AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಲಂಬಿಯಾದಲ್ಲಿ ಗೂಳಿ ಕಾಳಗದ ವೇಳೆ ಕುಸಿದ ಪ್ರೇಕ್ಷಕರ ಗ್ಯಾಲರಿ; 4 ಜನ ಸಾವು, ನೂರಾರು ಮಂದಿಗೆ ಗಾಯ

ಟೋಲಿಮಾ ರಾಜ್ಯದ ಎಲ್ ಎಸ್ಪಿನಾಲ್ ನಗರದ ಕ್ರೀಡಾಂಗಣದಲ್ಲಿ "ಕೊರಲೆಜಾ" ಎಂಬ ಸಾಂಪ್ರದಾಯಿಕ ಗೂಳಿ ಕಾಳಗದ ಕಾರ್ಯಕ್ರಮದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ. ಪ್ರೇಕ್ಷಕರ ಗ್ಯಾಲರಿ ಕುಸಿದು ಬೀಳುತ್ತಿರುವ ವಿಡಿಯೋ ವೈರಲ್ ಆಗಿದೆ.

Viral Video: ಕೊಲಂಬಿಯಾದಲ್ಲಿ ಗೂಳಿ ಕಾಳಗದ ವೇಳೆ ಕುಸಿದ ಪ್ರೇಕ್ಷಕರ ಗ್ಯಾಲರಿ; 4 ಜನ ಸಾವು, ನೂರಾರು ಮಂದಿಗೆ ಗಾಯ
Image Credit source: India.com
TV9 Web
| Edited By: |

Updated on: Jun 27, 2022 | 2:13 PM

Share

ಬೊಗೋಟಾ: ಸೆಂಟ್ರಲ್ ಕೊಲಂಬಿಯಾದಲ್ಲಿ ನಡೆದ ಗೂಳಿ ಕಾಳಗದ (Bull Fight) ವೇಳೆ ಸುತ್ತಲೂ ಪ್ರೇಕ್ಷಕರು ಕುಳಿತಿದ್ದ ದೊಡ್ಡ ಸ್ಟ್ಯಾಂಡ್‌ನ ಒಂದು ಭಾಗ ಕುಸಿದು ಬಿದ್ದಿದೆ. ಇದರ ಪರಿಣಾಮವಾಗಿ ವೀಕ್ಷಕರು ನೆಲಕ್ಕೆ ಬಿದ್ದಿದ್ದು, ಪ್ರೇಕ್ಷಕರ ಗ್ಯಾಲರಿಯ ಅವಶೇಷಗಳಡಿ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೋಲಿಮಾ ರಾಜ್ಯದ ಎಲ್ ಎಸ್ಪಿನಾಲ್ ನಗರದ ಕ್ರೀಡಾಂಗಣದಲ್ಲಿ “ಕೊರಲೆಜಾ” ಎಂಬ ಸಾಂಪ್ರದಾಯಿಕ ಗೂಳಿ ಕಾಳಗದ ಕಾರ್ಯಕ್ರಮದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ. ಇದರಲ್ಲಿ ಜನರು ಗೂಳಿಗಳನ್ನು ಕಾಳಗಕ್ಕೆ ಬಿಡಲು ರಿಂಗ್ ಪ್ರವೇಶಿಸುತ್ತಾರೆ. ಬುಲ್‌ಫೈಟ್‌ನ ಸಮಯದಲ್ಲಿ ತೆಗೆದ ವೀಡಿಯೋಗಳಲ್ಲಿ ಯಾವ ರೀತಿ ಪ್ರೇಕ್ಷಕರು ಕುಳಿತಿದ್ದ ಸ್ಟ್ಯಾಂಡ್‌ಗಳ (ಗ್ಯಾಲರಿ) ಕುಸಿದು ಬಿದ್ದಿದೆ ಎಂಬುದು ದಾಖಲಾಗಿದೆ.

ಸಾಕಷ್ಟು ಜನರು ಈ ಘಟನೆಯಲ್ಲಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಟೋಲಿಮಾ ಗವರ್ನರ್ ಜೋಸ್ ರಿಕಾರ್ಡೊ ಒರೊಜ್ಕೊ ಸ್ಥಳೀಯ ಬ್ಲೂ ರೇಡಿಯೊಗೆ ತಿಳಿಸಿದ್ದಾರೆ. ಈ ಘಟನೆಯಲ್ಲಿ ಸದ್ಯಕ್ಕೆ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು ಅಪ್ರಾಪ್ತ ವಯಸ್ಕರಿದ್ದಾರೆ.

ಇದನ್ನೂ ಓದಿ: Viral Video: ತಡವಾಗಿ ಬಂದ ಶಿಕ್ಷಕಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಿನ್ಸಿಪಾಲ್; ಶಾಕಿಂಗ್ ವಿಡಿಯೋ ವೈರಲ್

ಕುಸಿದ ಪ್ರೇಕ್ಷಕರ ಗ್ಯಾಲರಿಯಲ್ಲಿ 800 ಜನರು ಕುಳಿತಿದ್ದರು. ಸದ್ಯಕ್ಕೆ ನಾಲ್ವರು ಸಾವನನ್ಪ್ಪಿದ್ದು, ಇನ್ನೂ ನಾಲ್ಕು ಜನರು ತೀವ್ರ ನಿಗಾದಲ್ಲಿದ್ದಾರೆ. ಇಬ್ಬರು ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್