ ವಿಜೇತರಾಗಿ ಆಯ್ಕೆ ಮಾಡಲಾಗುತ್ತದೆ. ಅವರ ತಲೆಗೆ ಈ ಹೊಳೆಯುವ ಕಿರೀಟವನ್ನು ಇರಿಸಲು ಮುಂದಾಗುತ್ತಾರೆ. ಆದರೆ ಸಮಾರಂಭ ಪೂರ್ಣಗೊಳ್ಳುವ ಮುನ್ನವೇ ರನ್ನರ್ ಅಪ್ ಸ್ಪರ್ಧಿಯ ಪತಿ ಅದಕ್ಕೆ ಅಡ್ಡಿಪಡಿಸಿದ್ದಾರೆ.

ಇದನ್ನೂ ಓದಿ: Video Viral : ಆಸ್ತಿಯ ವ್ಯಾಮೋಹ, ಸಾವನ್ನಪ್ಪಿದ ವೃದ್ಧೆ ಕೈಯಿಂದ ಆಸ್ತಿ ಪತ್ರಕ್ಕೆ ಹೆಬ್ಬೆಟ್ಟು ಹಾಕಿಸಿಕೊಂಡ ಸಂಬಂಧಿಕರು

Ms ಬೆಲಿನಿ ಕೈಯಿಂದ ಕಿರೀಟವನ್ನು ಎಳೆದು ನೆಲದ ಮೇಲೆ ಎಸೆಯುತ್ತಾರೆ. ಅಲ್ಲಿಯೇ ಇದ್ದ ಇತರ ಸ್ಪರ್ಧಿಗಳು ಭಯಗೊಳ್ಳುತ್ತಾರೆ. ತನ್ನ ಹೆಂಡತಿಯನ್ನು ವಿಜೇತೆ ಎಂದು ಘೋಷಣೆ ಮಾಡುವಂತೆ ಕೂಗುತ್ತಾನೆ. ತಕ್ಷಣ ರಕ್ಷಣಾ ಸಿಬ್ಬಂದಿಗಳು ವೇದಿಕೆ ಮೇಲೆ ಬಂದು ಆತನನ್ನು ಅಲ್ಲಿಂದ ಕರೆದುಕೊಂಡು ಹೋಗುತ್ತಾರೆ ಎಂದು ನ್ಯೂಯಾರ್ಕ್ ಪೋಸ್ಟ್ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:51 pm, Tue, 30 May 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್