AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೋರ್ಡಾನ್​ ಸಂಸತ್​ ಕಲಾಪದ ವೇಳೆ ಹೊಡೆದಾಡಿಕೊಂಡ ಸಂಸದರು; ವೈರಲ್ ಆಯ್ತು ವಿಡಿಯೋ

ಜೋರ್ಡಾನ್ ಸಂಸತ್ತಿನಲ್ಲಿ ದೇಶದ ಸಂವಿಧಾನದ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ಸಂಸದರು ಪರಸ್ಪರ ಗುದ್ದಾಡುತ್ತಾ ಮತ್ತು ತಳ್ಳುತ್ತಾ, ಬೈದಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಬಳಿಕ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

Viral Video: ಜೋರ್ಡಾನ್​ ಸಂಸತ್​ ಕಲಾಪದ ವೇಳೆ ಹೊಡೆದಾಡಿಕೊಂಡ ಸಂಸದರು; ವೈರಲ್ ಆಯ್ತು ವಿಡಿಯೋ
ಜೋರ್ಡಾನ್​ ಸಂಸದರ ಹೊಡೆದಾಟ
TV9 Web
| Edited By: |

Updated on: Dec 29, 2021 | 2:15 PM

Share

ಜೋರ್ಡಾನ್: ಜನಪ್ರತಿನಿಧಿಗಳಾಗಿ ಸಾರ್ವಜನಿಕ ಸಮಸ್ಯೆಗಳಿಗೆ ಧ್ವನಿಯಾಗಬೇಕಾದ ರಾಜಕಾರಣಿಗಳೇ ಜೋರ್ಡಾನ್ ಸಂಸತ್​ನಲ್ಲಿ ಹೊಡೆದಾಡಿಕೊಂಡಿರುವ ಆಘಾತಕಾರಿ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ. ಈ ಹಿಂದೆ ಕರ್ನಾಟಕದ ವಿಧಾನಸಭೆಯಲ್ಲೂ ಇದೇ ರೀತಿ ಎರಡು ಪಕ್ಷದವರು ಸದನದೊಳಗೆ ಹೊಡೆದಾಡಿಕೊಂಡ ವಿಡಿಯೋ ವೈರಲ್ ಆಗಿತ್ತು. ಅದೇ ರೀತಿಯ ಘಟನೆ ಜೋರ್ಡಾನ್ ಸಂಸತ್​ನಲ್ಲಿ ನಡೆದಿದ್ದು, ಸಂಸದರು ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಜೋರ್ಡಾನ್ ಸಂಸತ್ತಿನಲ್ಲಿ ಸಾಂವಿಧಾನಿಕ ಸುಧಾರಣೆಗಳ ಬಗ್ಗೆ ಚರ್ಚೆ ಮಾಡುತ್ತಿದ್ದ ಸಂದರ್ಭದಲ್ಲಿ ಈ ಗಲಾಟೆ ನಡೆದಿದೆ. ವರದಿಗಳ ಪ್ರಕಾರ, ದೇಶದ ಸಂವಿಧಾನದ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ಗದ್ದಲ ನಡೆದಿದೆ. ಅದರ ನಂತರ ಸಂಸದರು ಪರಸ್ಪರ ಗುದ್ದಾಡುತ್ತಾ ಮತ್ತು ತಳ್ಳುತ್ತಾ, ಬಾಯಿಗೆ ಬಂದಂತೆ ಬೈದುಕೊಳ್ಳುತ್ತಾ ಸಂಸತ್​ ಕಲಾಪವನ್ನು ಅಸ್ತವ್ಯಸ್ತಗೊಳಿಸಿದರು.

ಜೋರ್ಡಾನ್ ಸಂಸತ್ತಿನಲ್ಲಿ ಇಂದು ಸಾಂವಿಧಾನಿಕ ಸುಧಾರಣೆಗಳ ಕುರಿತು ನೇರ ಪ್ರಸಾರದ ಚರ್ಚೆಯ ಸಂದರ್ಭದಲ್ಲಿ ಸಂಸದರು ಕೈ ಕೈ ಮಿಲಾಯಿಸಿಕೊಂಡ ಘಟನೆ ನಡೆಯಿತು. ಇಂದಿನ ಕಲಾಪದಲ್ಲಿ ಹಲವಾರು ಜನಪ್ರತಿನಿಧಿಗಳು ಕರಡು ತಿದ್ದುಪಡಿಯನ್ನು ಚರ್ಚಿಸಿದ್ದಾರೆ. ಆದರೆ ಜೋರ್ಡಾನ್‌ನ ರಾಜಧಾನಿ ಅಮ್ಮಾನ್‌ನಲ್ಲಿ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ನಡೆದ ಬಿಸಿ ಚರ್ಚೆಯ ಸಂದರ್ಭದಲ್ಲಿ ಸಂಸದರು ಕೋಪದಿಂದ ಈ ತಿದ್ದುಪಡಿ ‘ನಿಷ್ಪ್ರಯೋಜಕ’ ಎಂದು ಕೂಗಿದರು. ಆ ದೃಶ್ಯ ಅಲ್-ಮಮಲಕಾ ದೂರದರ್ಶನ ಚಾನೆಲ್‌ನಲ್ಲಿ ನೇರ ಪ್ರಸಾರವಾಯಿತು. ನಂತರ ಸಂಸದರು ಪರಸ್ಪರ ಮೈ ಮುಟ್ಟಿಕೊಂಡು ಹೊಡೆದಾಡಿಕೊಂಡ ಘಟನೆಯೂ ನಡೆಯಿತು.

ಜೋರ್ಡಾನ್​ ಸಂಸದರ ಹೊಡೆದಾಟ

ಈ ವಿಡಿಯೋ ಕ್ಲಿಪ್ ಅನ್ನು ಟ್ವಿಟ್ಟರ್‌ನಲ್ಲಿ 60,000ಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ. ತಳ್ಳಾಡುತ್ತಾ, ಹೊಡೆದಾಡಿಕೊಂಡು, ನಿಂದಿಸಿಕೊಳ್ಳುತ್ತಿರುವ ಸಂಸದರ ವಿಡಿಯೋಗೆ ಅನೇಕರು ಛೀಮಾರಿ ಹಾಕಿದ್ದಾರೆ. ಈ ಹೊಡೆದಾಟದಲ್ಲಿ ಓರ್ವ ಸಂಸದ ಕೆಳಗೆ ಬಿದ್ದ ಘಟನೆಯೂ ನಡೆಯಿತು. ಬಳಿಕ ಅಧಿವೇಶನವನ್ನು ನಾಳೆಗೆ ಮುಂದೂಡುವಂತೆ ಒತ್ತಾಯಿಸಲಾಯಿತು.

ಡೈಲಿ ಮೇಲ್ ವರದಿಯ ಪ್ರಕಾರ, ಸಂಸತ್ತಿನ ಸ್ಪೀಕರ್ ಅಬ್ದುಲ್ ಕರೀಮ್ ದುಗ್ಮಿ ಮತ್ತು ಡೆಪ್ಯೂಟಿ ಸುಲೇಮಾನ್ ಅಬು ಯಾಹ್ಯಾ ನಡುವೆ ಜಗಳ ನಡೆದಿದೆ. ಈ ಹೊಡೆದಾಟದಲ್ಲಿ ಯಾರಿಗೂ ತೀವ್ರವಾದ ಗಾಯಗಳಾಗಿಲ್ಲ. ಜೋರ್ಡಾನ್‌ನ ಸಂವಿಧಾನವನ್ನು 1952ರಿಂದ 29 ಬಾರಿ ತಿದ್ದುಪಡಿ ಮಾಡಲಾಗಿದೆ. ರಾಜಮನೆತನದ ಆಯೋಗದಿಂದ ಈ ವರ್ಷ ಸಂವಿಧಾನಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಗಳು ರಾಷ್ಟ್ರದ ಸಂಸದರಿಗೆ ತಮ್ಮ ಪ್ರಧಾನಿಯನ್ನು ಆಯ್ಕೆ ಮಾಡುವ ಅಧಿಕಾರವನ್ನು ನೀಡುತ್ತವೆ. ಆದಾಗ್ಯೂ, ತಿದ್ದುಪಡಿಗಳು ರಾಜನ ಅಧಿಕಾರವನ್ನು ಇನ್ನಷ್ಟು ಹೆಚ್ಚಿಸುತ್ತವೆ ಎಂದು ವಿಮರ್ಶಕರು ಹೇಳುತ್ತಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಮಂಡಿ‌ ನೋವು: ಪ್ರಧಾನಿಯನ್ನೇ ಬದಲಾಯಿಸದ ನಾವು ಸಿಎಂ ಬದಲಾಯಿಸ್ತೇವಾ? -ಸಂಸದ ಪ್ರತಾಪ್‌

ಎಂಎಸ್​ಪಿ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ; ಸಹೋದ್ಯೋಗಿ ಸಂಸದರ ಬಗ್ಗೆ ವ್ಯಂಗ್ಯವಾಡಿದ ಬಿಜೆಪಿ ಸಂಸದ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!