AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತಾಲಿಬಾನ್ ಸರ್ಕಾರ ಬಂದಮೇಲೆ ರಸ್ತೆ ಬದಿ ಆಹಾರ ಮಾರುತ್ತಿದ್ದಾರೆ ಅಫ್ಘಾನಿಸ್ತಾನದ ಟಿವಿ ನಿರೂಪಕ

ಮುಸಾ ಮೊಹಮ್ಮದಿ ಹಲವು ವರ್ಷ ಮಾಧ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಅಫ್ಘಾನಿಸ್ತಾನದಲ್ಲಿ ಭೀಕರ ಆರ್ಥಿಕ ಪರಿಸ್ಥಿತಿಯ ನಡುವೆ, ಅವರು ತಮ್ಮ ಜೀವನೋಪಾಯಕ್ಕಾಗಿ ರಸ್ತೆಬದಿಯಲ್ಲಿ ಆಹಾರವನ್ನು ಮಾರಾಟ ಮಾಡುತ್ತಿದ್ದಾರೆ.

Viral News: ತಾಲಿಬಾನ್ ಸರ್ಕಾರ ಬಂದಮೇಲೆ ರಸ್ತೆ ಬದಿ ಆಹಾರ ಮಾರುತ್ತಿದ್ದಾರೆ ಅಫ್ಘಾನಿಸ್ತಾನದ ಟಿವಿ ನಿರೂಪಕ
ತರಕಾರಿ ಮಾರುತ್ತಿರುವ ನಿರೂಪಕImage Credit source: Twitter
TV9 Web
| Updated By: ಸುಷ್ಮಾ ಚಕ್ರೆ|

Updated on:Jun 17, 2022 | 12:12 PM

Share

ಕಾಬೂಲ್: ಅಫ್ಘಾನಿಸ್ತಾನವನ್ನು (Afghanistan Government) ಆಕ್ರಮಿಸಿಕೊಂಡ ತಾಲಿಬಾನ್​ (Taliban) ಸಂಘಟನೆ ಇದೀಗ ತನ್ನದೇ ಸರ್ಕಾರ ರಚನೆ ಮಾಡಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗರ ಸರ್ಕಾರ ರಚನೆಯಾದ ನಂತರ ಅಲ್ಲಿನ ವ್ಯವಸ್ಥೆ ಸಂಪೂರ್ಣ ಬದಲಾಗಿದೆ. ಅಫ್ಘಾನಿಗರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕಬೇಕಾದ ಪರಿಸ್ಥಿತಿ ಒಂದೆಡೆ ನಿರ್ಮಾಣವಾಗಿದ್ದರೆ ಇನ್ನೊಂದೆಡೆ ಅವರ ಹೊಸ ಕಾನೂನಿನಿಂದ ಅನೇಕರ ಜೀವನ ಬೀದಿಗೆ ಬಿದ್ದಿದೆ.

ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಿದಾಗಿನಿಂದ ಅಫ್ಘಾನಿಸ್ತಾನವು ಸಾಕಷ್ಟು ಆರ್ಥಿಕ ಮತ್ತು ರಾಜಕೀಯ ಸಂಕಷ್ಟವನ್ನು ಎದುರಿಸುತ್ತಿದೆ. ಈ ಹಿಂದೆ ಹಮೀದ್ ಕರ್ಜಾಯ್ ಸರ್ಕಾರದೊಂದಿಗೆ ಕೆಲಸ ಮಾಡಿದ ಕಬೀರ್ ಹಕ್ಮಲ್ ಅವರ ಇತ್ತೀಚಿನ ಟ್ವಿಟ್ಟರ್ ಪೋಸ್ಟ್ ರಾಷ್ಟ್ರದಲ್ಲಿ ಎಷ್ಟು ಪ್ರತಿಭಾವಂತ ವೃತ್ತಿಪರರು ಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ
Image
ಆರ್ಥಿಕ ಹೊರೆ; ಚಹಾ ಸೇವನೆ ಕಡಿಮೆ ಮಾಡುವಂತೆ ನಾಗರಿಕರಿಗೆ ಒತ್ತಾಯಿಸಿದ ಪಾಕ್ ಸಚಿವ
Image
Radha Iyengar: ಭಾರತ ಮೂಲದ ರಾಧಾ ಅಯ್ಯಂಗಾರ್​ಗೆ ಪೆಂಟಗನ್​ನಲ್ಲಿ ದೊಡ್ಡ ಜವಾಬ್ದಾರಿ ನೀಡಿದ ಜೋ ಬೈಡನ್
Image
Arati Prabhakar: ಬೈಡನ್ ಸರ್ಕಾರದ ವೈಜ್ಞಾನಿಕ ಸಲಹೆಗಾರ್ತಿಯಾಗಲಿರುವ ಭಾರತ ಮೂಲದ ಆರತಿ ಪ್ರಭಾಕರ್ ಯಾರು?

ಕಬೀರ್ ಹಕ್ಮಲ್ ಅವರು ಅಫ್ಘಾನ್ ಪತ್ರಕರ್ತ ಮೂಸಾ ಮೊಹಮ್ಮದಿ ಅವರ ಫೋಟೋವನ್ನು ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ. ಮುಸಾ ಮೊಹಮ್ಮದಿ ಅವರು ಹಲವು ವರ್ಷಗಳ ಕಾಲ ಮಾಧ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಅಫ್ಘಾನಿಸ್ತಾನದಲ್ಲಿ ಇಂತಹ ಭೀಕರ ಆರ್ಥಿಕ ಪರಿಸ್ಥಿತಿಯ ನಡುವೆ, ಅವರು ತಮ್ಮ ಜೀವನೋಪಾಯಕ್ಕಾಗಿ ರಸ್ತೆಬದಿಯಲ್ಲಿ ಆಹಾರವನ್ನು ಮಾರಾಟ ಮಾಡುತ್ತಿದ್ದಾರೆ.

ಇದನ್ನೂ ಓದಿ: Shocking News: ಈ ಕಂಪನಿಯಲ್ಲಿ ಹಸ್ತಮೈಥುನಕ್ಕೂ ಸಿಗುತ್ತೆ ಅರ್ಧ ಗಂಟೆ ಬ್ರೇಕ್; ಸೆಕ್ಸ್​ ಟಾಯ್ಸ್​ ಕೂಡ ಕೊಡ್ತಾರೆ!

ಮೂಸಾ ಮೊಹಮ್ಮದಿ ಅಫಘಾನಿಸ್ತಾನದ ವಿವಿಧ ಟಿವಿ ಚಾನೆಲ್‌ಗಳಲ್ಲಿ ಆಂಕರ್ ಮತ್ತು ವರದಿಗಾರರಾಗಿ ವರ್ಷಗಳ ಕಾಲ ಕೆಲಸ ಮಾಡಿದ್ದರು. ಈಗ ಅವರ ಕುಟುಂಬವನ್ನು ಪೋಷಿಸಲು ಯಾವುದೇ ಆದಾಯವಿಲ್ಲ. ಹೀಗಾಗಿ, ಬೀದಿ ಬದಿಯಲ್ಲಿ ಆಹಾರವನ್ನು ಮಾರಾಟ ಮಾಡುತ್ತಿದ್ದಾರೆ. ಗಣರಾಜ್ಯದ ಪತನದ ನಂತರ ಅಫ್ಘಾನಿಸ್ತಾನದ ಜನರು ಭಾರೀ ಬಡತನವನ್ನು ಅನುಭವಿಸುತ್ತಿದ್ದಾರೆ ಎಂದು ಟ್ವಿಟ್ಟರ್​​ನಲ್ಲಿ ಮೊಹಮ್ಮದಿ ಅವರ ಫೋಟೋವನ್ನು ಹಂಚಿಕೊಳ್ಳಲಾಗಿದೆ.

ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ದಿನದಿಂದ ಭಾರತವು ಮಾನವೀಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಪತ್ರಕರ್ತರು, ವಿಶೇಷವಾಗಿ ಮಹಿಳೆಯರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಅಫ್ಗಾನ್ ಸರ್ಕಾರ ಮಾಧ್ಯಮಗಳ ಮೇಲೆ ದಬ್ಬಾಳಿಕೆ ನಡೆಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:10 pm, Fri, 17 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ