Putin on Make in India: ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ರಷ್ಯಾ(Russia) ಹಾಗೂ ಭಾರತ(India)ದ ಸಂಬಂಧಗಳು ಯಾವಾಗಲೂ ಉತ್ತಮವಾಗಿಯೇ ಇದೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿಯೂ ಭಾರತ ಯಾರ ಪರ, ವಿರೋಧವನ್ನು ಮಾಡದೆ ತಟಸ್ಥ ನಿಲುವನ್ನು ತೋರಿತ್ತು.

Putin on Make in India: ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ವ್ಲಾಡಿಮಿರ್ ಪುಟಿನ್-ನರೇಂದ್ರ ಮೋದಿImage Credit source: The Print
Follow us
|

Updated on: Jun 30, 2023 | 10:55 AM

ರಷ್ಯಾ(Russia) ಹಾಗೂ ಭಾರತ(India)ದ ಸಂಬಂಧಗಳು ಯಾವಾಗಲೂ ಉತ್ತಮವಾಗಿಯೇ ಇದೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿಯೂ ಭಾರತ ಯಾರ ಪರ, ವಿರೋಧವನ್ನು ಮಾಡದೆ ತಟಸ್ಥ ನಿಲುವನ್ನು ತೋರಿತ್ತು. ಇದೀಗ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಕ್ ಇನ್ ಇಂಡಿಯಾ(Make In India) ಪರಿಕಲ್ಪನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತಮ ಸ್ನೇಹಿತ ಎಂದು ಬಣ್ಣಿಸಿದ್ದಾರೆ.

ಭಾರತ ಸರ್ಕಾರದ ಮೇಕ್​ ಇನ್ ಇಂಡಿಯಾ ಪರಿಕಲ್ಪನೆಯು ಭಾರತದ ಆರ್ಥಿಕತೆಯ ಮೇಲೆ ನಿಜವಾಗಿಯೂ ಆಳವಾದ ಪರಿಣಾಮ ಬೀರಲಿದೆ ಎಂದು ಹೇಳಿದರು. ಭಾರತದ ಕೆಲವು ಯೋಜನೆಗಳನ್ನು ರಷ್ಯಾದಲ್ಲೂ ಅಳವಡಿಸಿಕೊಳ್ಳುವುದರಿಂದ ಏನಾದರೂ ಹಾನಿಯಾಗಬಹುದೇ ಎಂದು ರಷ್ಯಾದ ಸಚಿವರು ಕಳವಳ ವ್ಯಕ್ತಪಡಿಸಿದ್ದರು.

ಮತ್ತಷ್ಟು ಓದಿ: 9 Years Of PM Modi: ಪ್ರಧಾನಿ ಮೋದಿಯವರ 9 ವರ್ಷಗಳ ಪಯಣ, ಭಾರತದ ಅಭಿವೃದ್ಧಿಗೆ ಕೊಡುಗೆ ನೀಡಿದ 9 ಮಹತ್ವದ ಯೋಜನೆಗಳು ಇಲ್ಲಿವೆ

ಆಗ ಪುಟಿನ್ ಮಾತನಾಡಿ, ಭಾರತವು ಹಲವು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಎಂಬ ಯೋಜನೆ ಆರಂಭಿಸಿತ್ತು, ಈ ಯೋಜನೆಯು ಭಾರತದ ಆರ್ಥಿಕತೆಯ ಮೇಲೆ ತನ್ನ ಪರಿಣಾಮವನ್ನು ತೋರಿಸಿದೆ, ಇದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಅದರಿಂದ ಯಾವುದೇ ಹಾನಿಯಿಲ್ಲ ಎಂದು ಹೇಳಿದ್ದಾರೆ. ವ್ಲಾಡಿಮಿರ್ ಪುಟಿನ್ ರಷ್ಯಾದಲ್ಲಿ ದೇಶೀಯ ಉತ್ಪನ್ನಗಳು ಮತ್ತು ಬ್ರ್ಯಾಂಡ್ಗಳನ್ನು ಪ್ರೋತ್ಸಾಹಿಸಲು ಭಾರತದ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ.

ನಾವು ನಮ್ಮ ಉತ್ಪನ್ನಗಳನ್ನು ಆಧುನೀಕರಿಸಬೇಕು ಮತ್ತು ಅವುಗಳನ್ನು ಹೆಚ್ಚು ಅನುಕೂಲಕರ ಮತ್ತು ಕ್ರಿಯಾತ್ಮಕಗೊಳಿಸುವ ಬಗ್ಗೆ ಯೋಚಿಸಬೇಕು ಎಂದು ಪುಟಿನ್ ಹೇಳಿದರು. ರಷ್ಯಾ ಜೊತೆಗಿನ ಸಂಬಂಧವನ್ನು ರಕ್ಷಣೆಗೆ ಮಾತ್ರ ಸೀಮಿತಗೊಳಿಸಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದರು. ಇದೇ ವೇಳೆ ರಷ್ಯಾ ಜತೆಗಿನ ಆರ್ಥಿಕ ಸಂಬಂಧಗಳ ಬಗ್ಗೆ ಪ್ರಸ್ತಾಪಿಸಿದ ಜೈಶಂಕರ್, ಉಭಯ ದೇಶಗಳ ನಡುವಿನ ಆರ್ಥಿಕ ಸಂಬಂಧವೂ ಸುಧಾರಿಸಿದೆ ಎಂದು ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ