AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vladimir Putin: ಮತ್ತೆ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿಯ ಸುಳಿವು ನೀಡಿದ ರಷ್ಯಾ ಅಧ್ಯಕ್ಷ ಪುಟಿನ್

Russia- Ukraine War: ಪೂರ್ವ ಉಕ್ರೇನ್‌ನ ಡಾನ್‌ಬಾಸ್ ಪ್ರದೇಶವನ್ನು ವಿಮೋಚನೆ ಮಾಡುವುದು ತನ್ನ ಗುರಿಯಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

Vladimir Putin: ಮತ್ತೆ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿಯ ಸುಳಿವು ನೀಡಿದ ರಷ್ಯಾ ಅಧ್ಯಕ್ಷ ಪುಟಿನ್
ವ್ಲಾಡಿಮಿರ್ ಪುಟಿನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 21, 2022 | 12:49 PM

ಲಂಡನ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೆ ಉಕ್ರೇನ್ (Ukraine) ಮೇಲೆ ಅಣ್ವಸ್ತ್ರ ದಾಳಿ ನಡೆಸುವ ಸುಳಿವು ನೀಡಿದ್ದಾರೆ. ಒಂದುವೇಳೆ ಅವರು ಪರಮಾಣು ಬ್ಲ್ಯಾಕ್‌ಮೇಲ್ (Nuclear Blackmail) ಎಂದು ಕರೆಯುವುದನ್ನು ಮುಂದುವರೆಸಿದರೆ ಮಾಸ್ಕೋ (Moscow) ತನ್ನ ಎಲ್ಲಾ ಅಗಾಧವಾದ ಶಸ್ತ್ರಾಸ್ತ್ರಗಳ ಪ್ರದರ್ಶನ ಮಾಡಲಿದೆ ಎಂದು ಪುಟಿನ್ ಎಚ್ಚರಿಸಿದ್ದಾರೆ. ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಯ ಬಗ್ಗೆ ಭಯವಿದ್ದರೆ ನಾವು ನಮ್ಮ ಜನರನ್ನು ರಕ್ಷಿಸಲು ನಾವು ಲಭ್ಯವಿರುವ ಎಲ್ಲಾ ವಿಧಾನಗಳನ್ನು ಬಳಸುತ್ತೇವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಹೇಳಿದ್ದಾರೆ.

ತಾಯ್ನಾಡಿನ ಸಾರ್ವಭೌಮತ್ವವನ್ನು ರಕ್ಷಿಸಲು ಮಿಲಿಟರಿಯನ್ನು ಭಾಗಶಃ ಸಜ್ಜುಗೊಳಿಸುವ ಕುರಿತು ಸಾಮಾನ್ಯ ಸಿಬ್ಬಂದಿಯ ನಿರ್ಧಾರವನ್ನು ಬೆಂಬಲಿಸುವುದು ಅಗತ್ಯವೆಂದು ನಾನು ಅಂದುಕೊಂಡಿದ್ದೇನೆ. ಪೂರ್ವ ಉಕ್ರೇನ್‌ನ ಡೊನ್‌ಬಾಸ್ ಕೈಗಾರಿಕಾ ಹೃದಯ ಪ್ರದೇಶವನ್ನು ವಿಮೋಚನೆ ಮಾಡುವುದು ತನ್ನ ಗುರಿಯಾಗಿದೆ. ಪಶ್ಚಿಮವು ಪರಮಾಣು ಬ್ಲ್ಯಾಕ್‌ಮೇಲ್‌ನಲ್ಲಿ ತೊಡಗಿದೆ. ಆದರೆ ಅದಕ್ಕೆ ಪ್ರತ್ಯುತ್ತರ ನೀಡಲು ರಷ್ಯಾದ ಬಳಿ ಸಾಕಷ್ಟು ಶಸ್ತ್ರಾಸ್ತ್ರಗಳಿವೆ ಎಂದು ಪುಟಿನ್ ಹೇಳಿದ್ದಾರೆ.

ಪೂರ್ವ ಉಕ್ರೇನ್‌ನ ಡೊನ್‌ಬಾಸ್ ಪ್ರದೇಶವನ್ನು ವಿಮೋಚನೆಗೊಳಿಸುವುದು ನನ್ನ ಗುರಿಯಾಗಿದೆ ಎಂದು ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ರಷ್ಯಾದ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ಹೆಚ್ಚಿನ ಜನರು ಕೈವ್‌ನಿಂದ ಆಳಲು ಬಯಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Russia Ukraine War: ಉಕ್ರೇನ್​ ಮರುವಶಪಡಿಸಿಕೊಂಡ ನಗರದ ಸಾಮೂಹಿಕ ಸಮಾಧಿಯಲ್ಲಿ 440 ಶವಗಳು ಪತ್ತೆ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬುಧವಾರ ಭಾಗಶಃ ಮಿಲಿಟರಿ ಸಜ್ಜುಗೊಳಿಸುವಿಕೆಯನ್ನು ಘೋಷಿಸಿದ್ದಾರೆ. ರಷ್ಯಾದ ಸೇನಾ ಪಡೆಗಳು ಉಕ್ರೇನಿಯನ್ ಪ್ರತಿದಾಳಿಯೊಂದಿಗೆ ಹೋರಾಡುತ್ತಿವೆ. ಅದು ಕೆಲವು ಆಕ್ರಮಿತ ಪ್ರದೇಶಗಳನ್ನು ಮರಳಿ ಪಡೆದುಕೊಂಡಿದೆ. ಪುಟಿನ್ ತನ್ನ 2 ಮಿಲಿಯನ್ ಮಿಲಿಟರಿ ಮೀಸಲುಗಳ ಭಾಗಶಃ ಸಜ್ಜುಗೊಳಿಸುವಿಕೆಯು ರಷ್ಯಾ ಮತ್ತು ಅದರ ಪ್ರದೇಶಗಳನ್ನು ರಕ್ಷಿಸಲು ಎಂದು ಹೇಳಿದ್ದಾರೆ. ಪಶ್ಚಿಮವು ರಷ್ಯಾವನ್ನು ನಾಶಮಾಡಲು ಬಯಸುತ್ತದೆ ಮತ್ತು ಉಕ್ರೇನ್‌ನಲ್ಲಿ ಶಾಂತಿಯನ್ನು ಬಯಸುವುದಿಲ್ಲ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ: ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ: ಉಕ್ರೇನ್ ಯುದ್ಧದ ಬಗ್ಗೆ ರಷ್ಯಾಕ್ಕೆ ಖಡಕ್ ಸಂದೇಶ ರವಾನಿಸಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್

ಲುಹಾನ್ಸ್ಕ್ ಮತ್ತು ಡೊನೆಟ್ಸ್ಕ್ ಅನ್ನು 2014ರಲ್ಲಿ ಮಾಸ್ಕೋ ಭಾಗಶಃ ವಶಪಡಿಸಿಕೊಂಡ ಡಾನ್ಬಾಸ್ ಪ್ರದೇಶವನ್ನು ರಷ್ಯಾ ಸ್ವತಂತ್ರ ರಾಜ್ಯಗಳೆಂದು ಪರಿಗಣಿಸುತ್ತದೆ. ಉಕ್ರೇನ್ ಮತ್ತು ಪಶ್ಚಿಮವು ಉಕ್ರೇನ್‌ನ ಎಲ್ಲಾ ಭಾಗಗಳನ್ನು ರಷ್ಯಾದ ಪಡೆಗಳು ಅಕ್ರಮವಾಗಿ ಆಕ್ರಮಿಸಿಕೊಂಡಿವೆ. ರಷ್ಯಾ ಈಗ ಡೊನೆಟ್ಸ್ಕ್‌ನ ಸುಮಾರು ಶೇ. 60ರಷ್ಟನ್ನು ಹೊಂದಿದೆ. ಕೆಲವು ತಿಂಗಳುಗಳ ತೀವ್ರ ಹೋರಾಟದ ನಂತರ ಜುಲೈ ವೇಳೆಗೆ ಲುಹಾನ್ಸ್ಕ್ ಅನ್ನು ರಷ್ಯಾ ವಶಪಡಿಸಿಕೊಂಡಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು