AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಗಿ ಭದ್ರತೆಯನ್ನು ಭೇದಿಸಿ ರಾಣಿ ಎಲಿಜಬೆತ್ ಶವಪೆಟ್ಟಿಗೆಯ ಕಡೆ ಓಡಿದ ವ್ಯಕ್ತಿ; ವಿಡಿಯೋ ವೈರಲ್

ಆ ವ್ಯಕ್ತಿ ಬಾರ್ಡರ್​​ನಿಂದ ಹೊರಬಂದು, ಶವಪೆಟ್ಟಿಗೆಯನ್ನು ಮುಟ್ಟುವ ಮೊದಲು ಕ್ಯಾಟಫಾಲ್ಕ್‌ನ ಮೆಟ್ಟಿಲುಗಳ ಬಳಿ ಓಡಿಹೋದ. ಆಗ ಪೊಲೀಸರು ಆತನನ್ನು ಹಿಡಿದು ನೆಲಕ್ಕೆ ತಳ್ಳಿದ್ದಾರೆ. ನಂತರ ಆತನನ್ನು ಬಂಧಿಸಿದ್ದಾರೆ.

Viral Video: ಬಿಗಿ ಭದ್ರತೆಯನ್ನು ಭೇದಿಸಿ ರಾಣಿ ಎಲಿಜಬೆತ್ ಶವಪೆಟ್ಟಿಗೆಯ ಕಡೆ ಓಡಿದ ವ್ಯಕ್ತಿ; ವಿಡಿಯೋ ವೈರಲ್
ರಾಣಿ ಎಲಿಜಬೆತ್ ಶವಪೆಟ್ಟಿಗೆ
TV9 Web
| Edited By: |

Updated on: Sep 17, 2022 | 12:38 PM

Share

ಲಂಡನ್: ಬ್ರಿಟನ್ ರಾಣಿ ಎಲಿಜಬೆತ್ (Queen Elizabeth) ಮೃತಪಟ್ಟಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಜಗತ್ತಿನ ಅನೇಕ ರಾಷ್ಟ್ರಗಳಿಂದ ಗಣ್ಯರು ಪಾಲ್ಗೊಂಡಿದ್ದರು. ವೆಸ್ಟ್‌ಮಿನ್‌ಸ್ಟರ್ ಹಾಲ್‌ನಲ್ಲಿ ರಾಣಿ ಎಲಿಜಬೆತ್ ಅವರ ಶವಪೆಟ್ಟಿಗೆಯ ಕಡೆಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿರುವ ಆಘಾತಕಾರಿ ಘಟನೆಯ ಹೊಸ ವೀಡಿಯೊ ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ.

ದಿ ಗಾರ್ಡಿಯನ್ ಪ್ರಕಾರ, ಆ ವ್ಯಕ್ತಿ ಬಾರ್ಡರ್​​ನಿಂದ ಹೊರಬಂದು, ಶವಪೆಟ್ಟಿಗೆಯನ್ನು ಮುಟ್ಟುವ ಮೊದಲು ಕ್ಯಾಟಫಾಲ್ಕ್‌ನ ಮೆಟ್ಟಿಲುಗಳ ಬಳಿ ಓಡಿಹೋದ. ಆಗ ಪೊಲೀಸರು ಆತನನ್ನು ಹಿಡಿದು ನೆಲಕ್ಕೆ ತಳ್ಳಿದ್ದಾರೆ. ನಂತರ ಆತನನ್ನು ಬಂಧಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಅಲ್ಲಿದ್ದ ಜನರು ಭಯಭೀತರಾಗಿ ನೋಡುತ್ತಿರುವುದನ್ನು ನೋಡಬಹುದು. ಆಗ ಪೊಲೀಸ್ ಅಧಿಕಾರಿಗಳು ಅವನನ್ನು ಹಾಲ್‌ನಿಂದ ಹೊರಹಾಕುವ ಮೊದಲು ಅವರನ್ನು ನೆಲಕ್ಕೆ ಹಾಕಿ ಹೊಡೆದಿದ್ದಾರೆ.

ಇದನ್ನೂ ಓದಿ: Queen Elizabeth II Funeral: ಬ್ರಿಟನ್ ರಾಣಿ ಎಲಿಜಬೆತ್ II ಅಂತ್ಯಕ್ರಿಯೆ: ಯಾರ್ಯಾರು ಭಾಗಿ?

ರಾಣಿ ಎಲಿಜಬೆತ್ ಶವ ಪೆಟ್ಟಿಗೆಯ ಬಳಿ ಈ ಘಟನೆ ನಡೆದಿದೆ. ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಸಂಸದೀಯ ಮತ್ತು ರಾಜತಾಂತ್ರಿಕ ಸಂರಕ್ಷಣಾ ಕಮಾಂಡ್ ಒಬ್ಬ ವ್ಯಕ್ತಿಯನ್ನು ವೆಸ್ಟ್‌ಮಿನಿಸ್ಟರ್ ಹಾಲ್‌ನಲ್ಲಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಆ ವ್ಯಕ್ತಿಯನ್ನು ಸಾರ್ವಜನಿಕ ಸುವ್ಯವಸ್ಥೆ ಕಾಯಿದೆಯಡಿಯಲ್ಲಿ ಬಂಧಿಸಲಾಗಿದೆ.

2022ರ ಸೆಪ್ಟೆಂಬರ್ 12ರಂದು ಸೋಮವಾರ ಮಧ್ಯಾಹ್ನ 2.50ರ ಸುಮಾರಿಗೆ ರಾಯಲ್ ಮೈಲ್‌ನಲ್ಲಿ ಶಾಂತಿ ಉಲ್ಲಂಘನೆಗೆ ಸಂಬಂಧಿಸಿದಂತೆ 22 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಶಾಂತಿಯ ಉಲ್ಲಂಘನೆಯು ಅವ್ಯವಸ್ಥೆಯ ನಡವಳಿಕೆಯಾಗಿದೆ. ಇದು ಸ್ಕಾಟ್ಲೆಂಡ್‌ನಲ್ಲಿ 12 ತಿಂಗಳ ಜೈಲು ಅಥವಾ 5,000 ಪೌಂಡ್‌ಗಳವರೆಗೆ ದಂಡವನ್ನು ವಿಧಿಸಬಹುದು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ
2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ