AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿರೂಪಕಿಯ ಪ್ರಶ್ನೆಗೆ ನೇರ ಪ್ರಸಾರದಲ್ಲೇ ಎಂಜಲು ಉಗುಳಿದ ಪಾಕ್ ಮಾಜಿ ಸಚಿವ; ವಿಡಿಯೋ ವೈರಲ್

Pakistan News: ಟಿವಿ ನಿರೂಪಕಿ ಕೇಳಿದ ಪ್ರಶ್ನೆಗೆ ಪಾಕಿಸ್ತಾನದ ಸಚಿವ ರಾಣಾ ಸನಾವುಲ್ಲಾ ಬಗ್ಗೆ ಮಾತನಾಡುವಾಗ ಶೇಖ್ ರಶೀದ್ ಅಹ್ಮದ್ ನೇರ ಪ್ರಸಾರದ ವೇಳೆ ಉಗುಳಿದ್ದಾರೆ.

Viral Video: ನಿರೂಪಕಿಯ ಪ್ರಶ್ನೆಗೆ ನೇರ ಪ್ರಸಾರದಲ್ಲೇ ಎಂಜಲು ಉಗುಳಿದ ಪಾಕ್ ಮಾಜಿ ಸಚಿವ; ವಿಡಿಯೋ ವೈರಲ್
ಶೇಖ್ ರಶೀದ್ ಅಹ್ಮದ್ Image Credit source: times now
TV9 Web
| Edited By: |

Updated on: Aug 06, 2022 | 8:59 AM

Share

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಸಚಿವ ಶೇಖ್ ರಶೀದ್ ಅಹ್ಮದ್ (Sheikh Rasheed Ahmad) ಟಿವಿ ಚರ್ಚೆಯ ನೇರ ಪ್ರಸಾರದ ವೇಳೆ ಕ್ಯಾಮೆರಾದ ಎದುರು ಉಗುಳಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಟಿವಿ ನಿರೂಪಕಿ ಕೇಳಿದ ಪ್ರಶ್ನೆಗೆ ಪಾಕಿಸ್ತಾನದ ಸಚಿವ ರಾಣಾ ಸನಾವುಲ್ಲಾ (Rana Sanaullah) ಬಗ್ಗೆ ಮಾತನಾಡುವಾಗ ಶೇಖ್ ರಶೀದ್ ಅಹ್ಮದ್ ನೇರ ಪ್ರಸಾರದ ವೇಳೆ ಉಗುಳಿದ್ದಾರೆ. ಲೈವ್ ಟಿವಿ ಪ್ರಸಾರದಲ್ಲಿ ಈ ರೀತಿ ವರ್ತಿಸಿರುವುದಕ್ಕೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಟಿವಿಯಲ್ಲಿ ಚರ್ಚೆ ವೇಳೆ ಅಹ್ಮದ್ ಅವರಿಗೆ ಫೋನ್ ಮಾಡಿದ ನಿರೂಪಕಿ ಪಾಕಿಸ್ತಾನದ ಸಚಿವ ರಾಣಾ ಸನಾವುಲ್ಲಾ ಬಗ್ಗೆ ಪ್ರಶ್ನೆ ಕೇಳಿದರು. ಆಗ ಮಾಜಿ ಸಚಿವ ಅಹ್ಮದ್ ಸನಾವುಲ್ಲಾ ವಿರುದ್ಧ ವಾಗ್ದಾಳಿ ನಡೆಸಿದರು. “ರಾಣಾ ಸನಾವುಲ್ಲಾನನ್ನು ನಿಯಂತ್ರಿಸಲು ನಾನು ಜನರಲ್ ಕಮರ್ ಬಾಜ್ವಾ ಅವರನ್ನು ಒತ್ತಾಯಿಸುತ್ತೇನೆ. ಯಾರಾದರೂ ಅವನಿಗೆ ಗೌರವದಿಂದ ಸೆಲ್ಯೂಟ್ ಮಾಡಲು ಸಾಧ್ಯವೇ? ಭದ್ರತಾ ಪಡೆಗಳು ಅವನಿಗೆ ಸೆಲ್ಯೂಟ್ ಮಾಡುತ್ತಾರೆಯೇ? ಭದ್ರತಾ ಪಡೆಗಳು ಕೂಡ ಸನಾವುಲ್ಲಾಗೆ ಥೂ ಎಂದು ಉಗುಳುತ್ತವೆ” ಎಂದು ಹೇಳುತ್ತಾ ಅಹ್ಮದ್ ಟಿವಿ ಕ್ಯಾಮೆರಾ ಎದುರು ಎಂಜಲನ್ನು ಉಗುಳಿದ್ದಾರೆ.

ಇದನ್ನೂ ಓದಿ: Viral Video: ಅಪ್ಪನ ಸಾವಿನ ಬಳಿಕ ಜೊಮ್ಯಾಟೋ ಡೆಲಿವರಿ ಬಾಯ್ ಆದ 7 ವರ್ಷದ ಬಾಲಕ; ವಿಡಿಯೋ ವೈರಲ್

ಈ ಘಟನೆಯ ವಿಡಿಯೋವನ್ನು ಪತ್ರಕರ್ತೆ ನೈಲಾ ಇನಾಯತ್ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಶೀಘ್ರದಲ್ಲೇ ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ 25,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 700ಕ್ಕೂ ಹೆಚ್ಚು ಲೈಕ್​ಗಳನ್ನು ಗಳಿಸಿದೆ. ಈ ಘಟನೆಯನ್ನು ನೆಟಿಜನ್‌ಗಳು ಖಂಡಿಸಿದ್ದಾರೆ.

ಇನ್ನಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್