Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಲಂಬಿಯಾದಲ್ಲಿ ಗೂಳಿ ಕಾಳಗದ ವೇಳೆ ಕುಸಿದ ಪ್ರೇಕ್ಷಕರ ಗ್ಯಾಲರಿ; 4 ಜನ ಸಾವು, ನೂರಾರು ಮಂದಿಗೆ ಗಾಯ

ಟೋಲಿಮಾ ರಾಜ್ಯದ ಎಲ್ ಎಸ್ಪಿನಾಲ್ ನಗರದ ಕ್ರೀಡಾಂಗಣದಲ್ಲಿ "ಕೊರಲೆಜಾ" ಎಂಬ ಸಾಂಪ್ರದಾಯಿಕ ಗೂಳಿ ಕಾಳಗದ ಕಾರ್ಯಕ್ರಮದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ. ಪ್ರೇಕ್ಷಕರ ಗ್ಯಾಲರಿ ಕುಸಿದು ಬೀಳುತ್ತಿರುವ ವಿಡಿಯೋ ವೈರಲ್ ಆಗಿದೆ.

Viral Video: ಕೊಲಂಬಿಯಾದಲ್ಲಿ ಗೂಳಿ ಕಾಳಗದ ವೇಳೆ ಕುಸಿದ ಪ್ರೇಕ್ಷಕರ ಗ್ಯಾಲರಿ; 4 ಜನ ಸಾವು, ನೂರಾರು ಮಂದಿಗೆ ಗಾಯ
Image Credit source: India.com
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 27, 2022 | 2:13 PM

ಬೊಗೋಟಾ: ಸೆಂಟ್ರಲ್ ಕೊಲಂಬಿಯಾದಲ್ಲಿ ನಡೆದ ಗೂಳಿ ಕಾಳಗದ (Bull Fight) ವೇಳೆ ಸುತ್ತಲೂ ಪ್ರೇಕ್ಷಕರು ಕುಳಿತಿದ್ದ ದೊಡ್ಡ ಸ್ಟ್ಯಾಂಡ್‌ನ ಒಂದು ಭಾಗ ಕುಸಿದು ಬಿದ್ದಿದೆ. ಇದರ ಪರಿಣಾಮವಾಗಿ ವೀಕ್ಷಕರು ನೆಲಕ್ಕೆ ಬಿದ್ದಿದ್ದು, ಪ್ರೇಕ್ಷಕರ ಗ್ಯಾಲರಿಯ ಅವಶೇಷಗಳಡಿ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೋಲಿಮಾ ರಾಜ್ಯದ ಎಲ್ ಎಸ್ಪಿನಾಲ್ ನಗರದ ಕ್ರೀಡಾಂಗಣದಲ್ಲಿ “ಕೊರಲೆಜಾ” ಎಂಬ ಸಾಂಪ್ರದಾಯಿಕ ಗೂಳಿ ಕಾಳಗದ ಕಾರ್ಯಕ್ರಮದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ. ಇದರಲ್ಲಿ ಜನರು ಗೂಳಿಗಳನ್ನು ಕಾಳಗಕ್ಕೆ ಬಿಡಲು ರಿಂಗ್ ಪ್ರವೇಶಿಸುತ್ತಾರೆ. ಬುಲ್‌ಫೈಟ್‌ನ ಸಮಯದಲ್ಲಿ ತೆಗೆದ ವೀಡಿಯೋಗಳಲ್ಲಿ ಯಾವ ರೀತಿ ಪ್ರೇಕ್ಷಕರು ಕುಳಿತಿದ್ದ ಸ್ಟ್ಯಾಂಡ್‌ಗಳ (ಗ್ಯಾಲರಿ) ಕುಸಿದು ಬಿದ್ದಿದೆ ಎಂಬುದು ದಾಖಲಾಗಿದೆ.

ಸಾಕಷ್ಟು ಜನರು ಈ ಘಟನೆಯಲ್ಲಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಟೋಲಿಮಾ ಗವರ್ನರ್ ಜೋಸ್ ರಿಕಾರ್ಡೊ ಒರೊಜ್ಕೊ ಸ್ಥಳೀಯ ಬ್ಲೂ ರೇಡಿಯೊಗೆ ತಿಳಿಸಿದ್ದಾರೆ. ಈ ಘಟನೆಯಲ್ಲಿ ಸದ್ಯಕ್ಕೆ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು ಅಪ್ರಾಪ್ತ ವಯಸ್ಕರಿದ್ದಾರೆ.

ಇದನ್ನೂ ಓದಿ: Viral Video: ತಡವಾಗಿ ಬಂದ ಶಿಕ್ಷಕಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಿನ್ಸಿಪಾಲ್; ಶಾಕಿಂಗ್ ವಿಡಿಯೋ ವೈರಲ್

ಕುಸಿದ ಪ್ರೇಕ್ಷಕರ ಗ್ಯಾಲರಿಯಲ್ಲಿ 800 ಜನರು ಕುಳಿತಿದ್ದರು. ಸದ್ಯಕ್ಕೆ ನಾಲ್ವರು ಸಾವನನ್ಪ್ಪಿದ್ದು, ಇನ್ನೂ ನಾಲ್ಕು ಜನರು ತೀವ್ರ ನಿಗಾದಲ್ಲಿದ್ದಾರೆ. ಇಬ್ಬರು ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು