AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿರೂಪಕಿಯ ಪ್ರಶ್ನೆಗೆ ನೇರ ಪ್ರಸಾರದಲ್ಲೇ ಎಂಜಲು ಉಗುಳಿದ ಪಾಕ್ ಮಾಜಿ ಸಚಿವ; ವಿಡಿಯೋ ವೈರಲ್

Pakistan News: ಟಿವಿ ನಿರೂಪಕಿ ಕೇಳಿದ ಪ್ರಶ್ನೆಗೆ ಪಾಕಿಸ್ತಾನದ ಸಚಿವ ರಾಣಾ ಸನಾವುಲ್ಲಾ ಬಗ್ಗೆ ಮಾತನಾಡುವಾಗ ಶೇಖ್ ರಶೀದ್ ಅಹ್ಮದ್ ನೇರ ಪ್ರಸಾರದ ವೇಳೆ ಉಗುಳಿದ್ದಾರೆ.

Viral Video: ನಿರೂಪಕಿಯ ಪ್ರಶ್ನೆಗೆ ನೇರ ಪ್ರಸಾರದಲ್ಲೇ ಎಂಜಲು ಉಗುಳಿದ ಪಾಕ್ ಮಾಜಿ ಸಚಿವ; ವಿಡಿಯೋ ವೈರಲ್
ಶೇಖ್ ರಶೀದ್ ಅಹ್ಮದ್ Image Credit source: times now
TV9 Web
| Edited By: |

Updated on: Aug 06, 2022 | 8:59 AM

Share

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಸಚಿವ ಶೇಖ್ ರಶೀದ್ ಅಹ್ಮದ್ (Sheikh Rasheed Ahmad) ಟಿವಿ ಚರ್ಚೆಯ ನೇರ ಪ್ರಸಾರದ ವೇಳೆ ಕ್ಯಾಮೆರಾದ ಎದುರು ಉಗುಳಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಟಿವಿ ನಿರೂಪಕಿ ಕೇಳಿದ ಪ್ರಶ್ನೆಗೆ ಪಾಕಿಸ್ತಾನದ ಸಚಿವ ರಾಣಾ ಸನಾವುಲ್ಲಾ (Rana Sanaullah) ಬಗ್ಗೆ ಮಾತನಾಡುವಾಗ ಶೇಖ್ ರಶೀದ್ ಅಹ್ಮದ್ ನೇರ ಪ್ರಸಾರದ ವೇಳೆ ಉಗುಳಿದ್ದಾರೆ. ಲೈವ್ ಟಿವಿ ಪ್ರಸಾರದಲ್ಲಿ ಈ ರೀತಿ ವರ್ತಿಸಿರುವುದಕ್ಕೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಟಿವಿಯಲ್ಲಿ ಚರ್ಚೆ ವೇಳೆ ಅಹ್ಮದ್ ಅವರಿಗೆ ಫೋನ್ ಮಾಡಿದ ನಿರೂಪಕಿ ಪಾಕಿಸ್ತಾನದ ಸಚಿವ ರಾಣಾ ಸನಾವುಲ್ಲಾ ಬಗ್ಗೆ ಪ್ರಶ್ನೆ ಕೇಳಿದರು. ಆಗ ಮಾಜಿ ಸಚಿವ ಅಹ್ಮದ್ ಸನಾವುಲ್ಲಾ ವಿರುದ್ಧ ವಾಗ್ದಾಳಿ ನಡೆಸಿದರು. “ರಾಣಾ ಸನಾವುಲ್ಲಾನನ್ನು ನಿಯಂತ್ರಿಸಲು ನಾನು ಜನರಲ್ ಕಮರ್ ಬಾಜ್ವಾ ಅವರನ್ನು ಒತ್ತಾಯಿಸುತ್ತೇನೆ. ಯಾರಾದರೂ ಅವನಿಗೆ ಗೌರವದಿಂದ ಸೆಲ್ಯೂಟ್ ಮಾಡಲು ಸಾಧ್ಯವೇ? ಭದ್ರತಾ ಪಡೆಗಳು ಅವನಿಗೆ ಸೆಲ್ಯೂಟ್ ಮಾಡುತ್ತಾರೆಯೇ? ಭದ್ರತಾ ಪಡೆಗಳು ಕೂಡ ಸನಾವುಲ್ಲಾಗೆ ಥೂ ಎಂದು ಉಗುಳುತ್ತವೆ” ಎಂದು ಹೇಳುತ್ತಾ ಅಹ್ಮದ್ ಟಿವಿ ಕ್ಯಾಮೆರಾ ಎದುರು ಎಂಜಲನ್ನು ಉಗುಳಿದ್ದಾರೆ.

ಇದನ್ನೂ ಓದಿ: Viral Video: ಅಪ್ಪನ ಸಾವಿನ ಬಳಿಕ ಜೊಮ್ಯಾಟೋ ಡೆಲಿವರಿ ಬಾಯ್ ಆದ 7 ವರ್ಷದ ಬಾಲಕ; ವಿಡಿಯೋ ವೈರಲ್

ಈ ಘಟನೆಯ ವಿಡಿಯೋವನ್ನು ಪತ್ರಕರ್ತೆ ನೈಲಾ ಇನಾಯತ್ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಶೀಘ್ರದಲ್ಲೇ ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ 25,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 700ಕ್ಕೂ ಹೆಚ್ಚು ಲೈಕ್​ಗಳನ್ನು ಗಳಿಸಿದೆ. ಈ ಘಟನೆಯನ್ನು ನೆಟಿಜನ್‌ಗಳು ಖಂಡಿಸಿದ್ದಾರೆ.

ಇನ್ನಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್