AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್ ಓರ್ವ ಭಯೋತ್ಪಾದಕ, ವಿಶ್ವಸಂಸ್ಥೆಯಿಂದ ರಷ್ಯಾವನ್ನು ಹೊರಗಟ್ಟಿ: ಝೆಲೆನ್ಸ್ಕಿ ಆಗ್ರಹ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಓರ್ವ ಭಯೋತ್ಪಾದಕ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ವಿಶ್ವಸಂಸ್ಥೆಯಿಂದ ರಷ್ಯಾವನ್ನು ಹೊರಗಿಡುವಂತೆ ಆಗ್ರಹಿಸಿದ್ದಾರೆ.

ಪುಟಿನ್ ಓರ್ವ ಭಯೋತ್ಪಾದಕ, ವಿಶ್ವಸಂಸ್ಥೆಯಿಂದ ರಷ್ಯಾವನ್ನು ಹೊರಗಟ್ಟಿ: ಝೆಲೆನ್ಸ್ಕಿ ಆಗ್ರಹ
Volodymyr Zelensky and Vladimir Putin
TV9 Web
| Edited By: |

Updated on: Jun 29, 2022 | 12:44 PM

Share

ಕೀವ್​​: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಓರ್ವ ಭಯೋತ್ಪಾದಕ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ವಿಶ್ವಸಂಸ್ಥೆಯಿಂದ ರಷ್ಯಾವನ್ನು ಹೊರಗಿಡುವಂತೆ ಆಗ್ರಹಿಸಿದ್ದಾರೆ. ಉಕ್ರೇನ್​ನ ನಗರವಾದ ಕ್ರೆಮೆನ್​ಚುಕ್​ನ ಸಾವಿರಕ್ಕೂ ಹೆಚ್ಚು ಮಂದಿ ಇದ್ದ ಶಾಪಿಂಗ್​ ಮಾಲ್​ ಮೇಲೆ ರಷ್ಯಾವು ಕ್ಷಿಪಣಿ ದಾಳಿ ನಡೆಸಿ ಕನಿಷ್ಠ 18 ಮಂದಿ ಸಾವನ್ನಪ್ಪಿದ ಎರಡು ದಿನಗಳ ಬಳಿಕ ಝೆಲೆನ್ಸ್ಕಿ ಈ ಮಾತುಗಳನ್ನಾಡಿದ್ದಾರೆ.

ರಷ್ಯಾ ಹಾಗೂ ಉಕ್ರೇನ್​ ನಡುವೆ ಬಹಳ ದಿನಗಳಿಂದ ಯುದ್ಧ ನಡೆಯುತ್ತಿದ್ದು, ಇದುವರೆಗೆ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ಸ್ಥಳಾಂತರಗೊಂಡಿದ್ದಾರೆ. ಹಾಗೂ ಯುದ್ಧಗ್ರಸ್ಥ ಪ್ರದೇಶದಿಂದ ಪಲಾಯನ ಮಾಡುವಂತೆ ಒತ್ತಾಯಿಸಲಾಗಿತ್ತು.

ಉಕ್ರೇನ್ ನೆಲದಲ್ಲಿ ರಷ್ಯಾದ ಆಕ್ರಮಣಕಾರರ ಕ್ರಮಗಳನ್ನು ತನಿಖೆ ಮಾಡಲು ಹಾಗೂ ದೇಶವನ್ನು ಹೊಣೆಗಾರರನ್ನಾಗಿ ಮಾಡಲು ಅಂತಾರಾಷ್ಟ್ರೀಯ ನ್ಯಾಯಮಂಡಳಿಯನ್ನು ಸ್ಥಾಪಿಸುವಂತೆ ಝೆಲೆನ್ಸ್ಕಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ

193 ಸದಸ್ಯ ರಾಷ್ಟ್ರಗಳನ್ನು ಹೊಂದಿರುವ ವಿಶ್ವಸಂಸ್ಥೆಯಿಂದ ರಷ್ಯಾವನ್ನು ಹೊರಹಾಕುವಂತೆ ಝೆಲೆನ್​ಸ್ಕಿ ಒತ್ತಾಯಿಸಿದ್ದಾರೆ. ಯುಎನ್ ಚಾರ್ಟರ್ನ ಆರ್ಟಿಕಲ್ 6 ಅನ್ನು ಉಲ್ಲೇಖಿಸಿ, ಪ್ರಸ್ತುತ ಚಾರ್ಟರ್ನಲ್ಲಿರುವ ತತ್ವಗಳನ್ನು ನಿರಂತರವಾಗಿ ಉಲ್ಲಂಘಿಸಿದ ಸದಸ್ಯರನ್ನು ಶಿಫಾರಸಿನ ಮೇರೆಗೆ ಸಾಮಾನ್ಯ ಸಭೆಯ ಸಂಘಟನೆಯಿಂದ ಹೊರಹಾಕಬಹುದು ಎಂದು ಹೇಳಿದ್ದಾರೆ.

ರಷ್ಯಾ ಇನ್ನಷ್ಟು ಹತ್ಯೆ ಮಾಡದಂತೆ ತಡೆಯಲು ತಕ್ಷಣವೇ ಕ್ರಮಗಳನ್ನು ಕೈಗೊಳ್ಳಬೇಕಿದೆ. ವಿಶ್ವಸಂಸ್ಥೆಯು ವಿಶೇಷ ಪ್ರತಿನಿಧಿ ಅಥವಾ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯನ್ನು ಕಳುಹಿಸುವಂತೆ ಸಲಹೆ ನೀಡಿದರು.

ರಷ್ಯಾದ ಉಚ್ಛಾಟನೆಯು ವಾಸ್ತವಿಕವಾಗಿ ಅಸಾಧ್ಯವಾಗಿದೆ. ವಿಶ್ವಸಂಸ್ಥೆಯ ಶಾಶ್ವತ ಸದಸ್ಯನಾಗಿರುವ ರಷ್ಯಾವನ್ನು ವಿಶ್ವಸಂಸ್ಥೆಯಿಂದ ಹೊರ ಹಾಕುವುದು ಅಸಾಧ್ಯವಾಗಿದೆ. ಏಕೆಂದರೆ ರಷ್ಯಾಗೆ ವಿಶ್ವಸಂಸ್ಥೆಯಲ್ಲಿ ವಿಟೋ ಅಧಿಕಾರ ಇರುವುದರಿಂದ ಈ ನಿರ್ಧಾರ ಕೈಗೊಳ್ಳುವುದು ಅಸಾಧ್ಯವಾಗಿದೆ.

ಕ್ರೆಮೆನ್​ಚುಕ್​ನ ಆಗ್ನೇಯ ಭಾಗದಲ್ಲಿರುವ ಡ್ನಿಪ್ರೊಪೆಟ್ರೋವ್ಸ್ಕ್​ ಪ್ರದೇಶದಲ್ಲಿ ರಷ್ಯಾದ ಮತ್ತೊಂದು ಕ್ಷಿಪಣಿ ದಾಳಿಯನ್ನು ವರದಿ ಮಾಡಿದೆ. ಡಿನಿಪ್ರೋ ನಗರದಲ್ಲಿ ಅವಶೇಷಗಳಡಿ ಸಿಲುಕಿರುವ ಜನರಿಗಾಗಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂಬುದು ತಿಳಿದುಬಂದಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?