AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maldives Parliament Video: ಮಾಲ್ಡೀವ್ಸ್​ ಸಂಸತ್ತಿನಲ್ಲಿ ಸಂಸದರ ನಡುವೆ ಗುದ್ದಾಟ, ವಿಡಿಯೋ ವೈರಲ್

ಸಂಸತ್ತು ಎಂದ ಮೇಲೆ ವಾದ-ವಿವಾದಗಳು ಸಾಮಾನ್ಯ, ಆದರೆ ಮಾಲ್ಡೀವ್ಸ್​ ಸಂಸತ್ತಿನಲ್ಲಿ ನಡೆದ ಘಟನೆ ಅಚ್ಚರಿ ಮೂಡಿಸಿದೆ. ಈ ಸಂಸತ್ತಿನಲ್ಲಿ ನಡೆದಿದ್ದು ಮಾತಿನ ವಿವಾದವಲ್ಲ ಬದಲಾಗಿ ಗುದ್ದಾಟ, ಸಂಸದರು ಪರಸ್ಪರ ಎಳೆದಾಡಿಕೊಂಡರು, ಹೊಡೆದಾಡಿಕೊಂಡಿದ್ದಾರೆ. ಭಾನುವಾರ ಮಾಲ್ಡೀವ್ಸ್ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಿಪಿಎಂ ಮತ್ತು ಪಿಎನ್‌ಸಿ ಪಕ್ಷದ ಸಮ್ಮಿಶ್ರ ಸರ್ಕಾರದ ಸಂಸದರು ಮತ್ತು ವಿರೋಧ ಪಕ್ಷದ ಸಂಸದರ ನಡುವೆ ತೀವ್ರ ವಾಗ್ವಾದ ನಡೆಯಿತು.

Maldives Parliament Video: ಮಾಲ್ಡೀವ್ಸ್​ ಸಂಸತ್ತಿನಲ್ಲಿ ಸಂಸದರ ನಡುವೆ ಗುದ್ದಾಟ, ವಿಡಿಯೋ ವೈರಲ್
ಮಾಲ್ಡೀವ್ಸ್​ ಸಂಸತ್ತು
ನಯನಾ ರಾಜೀವ್
|

Updated on:Jan 29, 2024 | 10:41 AM

Share

ಸಂಸತ್ತು ಎಂದ ಮೇಲೆ ವಾದ-ವಿವಾದಗಳು ಸಾಮಾನ್ಯ, ಆದರೆ ಮಾಲ್ಡೀವ್ಸ್​ ಸಂಸತ್ತಿನಲ್ಲಿ ನಡೆದ ಘಟನೆ ಅಚ್ಚರಿ ಮೂಡಿಸಿದೆ. ಈ ಸಂಸತ್ತಿನಲ್ಲಿ ನಡೆದಿದ್ದು ಮಾತಿನ ವಿವಾದವಲ್ಲ ಬದಲಾಗಿ ಗುದ್ದಾಟ, ಸಂಸದರು ಪರಸ್ಪರ ಎಳೆದಾಡಿಕೊಂಡರು, ಹೊಡೆದಾಡಿಕೊಂಡಿದ್ದಾರೆ. ಭಾನುವಾರ ಮಾಲ್ಡೀವ್ಸ್ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಿಪಿಎಂ ಮತ್ತು ಪಿಎನ್‌ಸಿ ಪಕ್ಷದ ಸಮ್ಮಿಶ್ರ ಸರ್ಕಾರದ ಸಂಸದರು ಮತ್ತು ವಿರೋಧ ಪಕ್ಷದ ಸಂಸದರ ನಡುವೆ ತೀವ್ರ ವಾಗ್ವಾದ ನಡೆಯಿತು.

ಮಾಲ್ಡೀವ್ಸ್​ ಸಂಸತ್ತಿನಲ್ಲಿ ಹಲವು ಸಂಸದರ ನಡುವೆ ಘರ್ಷಣೆ ಸಂಭವಿಸಿದೆ. ಆಡಳಿತ ಒಕ್ಕೂಟದ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಮತ್ತು ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ (ಪಿಪಿಎಂ) ಮತ್ತು ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (ಎಂಡಿಪಿ) ಯ ಸಂಸದರ ನಡುವೆ ಘರ್ಷಣೆ ನಡೆದಿದೆ.

ಆಡಳಿತ ಸಮ್ಮಿಶ್ರ ಸಂಸದರು ವಿರೋಧ ಪಕ್ಷದ ಸಂಸದರನ್ನು ಸಂಸತ್ತಿಗೆ ಪ್ರವೇಶಿಸದಂತೆ ತಡೆದಿದ್ದರು ಎನ್ನಲಾಗುತ್ತಿದೆ. ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಎಂಡಿಪಿಯು ಆಡಳಿತ ಪಕ್ಷದ ನಾಲ್ವರು ಸದಸ್ಯರಿಗೆ ಮುಯಿಝು ಅವರ ಸಂಪುಟಕ್ಕೆ ಸೇರಲು ಅನುಮೋದನೆ ನೀಡಲು ನಿರಾಕರಿಸಿದ ನಂತರ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: ಮಾಲ್ಡೀವ್ಸ್ ಸರ್ಕಾರದ ‘ಭಾರತ ವಿರೋಧಿ’ ನಿಲುವಿಗೆ ಅಲ್ಲಿನ ವಿರೋಧ ಪಕ್ಷಗಳು ಕೆಂಡಾಮಂಡಲ

ಸಂಸತ್ತಿನಲ್ಲಿ ಮತದಾನ ನಡೆಯಬೇಕಿತ್ತು, ಪ್ರತಿಪಕ್ಷಗಳು ಇದನ್ನು ನಿಲ್ಲಿಸುವಂತೆ ಕೇಳಿದಾಗ ಆಡಳಿತಾರೂಢ ಸಂಸದರು ಕಲಾಪವನ್ನು ನಿಲ್ಲಿಸಿದರು. ಮಾಲ್ಡೀವ್ಸ್​ನ ಹೊಸ ಅಧ್ಯಕ್ಷರನ್ನು ಕಳೆದ ವರ್ಷವಷ್ಟೇ ಆಯ್ಕೆ ಮಾಡಲಾಗಿತ್ತು, ಕೆಲವು ಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪವಿದೆ. ಆದ್ದರಿಂದ ಪ್ರತಿಪಕ್ಷಗಳು ಅವರನ್ನು ಸಂಪುಟಕ್ಕೆ ಸೇರಿಸಬಾರದು ಎನ್ನುವುದು ಅವರ ವಾದವಾಗಿದೆ.

ಅಟಾರ್ನಿ ಜನರಲ್ ಅಹ್ಮದ್ ಉಷಮ್, ಸಚಿವ ಡಾ. ಅಲಿ ಹೈದರ್, ಡಾ. ಮೊಹಮ್ಮದ್ ಸಯೋದ್ ವಿರುದ್ಧ ವಿರೋಧ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಯಿಝು ಅವರ ಮುಖ್ಯ ಸಲಹೆಗಾರ ಮತ್ತು ಪಿಎನ್‌ಸಿ ಅಧ್ಯಕ್ಷ ಅಬ್ದುಲ್ ರಹೀಮ್ ಅಬ್ದುಲ್ಲಾ ಅವರು ಮಂತ್ರಿಗಳಿಗೆ ಅಧಿಕಾರ ನೀಡದಿದ್ದರೂ ಸಹ, ಅವರಿಗೆ ಮರುನೇಮಕ ಮಾಡುವ ಹಕ್ಕಿದೆ ಎಂದು ಹೇಳಿದರು. ಸಚಿವರ ಅನುಮೋದನೆ ನಿರಾಕರಣೆ ಬೇಜವಾಬ್ದಾರಿ ಎಂದು ಟೀಕಿಸಿದರು.

ಇತ್ತೀಚೆಗಷ್ಟೇ ಮಾಲ್ಡೀವ್ಸ್​ ಸಚಿವರು ಭಾರತದ ಬಗ್ಗೆ ಗೇಲಿ ಮಾಡಿದ್ದರೂ, ಲಕ್ಷದ್ವೀಪವನ್ನು ಮಾಲ್ಡೀವ್ಸ್​ ರೀತಿ ಮಾಡುವ ನಿಮ್ಮದು ಕನಸಷ್ಟೇ ಎಂದು ಹೇಳಿದ್ದರು. ಇದಾದ ಬಳಿಕ ಮಾಲ್ಡೀವ್ಸ್​ ಹಾಗೂ ಭಾರತದ ಸಂಬಂಧ ಹಳಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:32 am, Mon, 29 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ