AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿರೂಪಕಿಯ ಪ್ರಶ್ನೆಗೆ ನೇರ ಪ್ರಸಾರದಲ್ಲೇ ಎಂಜಲು ಉಗುಳಿದ ಪಾಕ್ ಮಾಜಿ ಸಚಿವ; ವಿಡಿಯೋ ವೈರಲ್

Pakistan News: ಟಿವಿ ನಿರೂಪಕಿ ಕೇಳಿದ ಪ್ರಶ್ನೆಗೆ ಪಾಕಿಸ್ತಾನದ ಸಚಿವ ರಾಣಾ ಸನಾವುಲ್ಲಾ ಬಗ್ಗೆ ಮಾತನಾಡುವಾಗ ಶೇಖ್ ರಶೀದ್ ಅಹ್ಮದ್ ನೇರ ಪ್ರಸಾರದ ವೇಳೆ ಉಗುಳಿದ್ದಾರೆ.

Viral Video: ನಿರೂಪಕಿಯ ಪ್ರಶ್ನೆಗೆ ನೇರ ಪ್ರಸಾರದಲ್ಲೇ ಎಂಜಲು ಉಗುಳಿದ ಪಾಕ್ ಮಾಜಿ ಸಚಿವ; ವಿಡಿಯೋ ವೈರಲ್
ಶೇಖ್ ರಶೀದ್ ಅಹ್ಮದ್ Image Credit source: times now
TV9 Web
| Edited By: |

Updated on: Aug 06, 2022 | 8:59 AM

Share

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಸಚಿವ ಶೇಖ್ ರಶೀದ್ ಅಹ್ಮದ್ (Sheikh Rasheed Ahmad) ಟಿವಿ ಚರ್ಚೆಯ ನೇರ ಪ್ರಸಾರದ ವೇಳೆ ಕ್ಯಾಮೆರಾದ ಎದುರು ಉಗುಳಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಟಿವಿ ನಿರೂಪಕಿ ಕೇಳಿದ ಪ್ರಶ್ನೆಗೆ ಪಾಕಿಸ್ತಾನದ ಸಚಿವ ರಾಣಾ ಸನಾವುಲ್ಲಾ (Rana Sanaullah) ಬಗ್ಗೆ ಮಾತನಾಡುವಾಗ ಶೇಖ್ ರಶೀದ್ ಅಹ್ಮದ್ ನೇರ ಪ್ರಸಾರದ ವೇಳೆ ಉಗುಳಿದ್ದಾರೆ. ಲೈವ್ ಟಿವಿ ಪ್ರಸಾರದಲ್ಲಿ ಈ ರೀತಿ ವರ್ತಿಸಿರುವುದಕ್ಕೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಟಿವಿಯಲ್ಲಿ ಚರ್ಚೆ ವೇಳೆ ಅಹ್ಮದ್ ಅವರಿಗೆ ಫೋನ್ ಮಾಡಿದ ನಿರೂಪಕಿ ಪಾಕಿಸ್ತಾನದ ಸಚಿವ ರಾಣಾ ಸನಾವುಲ್ಲಾ ಬಗ್ಗೆ ಪ್ರಶ್ನೆ ಕೇಳಿದರು. ಆಗ ಮಾಜಿ ಸಚಿವ ಅಹ್ಮದ್ ಸನಾವುಲ್ಲಾ ವಿರುದ್ಧ ವಾಗ್ದಾಳಿ ನಡೆಸಿದರು. “ರಾಣಾ ಸನಾವುಲ್ಲಾನನ್ನು ನಿಯಂತ್ರಿಸಲು ನಾನು ಜನರಲ್ ಕಮರ್ ಬಾಜ್ವಾ ಅವರನ್ನು ಒತ್ತಾಯಿಸುತ್ತೇನೆ. ಯಾರಾದರೂ ಅವನಿಗೆ ಗೌರವದಿಂದ ಸೆಲ್ಯೂಟ್ ಮಾಡಲು ಸಾಧ್ಯವೇ? ಭದ್ರತಾ ಪಡೆಗಳು ಅವನಿಗೆ ಸೆಲ್ಯೂಟ್ ಮಾಡುತ್ತಾರೆಯೇ? ಭದ್ರತಾ ಪಡೆಗಳು ಕೂಡ ಸನಾವುಲ್ಲಾಗೆ ಥೂ ಎಂದು ಉಗುಳುತ್ತವೆ” ಎಂದು ಹೇಳುತ್ತಾ ಅಹ್ಮದ್ ಟಿವಿ ಕ್ಯಾಮೆರಾ ಎದುರು ಎಂಜಲನ್ನು ಉಗುಳಿದ್ದಾರೆ.

ಇದನ್ನೂ ಓದಿ: Viral Video: ಅಪ್ಪನ ಸಾವಿನ ಬಳಿಕ ಜೊಮ್ಯಾಟೋ ಡೆಲಿವರಿ ಬಾಯ್ ಆದ 7 ವರ್ಷದ ಬಾಲಕ; ವಿಡಿಯೋ ವೈರಲ್

ಈ ಘಟನೆಯ ವಿಡಿಯೋವನ್ನು ಪತ್ರಕರ್ತೆ ನೈಲಾ ಇನಾಯತ್ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಶೀಘ್ರದಲ್ಲೇ ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ 25,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 700ಕ್ಕೂ ಹೆಚ್ಚು ಲೈಕ್​ಗಳನ್ನು ಗಳಿಸಿದೆ. ಈ ಘಟನೆಯನ್ನು ನೆಟಿಜನ್‌ಗಳು ಖಂಡಿಸಿದ್ದಾರೆ.

ಇನ್ನಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​